ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸುವುದು ನಮ್ಮ ಉದ್ದೇಶ : ಶಶಿಧರ ಕೆ. ಶೆಟ್ಟಿ


Team Udayavani, Feb 18, 2020, 5:24 PM IST

mumbai-tdy-1

ಮುಂಬಯಿ, ಫೆ. 17: ಸನಾತನ ಧರ್ಮವನ್ನು ಸಂರಕ್ಷಿಸುವ, ಭಾರತೀಯ ಸಂಸ್ಕೃತಿಯನ್ನು ಯುವ ಜನಾಂಗಕ್ಕೆ ಪರಿಚಯಿಸುವ ಧ್ಯೇಯದೊಂದಿಗೆ ನಮ್ಮ ಸಂಸ್ಥೆ ಸ್ಥಾಪನೆಗೊಂಡಿದೆ.

ಭರತನಾಟ್ಯ, ಯಕ್ಷಗಾನ, ಭಜನೆ, ಕ್ರೀಡೆ ಹಾಗೂ ಕರ್ನಾಟದ ವಿವಿಧ ಕಲಾ ಪ್ರಕಾರಗಳನ್ನು ಬೋಧಿಸುವ ತಜ್ಞ ಗುರುಗಳು ಶ್ರೀ ದೇವಿ ಯಕ್ಷಕಲಾ ನಿಲಯದಲ್ಲಿದ್ದಾರೆ . ಗುರು ಮಠದಲ್ಲಿ ವಿದ್ಯೆ ಕಲಿಯುವ ಶಿಷ್ಯರ ಸಂಖ್ಯೆ ಮೂರು ವರ್ಷದ ಅವಧಿಯಲ್ಲಿ 136 ದಾಟಿದೆ. ಸೂಕ್ಷ್ಮ ಮನೋಭಾವನೆಯ ಮಕ್ಕಳಿಗೆ ಸಂಸ್ಕಾರ, ಸಂಪ್ರದಾಯಗಳ ಅರಿವು ಮೂಡಿಸಿದಾಗ ಸನ್ಮಾರ್ಗದ ಸಮಾಜ ನಿರ್ಮಾಣ ಸಾಧ್ಯ ಎಂದು ಸಮಾಜ ಸೇವಕ, ಸಂಘಟಕ, ಉದ್ಯಮಿ, ಶ್ರೀ ದೇವಿ ಯಕ್ಷಕಲಾ ನಿಲಯ ನಲಸೋಪರ-ವಿರಾರ್‌ ಇದರ ಅಧ್ಯಕ್ಷ ಶಶಿಧರ ಕೆ. ಶೆಟ್ಟಿ ತಿಳಿಸಿದರು.

ಫೆ. 15ರಂದು ಅಪರಾಹ್ನ ನಲಸೋಪಾರ ಪಶ್ವಿ‌ಮದ ಎಸ್‌. ಟಿ. ಬಸ್‌ ಡೆಪ್ಪೋ ಸಮೀಪದ ಹೊಟೇಲ್‌ ಗ್ಯಾಲಕ್ಸಿ ಸಭಾಂಗಣದಲ್ಲಿ ಶ್ರೀ ದೇವಿ ಯಕ್ಷಕಲಾ ನಿಲಯ ನಲಸೋಪರ-ವಿರಾರ್‌ ಇದರ 3ನೇ ವಾರ್ಷಿಕೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಠ್ಯೇತರ ಚಟುವಟಿಕೆಗಳಿಂದ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ನಮ್ಮಲ್ಲಿ ಶೇ. 98 ಅಂಕ ಪಡೆದ ವಿದ್ಯಾರ್ಥಿಗಳು ಇದ್ದಾ ರೆ.
ಪ್ರತಿಭೆಗೆ ತಕ್ಕಂತೆ ಬೆಳೆಸಿದರೆ ಆತ್ಮಸ್ಥೆರ್ಯ ವಿಕಾಸನವಾಗಲಿದೆ ಎಂದು ಹೇಳಿದ ಅವರು ಈವರೆಗೆ ಸಹಕರಿಸಿದವರಿಗೆ ಮುಖ್ಯವಾಗಿ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಸಮಾರಂಭವನ್ನು ಉದ್ಘಾಟಿಸಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಮಾತನಾಡಿ, ಶಶಿಧರ ಕೆ. ಶೆಟ್ಟಿ ನೇತೃತ್ವದ ಹೊಟೇಲ್‌ ಗ್ಯಾಲಕ್ಸಿ ಸಭಾಂಗಣ ವಿವಿಧ ಸಮುದಾಯ ಸಂಘಟನೆಗಳನ್ನು ಒಗ್ಗೂಡಿಸುವ ವೇದಿಕೆಯಾಗಿದೆ. ನಾವೆಲ್ಲಾ ಬಂಧು, ನಾವೆಲ್ಲ ಒಂದೇ ಎಂಬ ಸಂದೇಶ ಇಲ್ಲಿ ಪ್ರತಿಧ್ವನಿಸುತ್ತಿದೆ. ಸಮಾನತೆಯಿಂದ ಕೂಡಿ ಬಾಳುವ ಕಲೆ ಶ್ರೀ ದೇವಿ ಯಕ್ಷಕಲಾ ನಿಲಯದಿಂದ ಶಾಶ್ವತವಾಗಲಿ ಎಂದು ಶುಭ ಹಾರೈಸಿದರು.
ಅತಿಥಿಯಾಗಿ ಪಾಲ್ಗೊಂಡ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್‌ ಶೆಟ್ಟಿ ಅವರು ಮಾತನಾಡಿ, ಮಕ್ಕಳ ದೈಹಿಕ, ಮಾನಸಿಕ ಮತ್ತು ಭಾವತ್ಮಕ ಅಂಶಗಳನ್ನು ಅಭಿವೃದ್ದಿ ಪಡಿಸಿ ಸೃಜನ ಶೀಲತೆ, ಸಂಶೋಧನೆ ಮತ್ತು ಕಾಲ್ಪನಿಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಸಾಂಸ್ಕೃತಿಕ ಚಟುವಟಿಕೆಗೆಗಿದೆ. ವಾರದ ನಾಲ್ಕು ದಿನವೂ ಭರಟನಾಟ್ಯ, ಭಜನೆ, ಕ್ರೀಡೆ, ಯಕ್ಷಗಾನ ಇತ್ಯಾದಿಗಳ ತರಭೇತಿ ನೀಡುವ ಈ ಸಂಸ್ಥೆಯು ಸಂಘಟನೆಗೆ ಮಾದರಿಯಾಗಿದೆ ಎಂದರು.

ಇನ್ನೋರ್ವ ಅತಿಥಿ ಬಂಟರ ಸಂಘ ನೂತನ ಶಿಕ್ಷಣ ಯೋಜನೆಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ ಅವರು ಮಾತನಾಡಿ, ಜಗತ್ತಿಗೆ ಬೆಳಕು ತೋರಿಸಿದ ತಂದೆ, ತಾಯಿಗಳ ಆರೈಕೆಯೊಂದಿಗೆ ನಮ್ಮ ದಿನಚರಿ ಪ್ರಾರಂಭವಾಗಬೇಕು. ವೃದ್ಧ ಶ್ರಮಕ್ಕೆ ಸೇರುವ ಆಲೋಚನೆಯನ್ನು ನಮ್ಮ ಮನಸ್ಸಿನಿಂದ ಬೇರು ಸಹಿತ ಕಿತ್ತು ಎಸೆಯಬೇಕು ಎಂದು ನುಡಿದರು.
ಬಂಟ್ಸ್‌ ಸಂಘ ವಸಾಯಿ ಡಹಾಣು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್‌ ಆರ್‌. ಪಕ್ಕಳ ಅವರು ಮಾತನಾಡಿ, ಮಹಾಕಾವ್ಯ, ವೇದ. ಉಪನಿಷತ್ತು, ಪೌರಣಿಕ ಕಥೆಗಳನ್ನು ಸಾರಿದ ಯಕ್ಷಗಾನ ಜ್ಞಾನ ಮಂದಿರವಾಗಿದೆ. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೌಶಲ ಇದರಲ್ಲಿದೆ. ಸಂಸ್ಥೆಯ ಮಕ್ಕಳ ಪ್ರತಿಭೆಯನ್ನು ಕಂಡಾಗ ಸಂತೋಷವಾವಾಗುತ್ತಿದೆ. ಇಂತಹ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಅಗತ್ಯವಾಗಿದೆ ಎಂದರು.

ಉದ್ಯಮಿ ಅಶೋಕ್‌ ಶೆಟ್ಟಿ ಪೆರ್ಮುದೆ, ಬಿಲ್ಲವರ ಅಸೋಸಿಯೇಶನ್‌ ನಲಸೋಪರ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ದಯಾನಂದ ಬೊಂಟ್ರ, ಶ್ರೀ ಮಣಿಕಂಠ ಸೇವಾ ಸಮಿತಿಯ ಗೌರವಾಧ್ಯಕ್ಷ ಶಂಕರ್‌ ಕೆ. ಆಳ್ವ, ವಸಾಯಿ ಡಹಾಣೂ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಾ ಅಶೋಕ್‌ ಶೆಟ್ಟಿ, ಅವರು ಶುಭ ಹಾರೈಸಿ ಮಾತನಾಡಿದರು.

ಜತೆ ಕಾರ್ಯದರ್ಶಿ ಲಯನ್‌ ಕೃಷ್ಣಯ್ಯ ಹೆಗ್ಡೆ ಸ್ವಾಗತಿಸಿದರು. ಸಭಾ ಕಾರ್ಯಕ್ರಮವನ್ನು ಕಾರ್ಯದರ್ಶಿ ಪ್ರವೀಣ್‌ ಶೆಟ್ಟಿ ಕಣಂಜಾರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಲ್ಲಿಕಾ ಪೂಜಾರಿ ನಿರ್ವಹಿಸಿದರು. ಗೌರವ ಅಧ್ಯಕ್ಷ ಶ್ರೀನಿವಾಸ ನಾಯ್ಡು, ಉಪಾಧ್ಯಕ್ಷ ಗೋಪಾಲ್‌ ಕೋಟ್ಯಾನ್‌ ವಿರಾರ್‌, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್‌ ವಿ. ಶೆಟ್ಟಿ, ಕೋಶಾಧಿಕಾರಿ ರಮೇಶ್‌ ಪೂಜಾರಿ, ಜತೆ ಕೋಶಾಧಿಕಾರಿ ಯಶವಂತ್‌ ಪೂಜಾರಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಗಣ್ಯರನ್ನು ಗೌರವಿಸಿದರು. ಸಮಾರಂಭದಲ್ಲಿ ಶ್ರೀ ದೇವಿ ಯಕ್ಷಕಲಾ ನಿಲಯ ನಲಸೋಪರ-ವಿರಾರ್‌ ಇದರ ಯಕ್ಷಗಾನ ಗುರು ನಾಗೇಶ್‌ ಕುಮಾರ್‌ ಪೊಳಲಿ, ಭರತನಾಟ್ಯ ಗುರು ವಿದೂಷಿ ಸುಕನ್ಯಾ ಭಟ್‌, ಕನ್ನಡ ಗುರುಗಳಾದ ವಿನುತಾ ಬಿ. ಶೆಟ್ಟಿ, ಮತ್ತು ವಿಜಯಾ ಸಾಲ್ಯಾನ್‌, ಪುಟ್ಬಾಲ್‌ ಕೋಚ್‌ ನಾಗೇಶ್‌ ಕೋಟ್ಯಾನ್‌ ಮತ್ತು ಭಜನೆಯ ಗುರು ಲೀಲಾವತಿ ಆಳ್ವ ಅವರನ್ನು ಗುರು ವಂದನೆಯೊಂದಿಗೆ ಗೌರವಿಸಲಾಯಿತು.

ವೇದಿಕೆಯಲ್ಲಿ ಅನಿತಾ ದೇವೇಂದ್ರ ಬುನ್ನನ್‌, ಉದ್ಯಮಿ ದಯಾನಂದ ಪೂಜಾರಿ ಇನ್ನ, ಬಿಲ್ಲವರ ಅಸೋಸಿಯೇಶನ್‌ ವಸಾಯಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಕರುಣಕರ ಜಿ. ಅಮೀನ್‌, ಉದ್ಯಮಿ ಮೋಹನ್‌ ಬಿ. ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀ ದೇವಿ ಭರಟನಾಟ್ಯ ಮತ್ತು ಶ್ರೀ ದೇವಿ ಕನ್ನಡ ಕಲಿಕಾ ಕೇಂದ್ರದ ವಿದ್ಯಾರ್ಥಿಗಳಿಂದ ಪುಣ್ಯಕೋಟಿ ನೃತ್ಯ ರೂಪಕ, ನೃತ್ಯ ವೈಭವ, ಯಕ್ಷಗುರು ನಾಗೇಶ್‌ ಪೊಳಲಿ ಅವರ ನಿರ್ದೇಶನದಲ್ಲಿ ಶ್ರೀ ದೇವಿ ಯಕ್ಷಕಲಾ ನಿಲಯದ ಕಲಾವಿದರಿಂದ ಶ್ರೀ ಮಂದಾರ್ತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

 

-ಚಿತ್ರ-ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.