ವಡಾಲದ ಶ್ರೀ ರಾಮ ಮಂದಿರದಲ್ಲಿ ಪಲ್ಲಕಿ ಉತ್ಸವ
Team Udayavani, Apr 30, 2019, 11:01 AM IST
ಮುಂಬಯಿ: ವಡಾಲದ ಶ್ರೀ ರಾಮ ಮಂದಿರದಲ್ಲಿ ಪಲ್ಲಕಿ ಉತ್ಸವವು ಎ. 27ರಂದು ಬೆಳಗ್ಗೆಯಿಂದ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಪೂಜಾ ಕೈಂಕರ್ಯಗಳೊಂದಿಗೆ ಜರಗಿತು. ವಸಂತೋತ್ಸವದ ಅಂಗವಾಗಿ ಈ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಜಿಎಸ್ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಡಾಲ ಇದರ ಮಾಜಿ ಕಾರ್ಯಾಧ್ಯಕ್ಷ, ಟ್ರಸ್ಟಿ ಎನ್. ಎನ್. ಪಾಲ್, ಮಾಜಿ ಕಾರ್ಯಾಧ್ಯಕ್ಷ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಗೋವಿಂದ ಎಸ್. ಭಟ್, ಜಿಎಸ್ಬಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಡಾಲ ಇದರ ಟ್ರಸ್ಟಿಗಳಾದ ಉಮೇಶ್ ಪೈ ಮತ್ತು ಶಾಂತಾರಾಮ ಭಟ್, ವಡಾಲದ ಮಠದ ಮಾಜಿ ಕಾರ್ಯಾಧ್ಯಕ್ಷ ನಾಗೇಶ್ ಫಾವ್ಕರ್, ವಡಾಲ ಮಠದ ವಕ್ತಾರ ಕಮಲಾಕ್ಷ ಸರಾಫ್ ಅವರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಬೆಳಗ್ಗೆಯಿಂದ ವಿವಿಧ ಪೂಜೆಗಳು, ವಿಶೇಷ ಸೇವಾ ಪೂಜೆಗಳು ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ವಡಾಲ ಮಠ ಮತ್ತು ಶ್ರೀರಾಮ ಸೇವಕ ಮಂಡಳದ ಕಾರ್ಯಕರ್ತರಾದ ಚಂದ್ರಕಾಂತ್ ಹಾಗೂ ಮೊದಲಾದವರ ಸೇವಾರ್ಥವಾಗಿ ಪಲ್ಲಕ್ಕಿ ಉತ್ಸವ ಜರಗಿತು. ಭಕ್ತಾದಿಗಳು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಪ್ರಧಾನ ಅರ್ಚಕ ವೇದಮೂರ್ತಿ ಗೋವಿಂದ ಭಟ್ ಅವರಿಂದ ರಾಮ ಮತ್ತು ಲಕ್ಷ್ಮಣ, ಸೀತಾ ದೇವಿಗೆ ಮಹಾಮಂಗಳಾರತಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?