ಶುಲ್ಕ ವಸೂಲಿ: ಖಾಸಗಿ ಶಾಲೆಗಳ ವಿರುದ್ಧ ಹೆತ್ತವರಿಂದ ಪ್ರತಿಭಟನೆ


Team Udayavani, Dec 13, 2020, 8:06 PM IST

ಶುಲ್ಕ ವಸೂಲಿ: ಖಾಸಗಿ ಶಾಲೆಗಳ ವಿರುದ್ಧ ಹೆತ್ತವರಿಂದ ಪ್ರತಿಭಟನೆ

ಪುಣೆ, ಡಿ. 12: ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪುಣೆಯಲ್ಲಿ ಹೆತ್ತವರ ಸಂಘವು ಕೇಂದ್ರ ಶಿಕ್ಷಣ ಇಲಾಖೆಯ ಕಟ್ಟಡದ ಮುಂಭಾಗದಲ್ಲಿ  ಪ್ರತಿಭಟನೆ ನಡೆಸಿತು.

ಇಂಡಿಯಾ ವೈಡ್‌ ಪಾಲಕರ ಸಂಘದ ಅಧ್ಯಕ್ಷ, ನ್ಯಾಯವಾದಿ ಅನುಭಾ ಸಹೈ ಮಾತನಾಡಿ, ಶಾಲೆಗಳು ಶಿಕ್ಷಣದ ಹಕ್ಕುಗಳ (ಆರ್‌ಟಿಇ) ನಿಯಮಗಳನ್ನು ಉಲ್ಲಂಘಿಸಿದ್ದು, ಹೆತ್ತವರು ಎದುರಿಸುತ್ತಿರುವ ಸಮಸ್ಯೆಗಳನ್ನು ಶಿಕ್ಷಣ ಇಲಾಖೆ ಗಮನಿಸಬೇಕು. ನಮ್ಮ ಸಮಸ್ಯೆಗಳಿಗೆ ಪರಿಹಾರಗಳನ್ನು ಬಯಸುತ್ತೇವೆ. ಅನೇಕ ಹೆತ್ತವರು ವೇತನ ಕಡಿತ ಮತ್ತು ಉದ್ಯೋಗ ಕಳೆದುಕೊಂಡು ಸಮಸ್ಯೆ ಎದುರಿಸುತ್ತಿದ್ದಾರೆ. ಸಾಂಕ್ರಾಮಿಕ ರೋಗದಿಂದಾಗಿ ಹೆಚ್ಚಿನ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಪಡೆಯುತ್ತಿಲ್ಲ. ಈ ಸಂದರ್ಭದಲ್ಲಿ ನಾವು ದೊಡ್ಡ ಪ್ರಮಾಣದ ಶುಲ್ಕವನ್ನು ಪಾವತಿಸಬಹುದೆಂದು ಶಿಕ್ಷಣ ಸಂಸ್ಥೆಗಳು ಹೇಗೆ ನಿರೀಕ್ಷಿಸಲು ಸಾಧ್ಯ. ಬೋಧನ ಶುಲ್ಕವನ್ನು ಮಾತ್ರ ವಿದ್ಯಾರ್ಥಿಗಳಿಂದ ಪಡೆಯುವಂತೆ ಆಗ್ರಹಿಸಿದರು.

ಬೋಧನಾ ಶುಲ್ಕ ಮಾತ್ರ ಪಡೆಯಲಿ :

ಹೆತ್ತವರು ಎದುರಿಸುತ್ತಿರುವ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಪುಣೆಯ ಪೋಷಕರ ಸಂಘದ ಕಾಳಿದಾಸ್‌ ಜಾಧವ್‌ ಹೇಳಿದರು. ಶಾಲೆಗಳು ಇಡೀ ವರ್ಷದ ಶುಲ್ಕವನ್ನು ಪಾವತಿಸಲು

ಹೆತ್ತವರನ್ನು ಆಗ್ರಹಿಸುತ್ತಿವೆ. ವಿದ್ಯಾರ್ಥಿ ಗಳು ಬಳಸುತ್ತಿರುವ ಸೇವೆಗಳಿಗೆ ಮಾತ್ರ ಶುಲ್ಕ ಪಾವತಿ ಸಬೇಕು. ಅದು ಬೋಧನಾ ಶುಲ್ಕವಾಗಿದೆ. ಯಾವುದೇ ವಿದ್ಯಾರ್ಥಿಯು ಶೈಕ್ಷಣಿಕ ಪಠ್ಯಕ್ರಮವನ್ನು ಕಳೆದುಕೊಳ್ಳದಂತೆ ಈ  ವರ್ಷವನ್ನು ಶೂನ್ಯ ವರ್ಷವೆಂದು ಘೋಷಿಸಬೇಕು ಎಂದು  ಆಗ್ರಹಿಸುತ್ತಿದ್ದೇವೆ ಎಂದು ಅವರು ಹೇಳಿದರು

ಸರಕಾರಿ ಶಾಲೆಗಳಲ್ಲಿ  ಗುಣಮಟ್ಟದ ಶಿಕ್ಷಣಕ್ಕೆ ಆಗ್ರಹ :

ಸರಕಾರಿ ಶಾಲೆಗಳು ಉತ್ತಮ ವಾಗಿದ್ದರೆ ನಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಅಗತ್ಯವಿಲ್ಲ ಎಂದು ಹೆತ್ತವರಾದ ಲಕ್ಷ್ಮೀ ಸಪRಲ್‌ ಹೇಳಿದರು. ನಾವು ಸರಕಾರಿ ಶಾಲೆಗಳಿಗೆ ಅಗತ್ಯವಾದ ಶುಲ್ಕವನ್ನು ನೀಡಲು ಸಿದ್ಧರಿದ್ದೇವೆ. ಅವರು ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಬೇಕು. ಮಕ್ಕಳಿಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಬೇಕು. ಇದರಿಂದಾಗಿ ಮಗುವಿನ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಮಕ್ಕಳಿಗೆ ಕಿರುಕುಳ ಸಲ್ಲದು :

ಶಾಲೆಯು ಗ್ರಂಥಾಲಯಗಳು ಮತ್ತು ಕ್ರೀಡೆಗಳಿಗೆ ಶುಲ್ಕ ವಿಧಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ಹೆತ್ತವರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇಡೀ ವರ್ಷ ಶುಲ್ಕವನ್ನು ಪಾವತಿಸಲು ಆಗ್ರಹಿಸು ತ್ತಿದ್ದಾರೆ. ಇದಕ್ಕೆ ಒಪ್ಪದಿ ದ್ದಾಗ ಆನ್‌ಲೈನ್‌ ತರಗತಿಗಳ ಸಮಯದಲ್ಲಿ ನಮ್ಮ ಮಕ್ಕಳಿಗೆ ಕಿರುಕುಳ ನೀಡಲಾಗುತ್ತದೆ ಎಂದು ಹೆತ್ತವರು ಆರೋಪಿಸಿದರು.

ಕಠಿನ ಕ್ರಮ:ದಿನಕರ್‌ ತೆಮ್ಕರ್‌ :

ಪ್ರಾಥಮಿಕ ಶಿಕ್ಷಣದ ಜಂಟಿ ನಿರ್ದೇಶಕ ದಿನಕರ್‌ ತೆಮ್ಕರ್‌ ಮಾತನಾಡಿ, ಶೀಘ್ರದಲ್ಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೆತ್ತವರಿಗೆ ಭರವಸೆ ನೀಡಲಾಗಿದೆ. ಪೂರ್ಣ ಶುಲ್ಕವನ್ನು ಪಾವತಿಸದ ಆಯ್ದ ವಿದ್ಯಾರ್ಥಿಗಳ ಆನ್‌ಲೈನ್‌ ಶಿಕ್ಷಣವನ್ನು ನಿಲ್ಲಿಸಿದ ಶಾಲೆಗಳು ಆನ್‌ಲೈನ್‌ ತರಗತಿಗಳನ್ನು ಪ್ರಾರಂಭಿಸಬೇಕು. ಸಾಂಕ್ರಾಮಿಕ ಸಮಯದಲ್ಲಿ ಖಾಸಗಿ ಶಾಲೆಗಳಿಂದ ತೆಗೆದುಹಾಕಲ್ಪಟ್ಟ ವಿದ್ಯಾರ್ಥಿಗಳನ್ನು ತತ್‌ಕ್ಷಣ ಶಾಲೆಗಳಿಗೆ ಸೇರಿಸಬೇಕು.  ಶೀಘ್ರದಲ್ಲೇ ನಾವು ಸಾಮಾನ್ಯ ನೋಟಿಸ್‌ಗಳನ್ನು ನೀಡಲಿದ್ದೇವೆ  ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.