ಬಿಡುಗಡೆಗೆ ಸಿದ್ಧವಾಗಿದೆ ಕಲಾಜಗತ್ತು ಪ್ರಥಮ ಕಾಣಿಕೆ “ಪತ್ತನಾಜೆ’


Team Udayavani, Jun 16, 2017, 3:07 PM IST

12-Mum03b.jpg

ತುಳುನಾಡ ಸಂಸ್ಕೃತಿ, ಸಂಸ್ಕಾರವನ್ನು ಬಿಂಬಿಸಿ, ಇದರ ಶ್ರೇಷ್ಠತೆಗೆ ಹೆಚ್ಚಿನ ಒತ್ತು ನೀಡಿರುವ  ಕಲಾಜಗತ್ತು ಮುಂಬಯಿ ಕ್ರಿಯೇಶನ್ಸ್‌ ನಿರ್ಮಾಣದ ಮೊದಲ ಕಾಣಿಕೆ “ಪತ್ತನಾಜೆ’ ತುಳು ಚಿತ್ರವು ಸೆ. 1ರಂದು ಬಿಡುಗಡೆಗೊಳ್ಳಲಿದೆ. ಕೋಸ್ಟಲ್‌ವುಡ್‌ನ‌ಲ್ಲಿ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ತೋನ್ಸೆ ವಿಜಯ ಕುಮಾರ್‌ ಶೆಟ್ಟಿ ಅವರ ನಿರ್ದೇಶನದಲ್ಲಿ ತಯಾರಾಗಿರುವ ಪತ್ತನಾಜೆಗೆ ಸೆನ್ಸಾರ್‌ ಸರ್ಟಿಫಿಕೇಟ್‌ ಸಿಕ್ಕಿದ್ದು, ಪ್ರಸ್ತುತ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿದೆ.

ಕೋಸ್ಟಲ್‌ವುಡ್‌ನ‌  ಘಟಾನುಘಟಿ  ಕಲಾವಿದರಾದ ಶಿವಧ್ವಜ್‌, ಚೇತನ್‌ ರೈ ಮಾಣಿ ಸೇರಿದಂತೆ ಮುಂಬಯಿಯ ಪ್ರಸಿದ್ಧ ಕಲಾವಿದೆ ರೇಷ್ಮಾ ಶೆಟ್ಟಿ, ಸೂರ್ಯ ರಾವ್‌, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ, ಶ್ರೇಷ್ಠ ಕಲಾವಿದ ಸುರೇಂದ್ರ ಕುಮಾರ್‌ ಹೆಗ್ಡೆ, ಸೀತಾ ಕೋಟೆ, ಸುಂದರ ರೈ ಮಂದಾರ, ತೆಂಕುತಿಟ್ಟು ಯಕ್ಷಗಾನದ ಧ್ರುವತಾರೆ ಸತೀಶ್‌ ಶೆಟ್ಟಿ ಪಟ್ಲ ಮೊದಲಾದವರ ಅಭಿನಯದಲ್ಲಿ ಮೂಡಿ ಬಂದಿರುವ ಪತ್ತನಾಜೆ ಚಿತ್ರವು ವಿಭಿನ್ನ ಕಥಾ ಹಂದರವನ್ನು ಹೊಂದಿದೆ. ತುಳುಚಿತ್ರರಂಗಕ್ಕೆ ನೂತನ ಆಯಾಮವನ್ನು ಕೊಡುವ ಉದ್ದೇಶದಿಂದ ಮುಂಬಯಿ, ತುಳುನಾಡು ಹಾಗೂ ಕನ್ನಡ ಚಿತ್ರರಂಗದ ಕಲಾವಿದರ, ತಂತ್ರಜ್ಞರ ಸಂಗಮದಲ್ಲಿ ಈ ಚಿತ್ರ ಮೂಡಿ ಬಂದಿದೆ ಎಂದು ತೋನ್ಸೆ ವಿಜಯಕುಮಾರ್‌ ಶೆಟ್ಟಿ ಅವರು ತಿಳಿಸಿದ್ದಾರೆ.

ಯಕ್ಷಗಾನ ಕಲಾವಿದನೋರ್ವನ ಬದುಕನ್ನು ಆಧರಿಸಿದ ಕಥೆ ಚಿತ್ರದಲ್ಲಿದ್ದು, ಸಹಜ ಜೀವನ ಶೈಲಿಯೂ ಒಳಗೊಂಡಿದೆ. ಯಕ್ಷಗಾನ ಕಲಾವಿದ ಹೃದಯದಲ್ಲಿರುವ ಪ್ರೀತಿ ಈ ಸಿನೆಮಾದಲ್ಲಿ ವ್ಯಕ್ತವಾಗಲಿದೆ. ತೆಂಕು-ಬಡಗಿನ ಯಕ್ಷಗಾನ ಶೈಲಿಯ ಬಗ್ಗೆ ಆಳವಾಗಿ ಅಧ್ಯಯನ ಮಾಡಿರುವ ತೋನ್ಸೆ ವಿಜಯಕುಮಾರ್‌ ಶೆಟ್ಟಿ ಅವರು ತನ್ನ ಅನುಭವವನ್ನು ಈ ಸಿನೆಮಾದಲ್ಲಿ ಧಾರೆ ಎರೆದಿದ್ದಾರೆ. ಯಕ್ಷಗಾನ ಜೀವನದ ಜತೆಗೆ ಕಲಾವಿದನ ಅಂತರಂಗವನ್ನೂ ಚಿತ್ರವು ಬಿಂಬಿಸಲಿದೆ. ಯುವ ಜನತೆಯನ್ನು ಮೆಚ್ಚಿಸಬಲ್ಲ, ಹಿರಿಯರು ಒಪ್ಪಿಕೊಳ್ಳಬಲ್ಲ ಒಳ್ಳೆಯ ಕಥೆ ಚಿತ್ರದಲ್ಲಿದೆ. ಮುಂಬಯಿಯ ತುಳು-ಕನ್ನಡಿಗರ ಸಂಪೂರ್ಣ ಪ್ರೋತ್ಸಾಹ, ಸಹಕಾರವಿರಲಿ ಎಂದು ಕಲಾಜಗತ್ತು ವಿಜಯಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

ಚಿತ್ರಕ್ಕೆ ಸಂಗೀತವನ್ನು ಮನೋಹರ್‌ ವಿಟuಲ್‌ ಅವರು ನೀಡಿದ್ದು, ಛಾಯಾಗ್ರಹಣದಲ್ಲಿ ಸುರೇಶ್‌ ಬಾಬು ಅವರು ಸಹಕರಿಸಿದ್ದಾರೆ. ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ಅವರ ಅತ್ಯುತ್ತಮ ಸಂಭಾಷಣೆಯೊಂದಿಗೆ ಮೂಡಿಬಂದಿರುವ ಚಿತ್ರದ ಸಾಹಸ‌ದಲ್ಲಿ ಹರೀಶ್‌ ಶೆಟ್ಟಿ ಮುಂಬಯಿ, ಕಾರ್ಯಕಾರಿ ನಿರ್ಮಾಪಕರಾಗಿ ಮಂಜುನಾಥ ಬನ್ನೂರು, ಸಹ ನಿರ್ದೇಶಕರಾಗಿ ಸಚಿನ್‌ ಶೆಟ್ಟಿ ಕುಂಬಳೆ, ನಿರ್ಮಾಣ ಮೇಲ್ವಿಚಾರಣೆಯಲ್ಲಿ ಎನ್‌. ಪೃಥ್ವಿರಾಜ್‌ ಮುಂಡ್ಕೂರು, ಕಲಾನಿರ್ದೇಶಕರಾಗಿ ಚಂಚಲಾಕ್ಷೀ ಭಟ್‌, ಪ್ರಚಾರ ಕಲೆಯಲ್ಲಿ ಸುಧಾಕರ ಆಚಾರ್ಯ ಅಟ್ಟೆಗೋಳಿ ಅವರು ಸಹಕರಿಸಿದ್ದಾರೆ.

ಪತ್ತನಾಜೆ ತಂಡದ ದ್ವಿತೀಯ ಕೊಡುಗೆ “ಬೊಲ್ಲಿ ಬಂಗಾರ್‌’ ಚಿತ್ರಕ್ಕೆ  ಅ. 2ರಂದು ಮುಂಬಯಿಯಲ್ಲಿ ಮುಹೂರ್ತ ನಡೆಯಲಿದೆ. ಈ ಚಿತ್ರವನ್ನೂ ಕಲಾಜಗತ್ತು ವಿಜಯಕುಮಾರ್‌ ಶೆಟ್ಟಿ ಅವರು ನಿರ್ದೇಶಿಸಲಿದ್ದು, ಮುಹೂರ್ತದಿಂದ ಹಿಡಿದು ಚಿತ್ರೀಕರಣ ಎಲ್ಲವೂ ಮುಂಬಯಿ ಮಣ್ಣಿನಲ್ಲೇ ನಡೆಯಲಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.