ಹವ್ಯಾಸಿ ಕಲಾವೃಂದ ಪಿಂಪ್ರಿ-ಚಿಂಚ್ವಾಡ್: ಪಟ್ಲ ಅವರಿಗೆ ಸಮ್ಮಾನ
Team Udayavani, Aug 11, 2017, 2:26 PM IST
ಪುಣೆ: ಪಿಂಪ್ರಿ-ಚಿಂಚ್ವಾಡ್ ಬಂಟ್ಸ್ ಸಂಘದ ವತಿಯಿಂದ ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಮಿನಿಹಾಲ್ನಲ್ಲಿ ಮುಂಬಯಿಯಲ್ಲಿ ಪಟ್ಲ ಸಂಭ್ರಮ ಪ್ರಯುಕ್ತ ವಿಶೇಷ ಸಭೆಯು ಆ. 2ರಂದು ನಡೆಯಿತು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರನ್ನು ಪಿಂಪ್ರಿ–ಚಿಂಚಾÌಡ್ ಬಂಟ್ಸ್ ಸಂಘ, ಪಿಂಪ್ರಿ-ನೆಹರೂ ನಗರದ ಅಯ್ಯಪ್ಪ ಸ್ವಾಮಿ ಸೇವಾ ಮಂಡಲ ಹಾಗೂ ಹವ್ಯಾಸಿ ಕಲಾವೃಂದದ ವತಿಯಿಂದ ಶಾಲು ಹೊದೆಸಿ, ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು.
ಪಿಂಪ್ರಿ ನೆಹರೂ ನಗರ ಅಯ್ಯಪ್ಪ ಮಂದಿರದ ಜಯಾನಂದ ಶೆಟ್ಟಿ, ಹವ್ಯಾಸಿ ಕಲಾವೃಂದ ಪಿಂಪ್ರಿ-ಚಿಂಚಾÌಡ್ನ ಅವಿನಾಶ್ ಶೆಟ್ಟಿ, ಸುಧಾಕರ ಶೆಟ್ಟಿ ಪೆಲತ್ತೂರು, ಚೇತನ್ ಶೆಟ್ಟಿ ಮೂಲ್ಕಿ, ಸಂತೋಷ್ ಶೆಟ್ಟಿ ಪೆರ್ಡೂರು, ನಿಧೀಶ್ ಶೆಟ್ಟಿ ನಿಟ್ಟೆ, ಜೀವನ್ ಶೆಟ್ಟಿ ದೊಂಡೇರಂಗಡಿ ಹಾಗೂ ತಾರಾನಾಥ ರೈ ಈಶ್ವರಮಂಗಲ ಅವರು ಪಟ್ಲ ಸತೀಶ್ ಶೆಟ್ಟಿ ಅವರನ್ನು ಅಭಿನಂದಿಸಿದರು.
ಸಂಘದ ಅಧ್ಯಕ್ಷ ಕಟ್ಟಿಂಗೇರಿ ಮನೆ ಮಹೇಶ್ ಹೆಗ್ಡೆ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೇಂದ್ರ ಘಟಕದ ಉಪಾಧ್ಯಕ್ಷ ಅಶೋಕ್ ಶೆಟ್ಟಿ ಪೆರ್ಮುದೆ, ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್ ವಿಶ್ವನಾಥ ಶೆಟ್ಟಿ, ಪದ್ಮನಾಭ ಕೆ. ಶೆಟ್ಟಿ, ಎರ್ಮಾಳ್ ಸೀತಾರಾಮ ಶೆಟ್ಟಿ, ಸಂಘದ ಉಪಾಧ್ಯಕ್ಷ ವಿಜಯ ಶೆಟ್ಟಿ ಬೋರ್ಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಬಜಗೋಳಿ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಕುರ್ಕಾಲ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ತನುಜಾ ಶೆಟ್ಟಿ ಉಪಸ್ಥಿತರಿದ್ದರು.
ಬಂಟರ ಸಂಘದ ಪದಾಧಿಕಾರಿಗಳ ಸಂಪೂರ್ಣ ಸಹಕಾರದೊಂದಿಗೆ ನಡೆದ ಸಭೆಯನ್ನು ಸುಧಾಕರ ಶೆಟ್ಟಿ ಪೆಲತ್ತೂರು ಹಾಗೂ ಅವಿನಾಶ್ ಶೆಟ್ಟಿ ಸಂಘಟಿಸಿದ್ದರು. ಅಧ್ಯಕ್ಷ ಕಟ್ಟಿಂಗೇರಿಮನೆ ಮಹೇಶ್ ಹೆಗ್ಡೆ ಸ್ವಾಗತಿಸಿದರು. ವಿಶ್ವನಾಥ ಡಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ