ಗೋವುಗಳ ಮೂಲಕ ಭಗವಂತ ನೆಲೆ: ಪೇಜಾವರ ಶ್ರೀ


Team Udayavani, Nov 15, 2020, 1:35 PM IST

Mumbai-tdy-1

ಮುಂಬಯಿ, ನ. 14: ಭಗವಂತ ಎಲ್ಲಿಬೇಕೋ ಅಲ್ಲಿ ಅವತರಿಸಬಲ್ಲನು. ಇಂತಹ ಭಗವಂತ ಕೃಷ್ಣನಾಗಿ ಮಧುರೆಯಲ್ಲಿ ಅವತರಿಸಿ  ಅಲ್ಲಿಯೂ ನಿಲ್ಲದೆ ಊರನ್ನು ತೊರೆದಿದ್ದ. ಎಲ್ಲಿ ಗೋವುಗಳ ಹಿಂಸೆ ನಡೆಯುತ್ತಿದೆಯೋ ಅಲ್ಲಿ ನಾನಿರಲು ಯೋಗ್ಯನಲ್ಲ, ಗೋವಿನ ಮಹತ್ವವನ್ನು ಜಗತ್ತಿಗೆ ತೋರಿಸಬೇಕು ಎಂದು ಕಂಸನ ರಾಜ್ಯ ತೊರೆದಿದ್ದ ಎಂದು ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.

ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀಕೃಷ್ಣನ ಸಾನ್ನಿಧ್ಯದಲ್ಲಿ ನ. 13ರಂದು ಗೋಪೂಜೆ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀಗಳು, ಕಂಸನ ರಾಜ್ಯದಲ್ಲಿ ಗೋಹತ್ಯೆ ನಿರಂತರವಾಗಿ ನಡೆಯುತ್ತಿತ್ತು. ಯಾಕೆಂದರೆ ನಾವು ಅಸುರರು ಎಂದು ಆತ‌ನಿಗೆ ಅರಿವಿತ್ತು. ದೇವತೆಗಳು ನಮ್ಮ ವಿರೋಧಿಗಳು, ಅವರನ್ನು ಬಗ್ಗುಬಡಿಯಬೇಕು. ಆದರೆ ಅವರು ಸ್ವರ್ಗಲೋಕದಲ್ಲಿದ್ದು, ಅವರೊಂದಿಗೆ ಹೇಗೆ ಹೋರಾಟ ನಡೆಸುವುದು ಎಂಬ ಚಿಂತೆ ಕಂಸನನ್ನು ಕಾಡುತ್ತಿತ್ತು. ಆದ್ದರಿಂದ ಅವರಿಗೆ ಪೂರೈಕೆಯಾಗುವ ಆಹಾರವನ್ನೇ ನಿಲ್ಲಿಸಿದರೆ ಸರಿಯಾದ ಪಾಠ ಕಲಿಸಬಹುದು ಎಂದು ಕಂಸ ದೇವತೆಗಳ ಆಹಾರಕ್ಕೆ ತಡೆಯೊಡ್ಡಿದ್ದನು. ಗೋವಿನ ತುಪ್ಪ ದೇವತೆಗಳ ಆಹಾರವಾಗಿತ್ತು. ಅದನ್ನೇ ನಾಶ ಮಾಡಿದರೆ ದೇವತೆಗಳು ಆಹಾರವಿಲ್ಲದೆ ಕ್ಷೀಣಿಸುತ್ತಾರೆ. ಅದಕ್ಕಾಗಿ ಗೂವುಗಳನ್ನೆಲ್ಲ ಸಂಹಾರ ಮಾಡಿದ್ದ. ಎಲ್ಲಿ ಗೋವುಗಳ ಹಿಂಸೆ ನಡೆಯುತ್ತಿದೆಯೋ ಅಲ್ಲಿ ನಾನು ಇರುವುದಿಲ್ಲ ಅನ್ನುವುದನ್ನು ಜಗತ್ತಿಗೆ ತೋರಿಸಬೇಕು ಎಂದು ಕಂಸನ ರಾಜ್ಯ ಮಧುರಾ ನಗರವನ್ನು ಶ್ರೀಕೃಷ್ಣ ತೊರೆದಿದ್ದ. ನೇರವಾಗಿ ನಂದಾಗೋಕುಲಕ್ಕೆ ಬಂದ ಶ್ರೀಕೃಷ್ಣ ಆ ಮೂಲಕ ಜಗತ್ತಿಗೆ ಸಂದೇಶ ನೀಡಿದ ಎಂದು ತಿಳಿಸಿದರು.

ನಾವು ನಮ್ಮ ಮನೆಯಲ್ಲಿ ಭಗವಂತನು ಇರಬೇಕು ಅಂದುಕೊಂಡರೆ, ನಾವು ಗೋವುಗಳ ಪೋಷಣೆ ಮಾಡಬೇಕು. ಆಗ ಭಗವಂತ ನಮ್ಮ ಮನೆ-ಮನಗಳಲ್ಲೂ ಉಳಿಯುತ್ತಾನೆ. ಗೋವುಗಳ ಪೋಷಣೆ ನಡೆಯುವಲ್ಲಿ ನಾವು ಕೈಜೋಡಿಸಬೇಕು. ಉಡುಪಿ ಜಿಲ್ಲೆಯ ಬ್ರಹ್ಮಾವರ ಸೀತಾ ನದಿ ಮತ್ತು ದಕ್ಷಿಣಕ್ಕೆ ಕುಂಜಾಲು ನೀಲಾವರ ಇಲ್ಲಿ ಉಡುಪಿ ಪೇಜಾವರ ಮಠದ ಗೋಶಾಲೆ ಇದೆ. ಇದು ಶ್ರೀಕೃಷ್ಣೆ$çಕ್ಯ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ದೂರದೃಷ್ಟಿತ್ವದ ಯೋಜನೆಯಾಗಿದೆ. ಬೀದಿಯಲ್ಲಿರುವ ಮತ್ತು ವಯಸ್ಸಾದ ಹಸುಗಳಿಗೆ ಇದು ಆರೈಕೆಯ ತಾಣವಾಗಿದೆ. ಈ ಗೋಶಾಲೆಯಲ್ಲಿ ಸಾವಿರಾರು ಗೋವುಗಳಿಗೆ ಆಶ್ರಯ ನೀಡಲಾಗಿದೆ. ಇಲ್ಲಿ ಸರೋವರ ನಾಮದ ಕೆರೆ ನಿರ್ಮಿಸಿ ಕೆರೆಯ ಮಧ್ಯದಲ್ಲಿ ಶ್ರೀಕೃಷ್ಣನ ದೇವಾಲಯವನ್ನು ನಿರ್ಮಿಸಲಾಗಿದೆ ಎಂದರು.

ಶ್ರೀ ಪೇಜಾವರ ಮಠದ ವ್ಯವಸ್ಥಾಪಕರಾದ ಪ್ರಕಾಶ ಆಚಾರ್ಯ ರಾಮಕುಂಜ ಮತ್ತು ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಪೂಜಾಧಿಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನದ ಬಿ. ಆರ್‌. ಗುರುಮೂರ್ತಿ, ಅವಿನಾಶ್‌ ಶಾಸ್ತ್ರಿ, ಪೇಜಾವರ ಮಠದ ಹರಿ ಭಟ್‌ ಪುತ್ತಿಗೆ, ನಿರಂಜನ್‌ ಗೋಗೆr, ಅದಮಾರು ಮಠ ಮುಂಬಯಿ ಶಾಖಾ ಪ್ರಬಂಧಕ ಪಡುಬಿದ್ರಿ ವಿ. ರಾಜೇಶ್‌ ರಾವ್‌, ಶ್ರೀನಿವಾಸ ಭಟ್‌ ಪರೇಲ್‌, ಪುರೋಹಿತರಾದ ಅರವಿಂದ ಬನ್ನಿಂತ್ತಾಯ, ವಿಷ್ಣುತೀರ್ಥ ಸಾಲಿ, ಪವನ್‌ ಭಟ್‌, ಆದಿತ್ಯ ಕಾರಂತ, ರಾಮಕೃಷ್ಣ ದಾಂಬ್ಳೆ, ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ರವೀಂದ್ರ ಶಾಂತಿ, ಪ್ರಭಾತ್‌ ಕಾಲನಿ ಸಾರ್ವಜನಿಕ ಗಣೇಶೋತ್ಸವ ಮಂಡಳದ ಅಧ್ಯಕ್ಷ ಶೇಖರ್‌ ಜೆ. ಸಾಲ್ಯಾನ್‌, ಸಮಾಜ ಸೇವಕರಾದ ವೈ. ಟಿ. ಶೆಟ್ಟಿ, ಜಗದಾಂಬಾ ಶೆಟ್ಟಿ, ಎಸ್‌. ಸೌಭಾಗ್ಯಾ, ದೀಪಕ್‌ ಗಟ್ಟಿ, ಚಂದ್ರಕಾಂತ್‌ ಚೌಧುರಿ ಮೊದಲಾದವರು  ಉಪಸ್ಥಿತರಿದ್ದರು.

 

ಚಿತ್ರ – ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.