ಸಂಶೋಧನೆಯಲ್ಲಿ ಪರಿಶ್ರಮ ಮುಖ್ಯ: ಡಾ| ವಿಶ್ವನಾಥ್ ಕಾರ್ನಾಡ್
Team Udayavani, Apr 1, 2021, 11:25 AM IST
ಮುಂಬಯಿ: ಸಂಶೋಧನೆ ಕಠಿನ ಕಾರ್ಯವಾಗಿದ್ದು, ಇಲ್ಲಿ ಯಶಸ್ಸು ಸುಲಭದಲ್ಲಿ ದಕ್ಕದು. ಸಂಶೋಧನೆಯಲ್ಲಿ ನಿರತರಾದವರು ಸದಾ ಕುತೂಹಲಿಗಳಾಗಿರಬೇಕು. ಯಾರು ಹೆಚ್ಚು ಪರಿಶ್ರಮ ಪಡುತ್ತಾರೋ ಅವರು ಒಳ್ಳೆಯ ಶೋಧ ಗ್ರಂಥಗಳನ್ನು ರಚಿಸಬಲ್ಲರು ಎಂದು ಹಿರಿಯ ಸಾಹಿತಿ, ಸಂಶೋಧಕ ಡಾ| ವಿಶ್ವನಾಥ್ ಕಾರ್ನಾಡ್ ಅಭಿಪ್ರಾಯಪಟ್ಟರು.
ಮಾ. 30ರಂದು ಕನ್ನಡ ವಿಭಾಗ ಆಯೋಜಿಸಿದ್ದ ಸಂಶೋಧನ ಮಂಡಳಿ ಸಭೆಯಲ್ಲಿ ವಿಶೇಷ ತಜ್ಞರಾಗಿ ಪಾಲ್ಗೊಂಡು ಮಾತನಾಡಿ, ಕುತೂಹಲ, ಆಸಕ್ತಿಯಿಂದ ಮುಂದುವರಿದರೆ ಗುರಿ ಮುಟ್ಟಲು ಸಾಧ್ಯ. ಕನ್ನಡ ವಿಭಾಗದಲ್ಲಿ ಈಗ ಸಂಶೋಧನೆಯಲ್ಲಿ ತೊಡಗಿ ಕೊಳ್ಳುವವರ ಸಂಖ್ಯೆ ಹೆಚ್ಚಿದೆ. ವಿಭಾಗದ ವಿದ್ಯಾರ್ಥಿಗಳಿಂದ ಒಳ್ಳೆಯ ಶೋಧ ಕೃತಿಗಳು ಬರುತ್ತಿರುವುದು ಸಂತೋಷದ ಸಂಗತಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭ ಜಯ ಸಾಲ್ಯಾನ್ ಅವರು “ಮುಂಬಯಿಯಲ್ಲಿ ಬೆಳಗಿದ ಕರ್ನಾಟಕ ಮೂಲದ ಕಲಾವಿದರು’ ಎಂಬ ತಮ್ಮ ಸಂಶೋಧನ ಯೋಜನೆಯ ಉದ್ದೇಶಗಳನ್ನು ವಿವರಿಸಿದರು. ಸುರೇಖಾ ದೇವಾಡಿಗ ಅವರು ತಮ್ಮ ಸಂಶೋಧನೆಯ ರೂಪುರೇಷೆಯನ್ನು ಸಭೆಯ ಮುಂದೆ ಪ್ರಸ್ತುತಪಡಿಸಿದರು.
ಮಾರ್ಗದರ್ಶಕ ಹಾಗೂ ಕನ್ನಡ ಸಂಶೋಧನ ಮಂಡಳಿಯ ಅಧ್ಯಕ್ಷ ಡಾ| ಜಿ. ಎನ್. ಉಪಾಧ್ಯ ಮಾತನಾಡಿ, ವಿಭಾಗದ ವಿದ್ಯಾರ್ಥಿ ಗಳು ಬಹುಶಿಸ್ತೀಯ, ಅಂತರ ಶಿಸ್ತೀಯ ಸಂಶೋಧನೆಯಲ್ಲಿ ತೊಡ ಗಿಸಿಕೊಳ್ಳುತ್ತಿರುವುದು ಸಂತೋಷದ ಸಂಗತಿ. ಸಾಹಿತ್ಯದ ಜತೆಗೆ ಚಿತ್ರಕಲೆ, ಸಂಗೀತ ಮೊದಲಾದ ವಿಷಯ ಗಳತ್ತಲೂ ವಿದ್ಯಾರ್ಥಿಗಳ ಒಲವು ಹೆಚ್ಚುತ್ತಿರುವುದು ಆಶಾದಾಯಕ ಸಂಗತಿ. ಜಯ ಸಾಲ್ಯಾನ್ ಅವರ ಅಧ್ಯಯನ ನಮ್ಮ ನಿರೀಕ್ಷೆ ಯನ್ನು ಹೆಚ್ಚಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭ ದುರ್ಗಪ್ಪ ಕೋಟಿಯವರ್ ಮಂಡಿಸಿದ ಮುಂಬಯಿ ಕನ್ನಡ ಗದ್ಯ ಸಾಹಿತ್ಯ ಮಹಾಪ್ರಬಂಧದ ಕುರಿತು ಸಭೆ ವಿಚಾರ ವಿಮರ್ಶೆ ನಡೆಸಿತು. ಈ ಬಾರಿಯ ಸಂಶೋಧನ ಅರ್ಹತ ಪರೀಕ್ಷೆಯಲ್ಲಿ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿರುವುದಕ್ಕೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಯಿತು. ವಿಭಾಗದ ಸಹ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸನಾತನ ಧರ್ಮದ ನೆಮ್ಮದಿ ವಿದೇಶಿ ಸಂಸ್ಕೃತಿಯಲ್ಲಿಲ್ಲ: ವಿದ್ಯಾಪ್ರಸನ್ನ ಸ್ವಾಮೀಜಿ
ಬಂಟರು ಸಹೃದಯಿ ದಾನಿಗಳಾಗಲಿ: ಎಸ್.ಎಂ. ಶೆಟ್ಟಿ
ಭವಾನಿ ಫೌಂಡೇಶನ್ ಆರ್ಥಿಕವಾಗಿ ಹಿಂದುಳಿದವರ ಆಶಾಕಿರಣ: ಡಾ| ಶಿಶಿರ್ ಶೆಟ್ಟಿ
ಸಂಘದಿಂದ ಸಮಾಜ ಬಾಂಧವರಿಗೆ ನೆರವಾಗುವ ಯೋಜನೆ ಜಾರಿ: ಸಂತೋಷ್ ಶೆಟ್ಟಿ
ಜೂ. 12: ಶ್ರೀ ಭುವನೇಶ್ವರಿ ಮಾತೆಯ ಮೂರ್ತಿ ಪ್ರತಿಷ್ಠೆ ಉತ್ಸವ, ಧಾರ್ಮಿಕ ಕಾರ್ಯಕ್ರಮ
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಕೆಲಸಕ್ಕೆಂದು ಬಂದು ವೃದ್ಧೆಯ ಕೈ,ಕಾಲು ಕಟ್ಟಿ ಹಾಕಿ ದರೋಡೆ: ನೇಪಾಳಿ ದಂಪತಿಗಾಗಿ ಶೋಧ
ಕಂಪ್ಲಿಯಲ್ಲಿ ಎಸಿಬಿ ದಾಳಿ: ಪಿಡಿಒ, ಗ್ರಾ.ಪಂ.ಸದಸ್ಯ ಸೇರಿ ಮೂವರ ಬಂಧನ
ಉದ್ಯಾವರ: ಬಸ್ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್ ಸಿಬಂದಿ ಸಾವು
ಮಂಗಳೂರು : ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
ಕೆರಾಡಿ : ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಕಾರ್ಮಿಕ ಸಾವು