ಪೆಸ್ತೂಮ್ ಸಾಗರ್ ಕರ್ನಾಟಕ ಸಂಘ: ಕ್ಯಾರಿಯರ್ ಗೈಡೆನ್ಸ್ ಶಿಬಿರ
Team Udayavani, Oct 26, 2019, 4:22 PM IST
ಮುಂಬಯಿ, ಅ. 25: ಚೆಂಬೂರು ತಿಲಕ್ ನಗರದ ಪೆಸ್ತೂಮ್ ಸಾಗರ್ ಕರ್ನಾಟಕ ಸಂಘದ ಶಿಕ್ಷಣ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕ್ಯಾರಿಯರ್ ಗೈಡೆನ್ಸ್ ಶಿಬಿರವು ಅ. 20ರಂದು ನವದುರ್ಗಾ ಮಿತ್ರ ಮಂಡಳಿ ತಿಲಕ್ ನಗರದಲ್ಲಿ ನಡೆಯಿತು.
ಶಿಬಿರವನ್ನು ಎಸ್ಎಸ್ಸಿ ಮತ್ತು ಎಚ್ಎಸ್ಸಿ ವಿದ್ಯಾರ್ಥಿ ಗಳಿಗೆ ಆಯೋಜಿಸಲಾಗಿತ್ತು. ಪೆಸ್ತೂಮ್ ಸಾಗರ್ ಕರ್ನಾ ಟಕ ಸಂಘದ ಅಧ್ಯಕ್ಷ ರಾಮಣ್ಣ ಬಿ. ದೇವಾಡಿಗ, ಶಿಕ್ಷಣಸಮಿತಿಯ ಕಾರ್ಯಾಧ್ಯಕ್ಷೆ ಜಯಂತಿ ಮೊಯಿಲಿ, ಸತೀಶ್ ಸಾಲಿಯಾನ್, ಚಂದ್ರಹಾಸ್ ಎನ್. ಶೆಟ್ಟಿ, ನಾಗವೇಣಿ ಎಸ್. ಶೆಟ್ಟಿ, ಶೇಖರ್ ಶೆಟ್ಟಿ, ಶ್ರೀಧರ ಶೆಟ್ಟಿ, ಚಿತ್ರೇಶ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಸಂಪತ್ ಶೆಟ್ಟಿ ಮತ್ತು ಸುಧಾಕರ ಸಫಲಿಗ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಯಂತಿ ಮೊಯಿಲಿ ಸ್ವಾಗತಿಸಿದರು. ಮೈಂಡ್ ಮವರ್ಸ್ ಆ್ಯಂಡ್ ಡೆವಲಪರ್ನ ಸತೀಶ್ ಸಾಲಿಯಾನ್ ಅವರು ವಿದ್ಯಾರ್ಥಿಗಳಿಗೆ ಕ್ಯಾರಿಯರ್ ಗೈಡೆನ್ಸ್ ಮತ್ತು ಚೂಸ್ ದ ರೈಟ್ ಲ್ಡ್, ಟೈಮ್ ಮ್ಯಾನೇಜೆಮ್ಮೆಂಟ್ ಮತ್ತು ಇನ್ನಿತರ ವಿಷಯಗಳ ಬಗ್ಗೆ ಉದಾಹರಣೆಯ ಸಹಿತ ಸ್ಪರ್ಧೆಗಳ ಮೂಲಕ ಅವರಿಗೆ ತಿಳಿಸಿದರು. ಚೆಂಬೂರು ವಲಯ ಶಾಲೆಯಿಂದ ಸುಮಾರು 76 ವಿದ್ಯಾರ್ಥಿ ಗಳು ಮತ್ತು 20 ಪೋಷಕರು ಉಪಸ್ಥಿತರಿದ್ದರು.
ಶಾಲಿನಿ ಶೆಟ್ಟಿಯವರು ಪ್ರಾಥನೆಗೈದರು. ಶಿವಛತ್ರಪತಿ ಪುರಸ್ಕೃತ ಜಯ ಎ. ಶೆಟ್ಟಿ ಮತ್ತು ಇಂಟರ್ನ್ಯಾಷನಲ್ ಮ್ಯಾರಥಾನ್ ರನ್ನರ್ ಸತೀಶ್ ಸಾಲಿಯಾನ್ ಇವರನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು. ಜಯಂತಿ ಮೊಯಿಲಿಯವರು ಸಹಕರಿಸಿದ ಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಂಘದ ಗೌರವ ಅಧ್ಯಕ್ಷ ಸತೀಶ್ ಶೆಟ್ಟಿ ಅವರ ಸೇವಾರ್ಥವಾಗಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು