ಪೆಸ್ತೂಮ್‌ ಸಾಗರ್‌ ಕರ್ನಾಟಕ ಸಂಘ:ವಸ್ತು ಪ್ರದರ್ಶನ,ಮಾರಾಟ


Team Udayavani, Oct 26, 2017, 1:49 PM IST

7.jpg

ಮುಂಬಯಿ: ಚೆಂಬೂರು ತಿಲಕ್‌ ನಗರ ಪೆಸ್ತೂಮ್‌ಸಾಗರ್‌ ಕರ್ನಾಟಕ ಸಂಘದ ವತಿಯಿಂದ ದೀಪಾವಳಿಯ ಅಂಗವಾಗಿ ವಸ್ತು ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವು ಸ್ಥಳೀಯ ಸಭಾಗೃಹದಲ್ಲಿ ಇತ್ತೀಚೆಗೆ ನಡೆಯಿತು.

ತಿಲಕ್‌ನಗರ ಪೆಸ್ತೂಮ್‌ಸಾಗರ್‌ ಕರ್ನಾಟಕ ಸಂಘದ ವತಿಯಿಂದ ನಡೆದ ವಸ್ತು ಪ್ರದರ್ಶನ ಮತ್ತು ಮಾರಾಟ  ಕಾರ್ಯಕ್ರಮದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ತುಳು ಕನ್ನಡಿಗರು ಪಾಲ್ಗೊಂಡಿರುವುದು ಅಭಿನಂದನೀಯ. ಐಕ್ಯತೆಯೇ ಸಾಧನೆಗೆ ಮೂಲವಾಗಿದ್ದು, ಪ್ರತಿಯೊಂದು ಕಾರ್ಯಕ್ರಮಗಳಲ್ಲೂ ಮಹಿಳೆಯರ ಪಾತ್ರವೇ ಹಿರಿದಾಗಿದ್ದು, ಯಾವುದೇ ಜಾತಿ, ಮತ, ಭೇದವಿಲ್ಲದೆ, ಒಂದೇ  ಮನಸ್ಸಿನಿಂದ ನಾವೆಲ್ಲರೂ ಒಂದಾಗಿ ಕಾರ್ಯನಿರತರಾಗಬೇಕು ಎಂದು ತಿಲಕ್‌ನಗರ ಪೆಸ್ತೂಮ್‌ಸಾಗರ್‌ ಕರ್ನಾಟಕ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ನಾಗವೇಣಿ ಶ್ರೀಧರ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹೇಳಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಸಮಾಜ ಸೇವಕಿ ಸುಶೀಲಾ ಸಿ. ಶೆಟ್ಟಿ ಅವರು ಮಾತನಾಡಿ, ನಮ್ಮ ಮಹಿಳೆಯರ ಹಾಗೂ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುತ್ತಿರುವ ಈ ಕರ್ನಾಟಕ ಸಂಘದ ಕಾರ್ಯ ಅಭಿನಂದನೀಯ. ಮಕ್ಕಳಿಗೆ ನಮ್ಮ ನಾಡು-ನುಡಿ, ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಸ್ಥಾನೀಯ ನಗರ ಸೇವಕ ಸುಶಾಂತ್‌ ಸಾವಂತ್‌ ಅವರು ಮಾತನಾಡಿ, ನಾನು ಕೂಡಾ ಕರ್ನಾಟಕ ಸಂಘದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದೇನೆ. ಈ ಸಂದರ್ಭದಲ್ಲಿ ನನಗೆ ಕರ್ನಾಟಕದಲ್ಲಿದ್ದೇನೆ ಎಂದು ಭಾಸವಾಗುತ್ತದೆ. ನಿಮ್ಮ ಸ್ವಂತ ಕಟ್ಟಡದ ಬಗ್ಗೆ ನನಗೂ ಕಾಳಜಿಯಿದೆ. ಇದರ ಬಗ್ಗೆ ನಾನು ಮುತುವರ್ಜಿ ವಹಿಸಿ ಸಹಕರಿಸುತ್ತೇನೆ ಎಂದರು.

ಇನ್ನೋರ್ವ ಅತಿಥಿ ನ್ಯಾಯವಾದಿ ನಿತಿನ್‌ ನಿಕಂ ಅವರು ಮಾತನಾಡಿ, ಕರ್ನಾಟಕ ಸಂಘದ ಮಹಿಳೆಯರೆಲ್ಲ ಒಟ್ಟಾಗಿ ಸೇರಿ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುತ್ತಿದ್ದಾರೆ. ಸಂಘದ ಎಲ್ಲಾ ಕಾರ್ಯಕ್ರಮಗಳಲ್ಲೂ ನನ್ನನ್ನು ಗೌರವಿಸುತ್ತಿರುವುದಕ್ಕೆ ಆಭಾರಿಯಾಗಿದ್ದೇನೆ ಎಂದು ನುಡಿದರು.

ಉದ್ಯಮಿ ಶೈಲೇಶ್‌ ಮೆಹ್ತಾ ಅವರು ಮಾತನಾಡಿ, ಸಂಸ್ಥೆಯು ಹಮ್ಮಿಕೊಳ್ಳುವ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ನಮ್ಮ ಸಮಾಜಸೇವೆಗೆ ನನ್ನ ಸಹಕಾರ, ಪ್ರೋತ್ಸಾಹ ಸದಾಯಿದೆ ಎಂದರು.

ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ನಿತ್ಯಾನಂದ ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಘದ ಮಹಿಳೆಯರು ಕಾರ್ಯಚಟುವಟಿಕೆಗಳನ್ನು ಕಂಡಾಗ ಆನಂದವಾಗುತ್ತಿದೆ. ಸ್ವಂತ ಕಚೇರಿಯ ಬಗ್ಗೆ ಸುಶಾಂತ್‌ ಸಾವಂತ್‌ ಅವರು ಕಾರ್ಯಪ್ರವೃತ್ತರಾಗಬೇಕು ಎಂದು ನುಡಿದರು.

ಸಂಘದ ಅಧ್ಯಕ್ಷ ರಾಮಣ್ಣ ದೇವಾಡಿಗ ಅವರು ಮಾತನಾಡಿ, ನಮ್ಮಿಂದ ವಲಯದ ಎಲ್ಲ ಕನ್ನಡಿಗರಿಗೆ ಸಹಾಯವಾಗಬೇಕು. ಎಲ್ಲರೂ ಒಗ್ಗಟ್ಟಿನಿಂದ ನಾಡು-ನುಡಿಯ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳೋಣ ಎಂದು ನುಡಿದು ಮಹಿಳಾ ಸದಸ್ಯೆಯರ ಕಾರ್ಯಚಟುವಟಿಕೆ ಗಳನ್ನು ಪ್ರಶಂಸಿಸಿದರು.

ಮಾಲತಿ ಜೆ. ಮೊಲಿ ಕಾರ್ಯಕ್ರಮ ನಿರ್ವಹಿಸಿದರು. ವಿಶಾಲಾಕ್ಷೀ ವಿ. ಶೆಟ್ಟಿ ಪ್ರಾರ್ಥನೆಗೈದರು. ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಸಂಘದ ಹಾಗೂ ಮಹಿಳಾ ವಿಭಾಗದ ಎಲ್ಲ ಪದಾಧಿಕಾರಿಗಳನ್ನು, ಸದಸ್ಯರನ್ನು ಹಾಗೂ ಸ್ಥಳವಾಕಾಶವನ್ನು ಮಾಡಿಕೊಟ್ಟ ನಂದು ಕದಂ, ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಿದ್ದ ಉದ್ಯಮಿ ಸತೀಶ್‌ ಶೆಟ್ಟಿ ಅವರನ್ನು ಶಾಲಿನಿ ಶೆಟ್ಟಿ ಅವರು ಸಂಘದ ಪರವಾಗಿ ಅಭಿನಂದಿಸಿ ಶುಭ ಹಾರೈಸಿದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.