ಕಲೆಯ ಉಳಿವಿನಲ್ಲಿ ಪೊಲ್ಯರ ಪಾತ್ರ ಅತಿ ಮಹತ್ತರ


Team Udayavani, Nov 9, 2018, 4:34 PM IST

554.jpg

ಮುಂಬಯಿ: ಯಕ್ಷಧ್ವನಿ ಮುಂಬಯಿ ಇದರ 14ನೇ ವಾರ್ಷಿಕೋತ್ಸವ ಸಂಭ್ರಮವು ನ.4 ರಂದು ಅಪರಾಹ್ನ ಭಾಂಡೂಪ್‌ ಪಶ್ಚಿಮದ ಜಯಶ್ರೀ ಪ್ಲಾಜಾದಲ್ಲಿರುವ ಜಗನ್ನಾಥ್‌ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಈ ಸಂದರ್ಭದಲ್ಲಿ ಮುಂಬಯಿಯ ಹಿರಿಯ ಭಾಗವತರಾದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರ ಯಕ್ಷರಂಗಕ್ಕೆ ಕೊಡುಗೆಯ ಬಗ್ಗೆ ವಿಚಾರಗೋಷ್ಠಿಯನ್ನು ಆಯೋಜಿಸಲಾಗಿದ್ದು, ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪೊಲ್ಯ ಲಕ್ಷಿ¾à ನಾರಾಯಣ ಶೆಟ್ಟಿ ಅವರು ತೆಂಕು ಮತ್ತು ಬಡಗು ತಿಟ್ಟುಗಳೆರಡಲ್ಲೂ ಮೇರು ಭಾಗವತರಾಗಿ ಮಿಂಚಿದ ಪ್ರಸಿದ್ಧ ಭಾಗವತರ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಅವರಂತಹ ಭಾಗವತರನ್ನು ಇದುವರೆಗೂ ಯಾರೂ ಕಂಡಿಲ್ಲ. ಕಾಳಿಂಗ ನಾವುಡರೊಡನೆ ದ್ವಂದ ಭಾಗವತಿಕೆ ನಡೆಸಿದ ಕೀರ್ತಿ ಅವರಿಗಿದೆ. ಮುಂಬಯಿಯಲ್ಲಿ ಯಕ್ಷಗಾನದ ಉಳಿವಿನಲ್ಲಿ ಪೊಲ್ಯರ ಪಾತ್ರ ಮಹತ್ತರವಾಗಿದೆ ಎಂದರು.

ಸಮನ್ವಯಕರಾಗಿ ಆಗಮಿಸಿದ ಪ್ರಸಿದ್ಧ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರು ಮಾತನಾಡಿ, ಪೊಲ್ಯ ಅವರೋರ್ವ ಮೇರು ಭಾಗವತರಾಗಿದ್ದು, ಅವರು ಶಿಷ್ಯಂದಿರನ್ನು ತಯಾರಿಸದಿರುವುದು ದೊಡ್ಡ ಕೊರತೆಯಾಗಿದೆ. ಆದ್ದರಿಂದ ಮುಂದೆಯೂ ಯೋಚಿಸಿ ಯಕ್ಷ ರಂಗಕ್ಕೆ ಅವರು ಶಿಷ್ಯರನ್ನು ರೂಪಿಸುವ ಕಡೆಗೆ ಗಮನ ಹರಿಸಬೇಕು ಎಂದು ನುಡಿದರು.

ಯಕ್ಷಗಾನ ಕಲಾವಿದ ಶೇಣಿ ಶ್ಯಾಂ ಭಟ್‌,  ಯಕ್ಷಗಾನ ಸಾಹಿತಿ ಕೊಲ್ಯಾರು ರಾಜು ಶೆಟ್ಟಿ, ಯಕ್ಷಗಾನ ಸಂಘಟಕ ದಾಮೋದರ ಶೆಟ್ಟಿ ಇರುವೈಲು, ಕಲಾವಿದ ವಿಠಲ್‌ ಪ್ರಭು, ಭಾಗವತರಾದ ಮಾಳ ರಾಘವೇಂದ್ರ ಭಟ್‌ ಮೊದಲಾದವರು ಪೊಲ್ಯರ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಾದಲೋಲ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರು ಮಾತನಾಡಿ, ಭಾಗವತಿಕೆಯಿಂದಲೇ ನಾನು ಅಭಿಮಾನಿಗಳನ್ನು ಪಡೆದಿದ್ದೇನೆ. ಯಕ್ಷಗಾನದಲ್ಲಿ ನಿಷ್ಠಾವಂತರಾಗಿ ದುಡಿಯುವವರಿಗೆ ನಾನು ಖಂಡಿತವಾಗಿಯೂ ಭಾಗವತಿಕೆಯ ಬಗ್ಗೆ ಕಲಿಸಲು ಸಿದ್ಧನಿದ್ದೇನೆ ಎಂದು ಹೇಳಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿ ಶುಭಹಾರೈಸಿದರು.

ಪ್ರಸಿದ್ಧ ಹಾಸ್ಯ ಕಲಾವಿದ ಜಯರಾಮ್‌ ಆಚಾರ್ಯ ಅವರನ್ನು ಇದೇ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. ಸಮ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶೇಖರ್‌ ಶೆಟ್ಟಿ ಇನ್ನ ಅವರು ವಹಿಸಿ ಮಾತನಾಡಿ ಶುಭಹಾರೈಸಿದರು. ಆಶೀರ್ವಚನ ನೀಡಿದ ಶ್ರೀ ಅರುಣಾನಂದ ತೀರ್ಥ ಸ್ವಾಮೀಜಿ ಅವರು, ಹಿಂದೂ ಧರ್ಮದಲ್ಲಿ ಜಾಗೃತಿಯನ್ನು ಮೂಡಿಸುವ ಕೆಲಸವು ಯಕ್ಷಗಾನದಿಂದ ಆಗಬೇಕು. ಇಂದು ಹಿಂದೂ ಧರ್ಮವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಧರ್ಮದ ಆಚಾರ- ವಿಚಾರಗಳನ್ನು ಮೂಢನಂಬಿಕೆ ಎಂದು ಬಿಂಬಿಸಿ ಹಿಂದು ಧರ್ಮವನ್ನು ಅವಹೇಳನ ಮಾಡುವ ಕೆಲಸವು ನಡೆಯುತ್ತಿದೆ. ಈ ಬಗ್ಗೆ ನಾವು ಜಾಗೃತರಾಗಿರಬೇಕು. ಮಕ್ಕಳಿಗೆ ಅದರ ಅರಿವನ್ನು ಮೂಡಿಸಬೇಕು, ಭಕ್ತಿಯ ಮಾರ್ಗದಲ್ಲಿ ನಡೆದರೆ ನಮಗೆ ಜ್ಞಾನದ ಅರಿವಾಗುತ್ತದೆ ಎಂದರು.

ವೇದಿಕೆಯಲ್ಲಿ ತೀಯಾ ಸಮಾಜ ಮುಂಬಯಿ ಅಧ್ಯಕ್ಷ ರವಿ ಎಸ್‌. ಮಂಜೇಶ್ವರ, ಕರ್ನಾಟಕ ಸಂಘ ಭಾಂಡೂಪ್‌ನ ಅಧ್ಯಕ್ಷ ಗಿರೀಶ್‌ ಆರ್‌. ಶೆಟ್ಟಿ, ಬಂಟರ ಸಂಘ ಮೀರಾ-ಭಾಯಂದರ್‌ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್‌ ಶೆಟ್ಟಿ, ಶ್ರೀ ಶನೀಶ್ವರ ಮಂದಿರ ಭಟ್ಟಪಾಡಿ ಭಾಂಡೂಪ್‌ನ ಅಧ್ಯಕ್ಷ ದಯಾನಂದ ಶೆಟ್ಟಿ, ತೀಯಾ ಬೆಳಕಿನ ಸಂಪಾದಕ ಶ್ರೀಧರ  ಸುವರ್ಣ, ಸಸಿಹಿತ್ಲು ಭಗವತೀ ಸಂಘದ ಕೋಶಾಧಿಕಾರಿ ರಮೇಶ್‌ ಸಾಲ್ಯಾನ್‌, ಉದ್ಯಮಿ ಸುಧಾಕರ ಬೆಳ್ಚಡ, ಘಾಟ್‌ಕೋಪರ್‌ ಬಿಜೆಪಿ ದಕ್ಷಿಣ ಸಮಿತಿಯ ಸದಾನಂದ ಶೆಟ್ಟಿ ಕಿನ್ನಿಗೋಳಿ, ಉದ್ಯಮಿ, ರಾಜೇಶ್‌ ಸುವರ್ಣ, ಜನಪ್ರಿಯ ಯಕ್ಷಗಾನ ಮಂಡಳಿಯ ಅಧ್ಯಕ್ಷ ರವೀಂದ್ರ ಪೈ, ಉದ್ಯಮಿ ಕೆ. ಜೆ. ಕೋಟ್ಯಾನ್‌, ಸೀತಾರಾಮ ಜಿ. ಕರ್ಕೇರ ಮೊದಲಾದವರು ಉಪಸ್ಥಿತರಿದ್ದು ಶುಭಹಾರೈಸಿದರು.
ಇದೇ ಸಂದರ್ಭದಲ್ಲಿ ಶಂಭು ಕೆ. ಸನಿಲ್‌ ಅವರ ಧಾರ್ಮಿಕ ಗ್ರಂಥ ಅಮೃತ ಸರೋವರವನ್ನು ಬಿಡುಗಡೆಗೊಳಿಸಲಾಯಿತು. 

ರಂಗನಿರ್ದೇಶಕ ಮನೋಹರ ಶೆಟ್ಟಿ ನಂದಳಿಕೆ ಕಾರ್ಯಕ್ರಮ ನಿರ್ವಹಿಸಿದರು. ಯಕ್ಷಧ್ವನಿಯ ಸಂಯೋಜಕ ಯಕ್ಷಗಾನ ಕಲಾವಿದ ರಾಜ ತುಂಬೆ ಅವರು ಸಂಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಊರಿನ ಹಾಗೂ ಮುಂಬಯಿಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಗದಾಯುದ್ಧ ಯಕ್ಷಗಾನ ಪ್ರದರ್ಶನಗೊಂಡಿತು.  

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.