ಪೊವಾಯಿ ಮಹಾಶೇಷ ರುಂಡ ಮಾಲಿನಿ ಮಂದಿರ: ನಾಗರ ಪಂಚಮಿ 


Team Udayavani, Aug 16, 2018, 3:12 PM IST

1508mum06a.jpg

ಮುಂಬಯಿ: ಪೊವಾಯಿಯ ಶ್ರೀ ಮಹಾಶೇಷ ರುಂಡ ಮಾಲಿನಿ ಮಂದಿರದಲ್ಲಿ ನಾಗರ ಪಂಚಮಿ ಉತ್ಸವವು ಆ. 15 ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಶ್ರೀ ಕ್ಷೇತ್ರದ ಶ್ರೀ ಸುವರ್ಣ ಬಾಬಾ ಅವರ ಮುಂದಾಳತ್ವದಲ್ಲಿ ಆ. 14 ರಂದು ಕುಕ್ಕೆ ಸುಬ್ರಹ್ಮಣ್ಯ ದೇವರ ಮುಂಭಾಗದಲ್ಲಿ 65 ಅಡಿ ಎತ್ತರದ ತಾಮ್ರ ಕವಚದ ಕೊಡಿಮರ ಧ್ವಜಸ್ತಂಭಕ್ಕೆ ಧ್ವಜಾರೋಹಣದೊಂದಿಗೆ ಉತ್ಸವವು ಆರಂಭಗೊಂಡಿತು. ಮುಂಜಾನೆ 5 ರಿಂದ ಮಧ್ಯಾಹ್ನ 1 ರವರೆಗೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ಗಣಪತಿ, ಪೂಜೆ, ನವಗ್ರಹ ಪೂಜೆ, ಶನಿಶಾಂತಿ, ತೆಂಗಿನಕಾಯಿ ಹೋಮ, ನವಗ್ರಹ ಪೂಜೆ, ಸರ್ಪಶಾಂತಿ, ನಾರಾಯಣ ನಾಗಬಲಿ, ಆಶ್ಲೇಷ ಬಲಿ, ಬ್ರಾಹ್ಮಣ ಪೂಜೆ, ಬ್ರಹ್ಮಚಾರಿ ಪೂಜೆ, ಅಶ್ವತ್ಥ ವಿವಾಹ, ಶ್ರೀ ನಾಗದೇವರಿಗೆ ಹಾಲಿನ ನೈವೇಧ್ಯ, ಅಭಿಷೇಕ ಹಾಗೂ ಮಧ್ಯರಾತ್ರಿ 12 ರಿಂದ ಶ್ರೀ ದೇವಿಗೆ ಕುಂಭಾಭಿಷೇಕ ಜರಗಿತು.

ಆ. 15 ರಂದು ಮುಂಜಾನೆ 5 ರಿಂದ ಸಂಜೆ 6 ರವರೆಗೆ ಶ್ರೀ ಕ್ಷೇತ್ರದಲ್ಲಿ ನಾಗರ ಪಂಚಮಿಯು ನಾಗ ದೇವರ ಸನ್ನಿಧಿಯಲ್ಲಿ ಹಾಗೂ ಮಹಾಪೂಜೆಯು ಮಹಾಶೇಷ ರುಂಡಮಾಲಿನಿ ದೇವರ ಸನ್ನಿಧಾನದಲ್ಲಿ ನೆರವೇರಿತು. ಧಾರ್ಮಿಕ ಕಾರ್ಯಕ್ರಮಗಳಾಗಿ ಶ್ರೀ ಮಹಾಗಣಪತಿ ಪೂಜೆ, ನವಗ್ರಹ ಹೋಮ, ದಿಕಾ³ಲ ಹೋಮ, ಅಷ್ಟ ದಿಕಾ³ಲ ಬಲಿ, ಶಿಖರ ಕುಂಭಾಭಿಷೇಕ, ಶ್ರೀ ನಾಗದೇವರ ಸನ್ನಿಧಿಯಲ್ಲಿ ನವಕ ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಸಹಸ್ರ ನಾರಿಕೇಳಾಭಿಷೇಕ, ನವಕಲಶ ಮಹಾಭಿಷೇಕ, ಮಧ್ಯಾಹ್ನ 1 ರಿಂದ ಅಪರಾಹ್ನ 2 ರವರೆಗೆ ನಾಗದೇವರ ಮೂರ್ತಿ ಬಲಿ, ನಾಗದರ್ಶನ, ಶ್ರೀ ಮಹಾಶೇಷ ರುಂಡಮಾಲಿನಿ ದೇವರ ತೀರ್ಥ ಪ್ರಸಾದ ವಿತರಣೆ ಜರಗಿತು.

ವೈಧಿಕ ವಿಧಿ-ವಿಧಾನಗಳು ವೇ|ಮೂ| ಸಂತೋಷ್‌ ಭಟ್‌ ಮತ್ತು ಬಳಗದವರಿಂದ ನೆರವೇರಿತು. ಬೆಳಗ್ಗೆ 10 ರಿಂದ ಎರ್ಮಾಳ್‌ ಗಣೇಶ್‌ ಮತ್ತು ಬಳಗದವರಿಂದ ಭಕ್ತಿಪ್ರದಾನ ರಸಮಂಜರಿ ಕಾರ್ಯಕ್ರಮವನ್ನು ಆಯೋಜಿಸ ಲಾಗಿತ್ತು. ಉತ್ಸವದಲ್ಲಿ ವಿವಿಧ ರಾಜಕೀಯ ಧುರೀಣರು. ಸಚಿವರು, ಶಾಸಕರು, ನಗರ ಸೇವಕರು, ಬಾಲಿವುಡ್‌ ನಟ-ನಟಿಯರು, ವಿವಿಧ ಕ್ಷೇತ್ರಗಳ ಸಾಧಕ ಅಧಿಕಾರಿಗಳು, ನಗರದ ವಿವಿಧ ಜಾತೀಯ, ತುಳು-ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಜಾತಿ, ಮತ, ಧರ್ಮವನ್ನು ಮರೆತು ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಶ್ರೀ ಕ್ಷೇತ್ರದ ಧರ್ಮದರ್ಶಿ ಶ್ರೀ ಸುವರ್ಣ ಬಾಬಾ ಮತ್ತು 9 ತಾಯಿಯ ಮಕ್ಕಳು ಹಾಗೂ ಕೇಶವ ಅಂಚನ್‌, ಜಗದೀಶ್‌ ಸುವರ್ಣ, ನ್ಯಾಯವಾದಿ ರವಿ ಕೋಟ್ಯಾನ್‌, ಸುಧಾಕರ ಜಿ. ಪೂಜಾರಿ, ರಾಹುಲ್‌ ಸುವರ್ಣ, ಸಂತೋಷ್‌ ಸುವರ್ಣ, ಕರುಣಾಕರ ಜಿ. ಶೆಟ್ಟಿ, ಅಶೋಕ್‌ ಕುಟ್ಟಿ, ಲಕ್ಷ¾ಣ್‌ ಪೂಜಾರಿ ಇವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.     

ಚಿತ್ರ-ವರದಿ: ಸುಭಾಷ್‌ ಶಿರಿಯಾ 

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.