ಪ್ರಕಾಶಾಭಿನಂದನೆಯ ಮೂಲಕ ಯೋಗ್ಯ ವ್ಯಕ್ತಿಗೆ ಗೌರವ: ಅಜಿತ್ ಕುಮಾರ್ ರೈ
Team Udayavani, Dec 20, 2019, 5:32 PM IST
ಮುಂಬಯಿ, ಡಿ. 19: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಡಿ. 25ರಂದು ಬಂಗ್ರ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿರುವ ಪ್ರಕಾಶಾಭಿನಂದನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಬಂಟ್ಸ್ ಹಾಸ್ಟೆಲ್ನ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಜರಗಿದ ಪೂರ್ವಭಾವಿ ಸಭೆಯಲ್ಲಿ ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ ಬಿಡುಗಡೆಗೊಳಿಸಿದರು.
ಕೆ. ಪ್ರಕಾಶ್ ಶೆಟ್ಟಿ ಅವರು ಸಮಾಜದಲ್ಲಿ ಸಾಧನೆಯ ಮೂಲಕ ಸಾರ್ಥಕ ಬದುಕು ಕಂಡವರು. ಯೋಗ್ಯ ವ್ಯಕ್ತಿಗೆ ಸಲ್ಲುವ ಗೌರವ ಸಮ್ಮಾನದಲ್ಲಿ ಸಮಾಜದ ಎಲ್ಲ ಜನರು ಭಾಗವಹಿಸಿ ಅವರು ಸಮಾಜಕ್ಕೆ ಮಾಡಿದ ಕೆಲಸ ಕಾರ್ಯಕ್ಕೆ ಕೃತಜ್ಞತೆ ಸಲ್ಲಿಸೋಣ ಎಂದು ಅಜಿತ್ ಕುಮಾರ್ ರೈ ತಿಳಿಸಿದರು.
ಪ್ರಕಾಶಾಭಿನಂದನೆ ಸಮಿತಿಯ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಮಾತನಾಡಿ, ಪ್ರಕಾಶಾಭಿನಂದನೆ ಕಾರ್ಯ ಕ್ರಮ ಜಾತ್ಯತೀತವಾಗಿ, ಪಕ್ಷಾತೀತವಾಗಿ, ಆದರ್ಶಯುತವಾಗಿ ನಡೆಯುತ್ತಿದೆ. ಅವರ ಬದುಕು ಬೇರೆಯವರಿಗೆ ಪ್ರೇರಣೆಯಾಗಬೇಕು. ಅವರ ಪ್ರಾಮಾಣಿಕತೆಗೆ ಸಲ್ಲುವ ಗೌರವ, ಸಮ್ಮಾನದಲ್ಲಿ ಸಮಾಜ ಒಟ್ಟಾಗಿ ಕೆಲಸ ಮಾಡಬೇಕು ಎಂದರು.
ಪ್ರಕಾಶಾಭಿನಂದನಾ ಸಮಿತಿಯ ಸಂಚಾಲಕ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತನಾಡಿ, ಮೂರು ತಿಂಗಳ ಹಿಂದೆ ಕಾರ್ಯ ರೂಪಕ್ಕೆ ಬಂದ ಪ್ರಕಾಶಾಭಿನಂದನೆ ಕಾರ್ಯಕ್ರಮದ ಕುರಿತು ಈಗಾಗಲೇ 100ಕ್ಕೂ ಹೆಚ್ಚು ಸಭೆಗಳನ್ನು ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಮುಂಬಯಿ, ಬೆಂಗಳೂರು ಸಹಿತ ಕರಾವಳಿ ಜಿಲ್ಲೆಯ ಎಲ್ಲ ಬಂಟರ ಸಂಘಗಳು ಸಭೆಗಳನ್ನು ಆಯೋಜಿಸಿ ಬೇರೆ ಬೇರೆ ಸಮಿತಿ ಗಳನ್ನು ರಚಿಸಲಾಗಿದೆ ಎಂದರು.
ಸಮಾರಂಭದಲ್ಲಿ ಪ್ರಕಾಶಾಭಿನಂದನೆ ಸಮಿತಿಯ ಕೋಶಾಧಿಕಾರಿ, ಪಡುಬಿದ್ರೆ ಬಂಟರ ಸಂಘದ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ, ಬಂಟರ ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಿಟ್ಟೆ ಗುತ್ತು ರವಿರಾಜ ಶೆಟ್ಟಿ, ಎಂ. ಸುಂದರ ಶೆಟ್ಟಿ, ಜಯರಾಮ ಸಾಂತ, ಕೃಷ್ಣಪ್ರಸಾದ್ ರೈ, ಜಗನ್ನಾಥ ಶೆಟ್ಟಿ ಬಾಳ, ಕೇಶವ ಮಾರ್ಲ, ಉಮೇಶ್ ರೈ, ಸಬಿತಾ ಶೆಟ್ಟಿ, ಗೋಪಾಲ ಶೆಟ್ಟಿ, ರತ್ನಾಕರ ಶೆಟ್ಟಿ ಎಕ್ಕಾರ್, ಆನಂದ ಶೆಟ್ಟಿ, ಎನ್. ಮುರಳೀಧರ ಶೆಟ್ಟಿ, ಉಲ್ಲಾಸ್ ಆರ್. ಶೆಟ್ಟಿ, ಡಾ| ಸಚ್ಚಿದಾನಂದ ರೈ, ಮನೀಶ್ ರೈ, ಸುಕೇಶ್ ಚೌಟ ಉಳ್ಳಾಲ ಗುತ್ತು, ಕಾವು ಹೇಮನಾಥ ಶೆಟ್ಟಿ, ಜಯಲಕ್ಷ್ಮೀ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಮಂಜುಳಾ ಶೆಟ್ಟಿ ಮತ್ತು ಪ್ರಕಾಶ್ ಮೇಲಾಂಟ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ