ಪ್ರಮೋದ್ ಮಧ್ವರಾಜ್ ಪುಣೆ ಬಂಟರ ಭವನಕ್ಕೆ ಭೇಟಿ
Team Udayavani, May 3, 2019, 3:15 PM IST
ಪುಣೆ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್ – ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಪುಣೆ ಬಂಟರ ಭವನಕ್ಕೆ ಭೇಟಿ ನೀಡಿದರು.
ಅವರನ್ನು ಪುಣೆ ಬಂಟರ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಶಾಲು ಹೊದೆಸಿ, ನೆನಪಿನ ಕಾಣಿಕೆ ನೀಡಿ ಸಮ್ಮಾನಿಸಿದರು. ಮೊದಲಿಗೆ ಭವನದ ಆರತಿ ಶಶಿಕಿರಣ್ ಶೆಟ್ಟಿ ಚಾವಡಿಯಲ್ಲಿ ದೇವರಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು.
ಅನಂತರ ಪೂರ್ತಿ ಭವನವನ್ನು ವೀಕ್ಷಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು, ಭವನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಪುಣೆಯ ಬಂಟ- ಬಾಂಧವರು ಅದ್ಭುತವಾದ ಬಲು ಸುಂದರವಾದ ಸುಸಜ್ಜಿತವಾದ ಬಂಟರ ಭವನವನ್ನು ನಿರ್ಮಿಸಿದ್ದು, ಇದನ್ನು ಕಂಡಾಗ ಹೊಸ ಅನುಭವವಾಗುತ್ತಿದೆ. ವಿವಿಧ ಸಮಾಜಗಳ ಸಮುದಾಯಗಳ ಹಲವಾರು ಭವನಗಳನ್ನು ನೋಡಿ ದ್ದೇನೆ. ಬಹುಶ ಇಂಥ ಸುಂದರ ವಾದ ಭವನವನ್ನು ಇನ್ನೆಲ್ಲೂ ಕಂಡಿಲ್ಲ. ಪುಣೆಯ ಬಂಟರ ಸಂಘದ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಕಾರ್ಯ ನಿಜವಾಗಿಯೂ ಶ್ಲಾಘನೀಯವಾಗಿದೆ ಎಂದು ನುಡಿದರು.
ಈ ಸಂದರ್ಭ ಪುಣೆ ಬಂಟರ ಸಂಘದ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ
ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಕ್ಯಾಟರಿಂಗ್ ಸಮಿತಿ ಕಾರ್ಯಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಸುಜಿತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಸತೀಶ್ ಶೆಟ್ಟಿ, ಮಹಿಳಾ ವಿಭಾಗದ ಕೋಶಾಧಿಕಾರಿ ಶಮ್ಮಿ ಅಜಿತ್ ಹೆಗ್ಡೆ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಕಾರ್ಯದರ್ಶಿ ಸುಧಾಕರ ಸಿ. ಶೆಟ್ಟಿ, ಜಗದೀಶ್ ಬಿ. ಶೆಟ್ಟಿ, ಸಂಪತ್ ಶೆಟ್ಟಿ ,ಜಗದೀಶ್ ಶೆಟ್ಟಿ, ಅರುಣ್ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಉಪಕಾರ್ಯಾಧ್ಯಕ್ಷ ರಾಜಾರಾಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ-ವರದಿ :ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ