“ಸಮಾಜದ ಜನರ ಅಭ್ಯುದಯ ಅಸೋಸಿಯೇಶನ್‌ನ ಧ್ಯೇಯ’


Team Udayavani, Apr 16, 2021, 1:42 PM IST

programme held at mumbai

ಮುಂಬಯಿ: ಬಿಲ್ಲವರ ಅಸೋಸಿ ಯೇಶನ್‌ ಮುಂಬಯಿಯು ಉತ್ತಮ ಸೇವಾ ಕಾರ್ಯಗಳಿಂದ ಮಾದರಿ ಸಂಸ್ಥೆ ಎನಿಸಿದೆ. ಸಮಾಜದ ಜನರ ಅಭ್ಯುದಯವೇ ಅಸೋಸಿಯೇಶನ್‌ನ ಧ್ಯೇಯ. ಆರೋಗ್ಯವಂತ ಸಮಾಜ ಭಾಂದವರು ಅಸೋಸಿಯೇಶನ್‌ನ ಆಸ್ತಿ. ಎಲ್ಲರೂ ಆರೋಗ್ಯವಂತರಾಗಿ ಬಾಳಿದರೆ ಸಮಾಜಕ್ಕೆ ಉತ್ತಮ ಸೇವೆ ನೀಡಬಹುದು ಎಂದು ಎನ್‌ಸಿಪಿ ನಾಯಕ ಲಕ್ಷ್ಮಣ ಸಿ.
ಪೂಜಾರಿ ತಿಳಿಸಿದರು.

ಎ. 14ರಂದು ತುಳು, ಕನ್ನಡಿಗರಿಗಾಗಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ನೇತೃತ್ವದಲ್ಲಿ, ಯುವಾಭ್ಯುದಯ ಉಪಸಮಿತಿಯ ಆಶ್ರಯದಲ್ಲಿ ಸ್ಥಳೀಯ ಸಮಿತಿಗಳ ಸಹಕಾರದೊಂದಿಗೆ ಅಂಧೇರಿಯ ಸೆವೆನ್‌ ಹಿಲ್ಸ್‌ ಆಸ್ಪತ್ರೆಯಲ್ಲಿ ಆಯೋಜಿಸಿದ ಉಚಿತ ಕೋವಿಡ್‌ ಲಸಿಕೆ ಅಭಿಯಾನದಲ್ಲಿ ಅವರು ಮಾತನಾಡಿ, ಕೋವಿಡ್‌ ಲಸಿಕೆ ಅಭಿಯಾನದ ಪ್ರಯೋಜನ ಪಡೆಯಬೇಕು ಹಾಗೂ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ತಿಳಿಸಿದರು.

ತುಳು, ಕನ್ನಡಿಗರ ಪ್ರತಿಷ್ಠಿತ ಸಂಸ್ಥೆ ಬಿಲ್ಲವರ ಅಸೋಸಿಯೇಶನ್‌ ಕಳೆದ 89 ವರ್ಷಗಳ ಇತಿಹಾಸದಲ್ಲಿ ಹಲವಾರು ಉತ್ತಮವಾದ ಸೇವಾ ಕಾರ್ಯಗಳನ್ನು ಸಮಾಜಕ್ಕೆ ನೀಡಿದ್ದು, ಇತ್ತೀಚೆಗೆ ಬಂಟರ ಸಂಘ ಮುಂಬಯಿ ಮತ್ತು ಆಹಾರ್‌ ಸಹಭಾಗಿತ್ವದಲ್ಲಿ ಸಂಸದ ಗೋಪಾಲ ಶೆಟ್ಟಿಯವರ ಕರೆಗೆ ಓಗೊಟ್ಟು ರಕ್ತದಾನ ಶಿಬಿರದಲ್ಲಿ ಮಾನವೀಯ ಸೇವೆ ನೀಡಿದೆ. ಯಶಸ್ವಿಯಾಗಿ ನಡೆದ ಉಚಿತ ಕೋವಿಡ್‌ ಲಸಿಕೆ ಅಭಿಯಾನದಲ್ಲಿ ಸುಮಾರು 150ಕ್ಕಿಂತಲೂ ಹೆಚ್ಚಿನ ಸಮಾಜ ಭಾಂದವರು, ತುಳು, ಕನ್ನಡಿಗರು ಲಸಿಕೆಯನ್ನು ಹಾಕಿಸಿಕೊಂಡರು.

ಕಾರ್ಯಕ್ರಮದಲ್ಲಿ ಬಿಲ್ಲವರ ಅಸೋಸಿ ಯೇಶನ್‌ ಉಪಾಧ್ಯಕ್ಷ ಶ್ರೀನಿವಾಸ್‌ ಆರ್‌. ಕರ್ಕೇರ, ಗೌ. ಪ್ರ. ಕಾರ್ಯದರ್ಶಿ ಧನಂಜಯ ಶಾಂತಿ, ಗೌ. ಕೋಶಾಧಿಕಾರಿ ರಾಜೇಶ್‌ ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್‌, ಯುವಾಭ್ಯುದಯ ಉಪಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಸಂಯೋಜಕರಾದ ಸದಾಶಿವ ಎ. ಕರ್ಕೇರ, ಮಾಜಿ ಕಾರ್ಯಾಧ್ಯಕ್ಷ ನೀಲೇಶ್‌ ಪೂಜಾರಿ ಪಲಿಮಾರು, ಜಿ.ಒ.ಸಿ. ಗಣೇಶ್‌ ಕೆ. ಪೂಜಾರಿ, ಸಮಿತಿಯ ಸದಸ್ಯರಾದ ನವೀನ್‌ ಎಲ್‌. ಬಂಗೇರ, ಶಂಕರ್‌ ಸುವರ್ಣ, ಭಾರತ್‌ ಬ್ಯಾಂಕ್‌ನ ನಿರ್ದೇಶಕರಾದ ಭಾಸ್ಕರ್‌. ಎಂ. ಸಾಲ್ಯಾನ್‌, ಗಂಗಾಧರ್‌ ಜೆ. ಪೂಜಾರಿ, ಸೂರ್ಯಕಾಂತ್‌ ಜೆ. ಸುವರ್ಣ, ಪುರುಷೋತ್ತಮ ಎಸ್‌. ಕೋಟ್ಯಾನ್‌, ಅಂಧೇರಿ ಸ್ಥಳೀಯ ಸಮಿತಿಯ ಗೌ. ಕಾರ್ಯದರ್ಶಿ ಹರೀಶ್‌ ಶಾಂತಿ, ಘಾಟ್‌ಕೋಪರ್‌ ಸ್ಥಳೀಯ ಸಮಿತಿಯ ಗೌ. ಕಾರ್ಯದರ್ಶಿ ಯೋಗೇಶ್‌ ಎನ್‌. ಪೂಜಾರಿ, ಮಲಾಡ್‌ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಕೆ. ಪೂಜಾರಿ, ವಸಾಯಿ ಸ್ಥಳೀಯ ಸಮಿತಿ ಗೌ. ಕಾರ್ಯದರ್ಶಿ ಲೋಹಿತಾಕ್ಷ ಅಂಚನ್‌, ನೂರಾರು ಮಂದಿ ಸಮಾಜ ಭಾಂದವರು, ತುಳು-ಕನ್ನಡಿಗರು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ರಾಜಕೀಯ ನಾಯಕರಾದ ನಿರಂಜನ್‌ ಲಕ್ಷ್ಮಣ ಪೂಜಾರಿ, ಕಿರಣ್‌ ಪೂಜಾರಿ ಮತ್ತು ಸೇವಾದಳದ ಸದಸ್ಯರು ಸಹಕರಿಸಿದರು. ಉಪ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌ ಸ್ವಾಗತಿಸಿ, ಗೌ.ಪ್ರ. ಕಾರ್ಯದರ್ಶಿ ನಿರೂಪಿಸಿದರು. ಯುವ ಸಂಯೋಜಕ ಸದಾಶಿವ ಕರ್ಕೇರ ವಂದಿಸಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.