ಸಮಸ್ಯೆ ನಿರ್ಲಕ್ಷಿಸಿದರೆ ಪ್ರತಿಭಟನೆ: ಖಾಸಗಿ ವೈದ್ಯರ ಎಚ್ಚರಿಕೆ


Team Udayavani, Aug 3, 2020, 5:17 PM IST

ಸಮಸ್ಯೆ ನಿರ್ಲಕ್ಷಿಸಿದರೆ ಪ್ರತಿಭಟನೆ: ಖಾಸಗಿ ವೈದ್ಯರ ಎಚ್ಚರಿಕೆ

ಪುಣೆ, ಆ. 2: ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಪುಣೆಗೆ ಭೇಟಿ ನೀಡಿದ ಒಂದು ದಿನದ ಬಳಿಕ, ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸರಕಾರ ನಿರ್ಲಕ್ಷಿಸುತ್ತಿರುವ ವಿರುದ್ಧ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂತಹ ಸಂದರ್ಭ ನಮ್ಮ ಸಮಸ್ಯೆಗಳನ್ನು ಸರಕಾರವು ನಿರ್ಲಕ್ಷಿಸುತ್ತಿದೆ ಎಂದು ಭಾರತೀಯ ವೈದ್ಯಕೀಯ ಅಸೋಯೇಶನ್‌ (ಐಎಂಎ) ಮಹಾರಾಷ್ಟ್ರ ಘಟಕವು ಆಪಾದಿಸಿದೆ. ಸಣ್ಣ ನರ್ಸಿಂಗ್‌ ಹೋಂಗಳನ್ನು ಕೋವಿಡ್‌ ಆಸ್ಪತ್ರೆಗಳಾಗಿ ಮಾಡುವ ಜಿಲ್ಲಾಡಳಿತದ ನಿರ್ಧಾರದ ಕುರಿತು ಅಸೋಸಿಯೇಶನ್‌ ಅಸಮಾಧಾನ ವ್ಯಕ್ತಪಡಿಸಿ, ಇದು ಕೊರೊನಾ ಅಲ್ಲದ ರೋಗಿಗಳ ಮೇಲೆ ಪರಿಣಾಮ ಬೀರಬಹುದು ಎಂದಿದೆ.

ವೈದ್ಯರನ್ನು ಮೂರ್ಖರನ್ನಾಗಿಸುತ್ತಿರುವ ಸರಕಾರ :  ಇಂಡಿಯನ್‌ ಮೆಡಿಕಲ್‌ ಅಸೋಸಿಯೇಶನ್‌ನ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಡಾ| ಅವಿನಾಶ್‌ ಭೋಂಡ್ವೆ ಅವರು ಮಾತನಾಡಿ, ಕೋವಿಡ್ ನಿಯಂತ್ರಣ ಕ್ರಮಗಳ ಮೇಲ್ವಿಚಾರಣೆಗಾಗಿ ಮಹಾ ಸಿಎಂ ಪುಣೆಗೆ ಭೇಟಿ ನೀಡಿದರು. ಈ ಸಂದರ್ಭ ಅವರು ವೈದ್ಯರನ್ನು ಭೇಟಿಯಾಗುತ್ತಾರೆ ಎಂದು ಭಾವಿಸಿದ್ದೇವೆ. ಆದರೆ ಈ ವಿಷಯದಲ್ಲಿ ನಾವು ಎಷ್ಟು ಮೂರ್ಖರಾಗಿದ್ದೇವೆ ಎಂಬುದು ನಮಗೆ ಅರಿವಾಗಿದೆ. ಸರಕಾರದ ದೃಷ್ಟಿಕೋನದಲ್ಲಿ ವೈದ್ಯರು ಏನೂ ಮಾಡುತ್ತಿಲ್ಲ ಎಲ್ಲ ಕೆಲಸಗಳನ್ನು ಮಂತ್ರಿಗಳು ಮತ್ತು ನಿರ್ವಾಹಕರು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಭಾವಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆಗಳಿಗೆ ಅನುದಾನ ಯಾಕಿಲ್ಲ :  ಆಸ್ಪತ್ರೆಯ ಶುಲ್ಕ ಕುರಿತು ಐಎಂಎ ಆಕ್ಷೇಪ ವ್ಯಕ್ತಪಡಿಸಿದೆ ಎಂದು ಭೋಂಡ್ವೆ ಹೇಳಿದ್ದಾರೆ. ಸರಕಾರ ನಿಜವಾದ ಆಸ್ಪತ್ರೆಗಳ ಶುಲ್ಕವನ್ನು ಗಣನೆಗೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಖಾಸಗಿ ಆಸ್ಪತ್ರೆಗಳ ಶುಲ್ಕವನ್ನು ನಿಗದಿಪಡಿಸಿದೆ. ಖಾಸಗಿ ಆಸ್ಪತ್ರೆಗಳು ಸರಕಾರದಿಂದ ಯಾವುದೇ ಅನುದಾನ ಅಥವಾ ಆರ್ಥಿಕ ಸಹಾಯ ಪಡೆಯುವುದಿಲ್ಲ. ಬದಲಾಗಿ ಕೆಲವು ಹೆಚ್ಚುವರಿ ತೆರಿಗೆಗಳನ್ನು ಆಸ್ಪತ್ರೆಗಳಿಗೆ ಅನ್ವಯಿಸಲಾಗುತ್ತದೆ. ಐಸಿಯುಗೆ ದಿನಕ್ಕೆ ಮೂರು ಪಾಳಿಗಳಿಗೆ 6-7 ರೀತಿಯ ವೈದ್ಯರ ಅಗತ್ಯವಿದೆ. ಅವರೆಲ್ಲರಿಗೂ ಅಪಾರ ಸಂಖ್ಯೆಯ ಪಿಪಿಇ ಕಿಟ್‌ಗಳು ಮತ್ತು ಡಿನ್ಪೋಸಬಲ್‌ಗ‌ಳು ಬೇಕಾಗುತ್ತವೆ. ಇದಲ್ಲದೆ ಕೋವಿಡ್‌ ಆಸ್ಪತ್ರೆಗಳಲ್ಲಿ ನೈರ್ಮಲಿಕರಣವು ನಿರಂತರ ಪ್ರಕ್ರಿಯೆಯಾಗಿದೆ. ಆಸ್ಪತ್ರೆಗಳು ಈ ವೆಚ್ಚವನ್ನು ಭರಿಸಬೇಕಾಗುತ್ತದೆ. ಬಯೋಮೆಡಿಕಲ್‌ ತ್ಯಾಜ್ಯವನ್ನು ವಿಲೇವಾರಿ ಮಾಡುವುದು ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಬೋಂಡ್ವೆ ಹೇಳಿದ್ದಾರೆ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.