ಪುಣೆ ಬಿಲ್ಲವ ಸಮಾಜ ಸೇವಾ ಸಂಘ:ವಾರ್ಷಿಕ ಬೈದಶ್ರೀ ಕ್ರೀಡಾಕೂಟ ಉದ್ಘಾಟನೆ


Team Udayavani, Feb 19, 2019, 6:03 PM IST

1802mum08.jpg

ಪುಣೆ: ಮನುಷ್ಯ ಮನುಷ್ಯರ ನಡುವಿನ ಸುಮಧುರ   ಸಂಬಂಧಗಳಿಗೆ ಇರುವ ಮಹತ್ವವನ್ನು ನಾವೆಲ್ಲರೂ ತಿಳಿದಿದ್ದೇವೆ. ಬೇರೆ ಬೇರೆ ಘಟ್ಟಗಳಲ್ಲಿ ಇತರರೊಂದಿಗೆ ಬೆರೆತಾಗ ನಮ್ಮ ಜೀವನ ಶೈಲಿ ಸುಧಾರಣೆಯಾಗಿ ಸ್ನೇಹ ಗಟ್ಟಿಯಾಗುತ್ತದೆ. ಯಾವುದೇ ಭಾಷೆ, ಧರ್ಮ, ಜಾತಿ,   ಸಂಘಟನೆಗಳು ಇರಲಿ ಕೆಲವೊಮ್ಮೆ ಇಂತಹ  ಸ್ನೇಹ ಬೆಸೆಯುವ ಕಾರ್ಯಕ್ರಮಗಳನ್ನು ಆಯೋಜಿಸುತ್ತವೆ. ಇದರಲ್ಲಿ ಕ್ರೀಡಾಕೂಟವು ಒಂದಾಗಿದೆ. ಪ್ರತಿಭೆಗಳು ಬೆಳಕಿಗೆ ಬರಲು ಅದಕ್ಕೆ ಸೂಕ್ತವಾದ ವೇದಿಕೆ ಕೂಡ ಸಿಗಬೇಕು. ಇಂತಹ ಕಾರ್ಯವನ್ನು ಸಂಘವು ಮಾಡುತ್ತಿದ್ದು, ಪ್ರತಿಭಾವಂತರಿಗೆ ನಮ್ಮವರ  ಮುಂದೆ ಅಭಿಮಾನವು ದೊರೆಯುತ್ತದೆ. ಇದರಲ್ಲಿ ಕ್ರೀಡಾ ಕ್ಷೇತ್ರದಲ್ಲಿಯ ಸಾಧನೆ ವಿಶ್ವ ಮಟ್ಟದಲ್ಲೂ ಎತ್ತಿ ತೋರಬಹುದು. ಅಂತಹ ಛಲ ಸಾಧನೆಯನ್ನು ನಮ್ಮವರು ಮಾಡಿ ಸಮಾಜದಲ್ಲಿ ಅಭಿಮಾನ ಗೌರವದೊಂದಿಗೆ ಬದುಕಬೇಕು ಎಂದು ಪುಣೆ ಬಿಲ್ಲವ ಸಮಾಜ  ಸೇವಾ ಸಂಘದ ಅಧ್ಯಕ್ಷರಾದ ವಿಶ್ವನಾಥ್‌ ಪೂಜಾರಿ ಕಡ್ತಲ ಹೇಳಿದರು.

ಫೆ. 17 ರಂದು ನಗರದ ಸ್ವಾರ್‌ ಗೇಟ್‌ ಹತ್ತಿರದ ಮುಕುಂದ್‌ ನಗರದ ಚಂದ್ರ ಶೇಖರ್‌ ಅಗಸ್ಯೆ ಕಟಾರಿಯ ಕಾಲೇಜು ಮೈದಾನದಲ್ಲಿ ನಡೆದ ಬಿಲ್ಲವ ಸಮಾಜ ಸೇವಾ ಸಂಘ ಪುಣೆ ಇದರ  ವಾರ್ಷಿಕ ಬೈದಶ್ರೀ ಕ್ರೀಡಾಕೂಟವನ್ನು ಸಂಘದ ಬಾವುಟ ಹಾರಿಸಿ ಉದ್ಘಾಟಿಸಿ  ಮಾತನಾಡಿದ ಅವರು,  ಕ್ರೀಡಾ ಕ್ಷೇತ್ರವೆಂಬುದು ಒಂದು ಸ್ಪರ್ಧಾತ್ಮಕ ಕಣ. ಈ ಸ್ಪರ್ಧೆಯನ್ನು ಗೆಲ್ಲುವ ಪಣವನ್ನು ತೊಟ್ಟು  ಯುವಕ ಯುವತಿಯರು ಭಾಗವಹಿಸಬೇಕು. ಇದಕ್ಕಾಗಿ ನಮ್ಮ ಸಮಾಜವು ಇಂತಹ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಇಂದು ಇಲ್ಲಿ ಅಪಾರ ಸಂಖ್ಯೆಯಲ್ಲಿ   ಸೇರಿದ ಸಮಾಜ ಬಾಂಧವರು ಸೇರಿ ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಶಿಸ್ತು ಬದ್ಧವಾಗಿ, ಯಾವುದೇ ಲೋಪ ಬಾರದಂತೆ ನಡೆಸಿಕೊಡುವಂತೆ ವಿನಂತಿಸಿದರು.

ಪುಣೆ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾದ ಸುಂದರ್‌  ಪೂಜಾರಿ ಅವರ   ಸಭಾಧ್ಯಕ್ಷತೆಯಲ್ಲಿ ಜರಗಿದ ಈ ವೇದಿಕೆಯಲ್ಲಿ  ಅಧ್ಯಕ್ಷ‌ ವಿಶ್ವನಾಥ್‌ ಪೂಜಾರಿ, ಉಪಾಧ್ಯಕ್ಷ‌  ಸಂದೇಶ್‌ ಪೂಜಾರಿ, ರವಿಜಾ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ಶೇಖರ್‌  ಪೂಜಾರಿ, ಸದಾಶಿವ ಎಸ್‌. ಸಾಲ್ಯಾನ್‌, ಸದಾನಂದ ಪೂಜಾರಿ, ಕಾರ್ಯದರ್ಶಿ  ಸದಾನಂದ ಬಂಗೇರ, ಕೋಶಾಧಿಕಾರಿ ಹರೀಶ್‌ ಪೂಜಾರಿ, ಕ್ರೀಡಾ ಕಾರ್ಯಾಧ್ಯಕ್ಷ ರಾಜೇಶ್‌ ಪೂಜಾರಿ, ಮಹಿಳಾ ವಿಭಾಗದ ಅಧ್ಯಕ್ಷೆ ಉಮಾ ಪೂಜಾರಿ ಉಪಸ್ಥಿತರಿದ್ದರು.

ಅಧ್ಯಕ್ಷ ವಿಶ್ವನಾಥ್‌ ಪೂಜಾರಿ  ಮತ್ತು   ಗಣ್ಯರು  ಕೋಟಿ-ಚೆನ್ನಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಫೋಟೋಗೆ ದೀಪ ಬೆಳಗಿಸಿ ಪ್ರಾರ್ಥಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.  ಕಾರ್ಯದರ್ಶಿ ಸದಾನಂದ ಬಂಗೇರ ಸ್ವಾಗತಿಸಿದರು .ಕೋಶಾಧಿಕಾರಿ ಹರೀಶ್‌ ಪೂಜಾರಿ ಅವರು ಬೈದಶ್ರೀ ಕ್ರೀಡಾಕೂಟ ನಡೆದು ಬಂದ ಬಗ್ಗೆಯನ್ನು ಪ್ರಾಸ್ತಾವಿಕವಾಗಿ  ವರದಿ ಸಲ್ಲಿಸಿದರು. ಈ ಸಂದರ್ಭದಲ್ಲಿ  ವಿಶೇಷವಾಗಿ  ಕಾಶ್ಮೀರದ ಪುಲ್ವಾಮದಲ್ಲಿ ಉಗ್ರಗಾಮಿಗಳ ಕುತಂತ್ರಕ್ಕೆ ಬಲಿಯಾದ  ಭಾರತೀಯ ಸೇನೆಯ ಸೈನಿಕರಿಗೆ ವಿಶ್ವನಾಥ್‌ ಪೂಜಾರಿ ಅವರ ನುಡಿ ನಮನದೊಂದಿಗೆ ಎಲ್ಲರು ಸೇರಿ ಶ್ರ¨ªಾಂಜಲಿ ಸಲ್ಲಿಸಿದರು.

ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ  ಕ್ರೀಡಾಪಟುಗಳಾದ ರಾಜೇಶ್‌ ಪೂಜಾರಿ, ವಾಲಿಬಾಲ್‌ ಪ್ರತಿಭೆ ಪ್ರಕಾಶ್‌ ಪೂಜಾರಿ ವಾಲಿಬಾಲ್‌, ಅಥ್ಲೆಟಿಕ್‌ಪಟು ದೀಪಿಕಾ ಪೂಜಾರಿ, ಕರಾಟೆಪಟು ಸುಜಿತ್‌ ಪೂಜಾರಿ, ವೇಟ್‌ಲಿಫ್ಟರ್‌ ನಿಶ್ಮಿತಾ ಪೂಜಾರಿ, ವೇದಿಕಾ ಪೂಜಾರಿ ಟೇಕ್ವಾಂಡೋ  ಅವರು  ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾಂಗಣಕ್ಕೆ ಪ್ರದಕ್ಷಿಣೆಗೈದು   ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಿದರು. ಸಭಾ ವೇದಿಕೆಯಲ್ಲಿದ ಗಣ್ಯರನ್ನು ವಿಶ್ವನಾಥ್‌ ಪೂಜಾರಿ  ಗೌರವಿಸಿದರು.  ನಂತರ ಸಮಾಜ ಬಾಂಧವರ ವಯೋಮಿತಿಗೆ  ಅನುಗುಣವಾಗಿ  ಕ್ರೀಡಾ ಸ್ಪರ್ಧೆಗಳು ನಡೆದವು. ಸದಾನಂದ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸುದೀಪ್‌ ಪೂಜಾರಿ ಮುನಿಯಾಲ್‌ ವಂದಿಸಿದರು. 

ಚಿತ್ರ-ವರದಿ : ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.