ಪುಣೆ ದೇವಾಡಿಗ ಸಂಘ ವಾರ್ಷಿಕೋತ್ಸವದಲ್ಲಿ ಸಾಧಕರಿಗೆ ಸಮ್ಮಾನ
Team Udayavani, Feb 23, 2017, 5:38 PM IST
ಪುಣೆ: ದೇವಾಡಿಗ ಸಂಘ ಪುಣೆ ಇದರ 5ನೇ ವಾರ್ಷಿಕೋತ್ಸವ ಸಮಾರಂಭವು ಫೆ. 18ರಂದು ಪುಣೆ ಕನ್ನಡ ಸಂಘದ ಶಕುಂತಳಾ ಜಗನ್ನಾಥ ಶೆಟ್ಟಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಘದ ಅಧ್ಯಕ್ಷ ಸಚಿನ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಮಾರಂಭದ ಮುಖ್ಯ ಅತಿಥಿ ಗಳಾದ ಮುಂಬಯಿಯ ಉದ್ಯಮಿ ಹಾಗೂ ಅಖೀಲ ಭಾರತ ತುಳು ಒಕ್ಕೂಟದ ಅಧ್ಯಕ್ಷರಾದ ಧರ್ಮಪಾಲ ಯು. ದೇವಾಡಿಗ, ದುಬೈಯ ಎಲಿಗೆಂಟ… ಗ್ರೂಪ್ ಆಫ್ ಕಂಪೆನಿಯ ಆಡಳಿತ ನಿರ್ದೇಶಕರಾದ ದಿನೇಶ್ ಸಿ. ದೇವಾಡಿಗ, ಸಮಾಜದ ಹಿರಿಯ ನಾಗರಿಕರಾದ ಯಶೋದಾ ಮತ್ತು ನಾಗರಾಜ್ ದೇವಾಡಿಗ ದಂಪತಿ ಹಾಗೂ ವಾರಿಜಾ ಮತ್ತು ಸದಾಶಿವ ದೇವಾಡಿಗ ದಂಪತಿ, ವಿವಿಧ ಕ್ಷೇತ್ರದ ಸಾಧಕರಾದ ಡಾ| ಪೂನಂ ರಾಹುಲ… ಶೇರಿಗಾರ್, ಸುಮಿತ್ರಾ ವಿನೋದ್ ದೇವಾಡಿಗ, ಐಶ್ವರ್ಯಾ ಎಸ್. ದೇವಾಡಿಗ, ವಿಜಯ… ದೇವಾಡಿಗ, ಸತೀಶ್ ದೇವಾಡಿಗ, ವಿನೋದ್ ದೇವಾಡಿಗ, ಪ್ರಶಾಂಶ್ ದೇವಾಡಿಗ ಇವರುಗಳನ್ನು ಸತ್ಕರಿಸಲಾಯಿತು.
ವೇದಿಕೆಯಲ್ಲಿ ಗೌರವ ಅತಿಥಿಗಳಾದ ದೇವಾಡಿಗ ಸಂಘ ಮುಂಬಯಿ ಇದರ ಅಧ್ಯಕ್ಷರಾದ ರವಿ ಎಸ್. ದೇವಾಡಿಗ, ಏಕನಾಥೇಶ್ವರಿ ದೇವಸ್ಥಾನ ಬಾಕೂìರು ಇದರ ವಿಶ್ವಸ್ತರಾದ ಹಿರಿಯಡ್ಕ ಮೋಹನ್ದಾಸ್ ಮತ್ತು ಜನಾರ್ದನ ದೇವಾಡಿಗ ಉಪ್ಪುಂದ, ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ, ಪುಣೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷರಾದ ಶೇಖರ್ ಟಿ. ಪೂಜಾರಿ, ನವಿಮುಂಬಯಿ ದೇವಾಡಿಗ ಸಂಘದ ಮಾಜಿ ಕಾರ್ಯಾಧ್ಯಕ್ಷರಾದ ಪಿ. ವಿ. ಎಸ್. ಮೊಲಿ, ಸಂಘದ ಸ್ಥಾಪಕಾಧ್ಯಕ್ಷ ಪ್ರಭಾಕರ ಜಿ. ದೇವಾಡಿಗ, ಅಧ್ಯಕ್ಷ ಸಚಿನ್ ದೇವಾಡಿಗ, ಮುಖ್ಯ ಸಲಹೆಗಾರರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ ಕೃಷ್ಣ ಕಲ್ಯಾಣ…ಪುರ್, ಮಹಾಬಲೇಶ್ವರ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಪ್ರಿಯಾ ಎಚ್. ದೇವಾಡಿಗ, ಕೋಶಾಧಿಕಾರಿ ಸುರೇಶ ಶ್ರೀಯಾನ್ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ