ಪುಣೆ ಕಾತ್ರಜ್‌ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಂಘದಿಂದ ಜನತಾ ಸೇವೆ


Team Udayavani, Oct 14, 2020, 6:16 PM IST

Mumbai-tdy-1

ಪುಣೆ, ಅ. 13: ಹೊರನಾಡ ಕನ್ನಡಿಗರು ಭಾಷೆಯ ಮಟ್ಟಿಗೆ ಸ್ವಾತಂತ್ರ್ಯವುಳ್ಳವರು. ಈ ಕಾರಣದಿಂದಲೇ ಸ್ವಭಾಷೆ, ಸಂಸ್ಕೃತಿ-ಸಂಸ್ಕಾರ, ಆಚಾರ-ವಿಚಾರಗಳ ಅಭಿಮಾನಿಗಳಾಗಿ ತಾವು ನೆಲೆ ನಿಂತ ನಾಡಿನಲ್ಲಿ ಸಂಘ-ಸಂಸ್ಥೆಗಳನ್ನು ಕಟ್ಟಿಕೊಂಡು ತಮ್ಮತನವನ್ನು ಕಾಯ್ದುಕೊಂಡು ಬಂದಿದ್ದಾರೆ. ಅದರಲ್ಲೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಬಯಿ ತುಳು-ಕನ್ನಡಿಗರು ಮಾಡು ತ್ತಿರುವ ಸಾಧನೆ ಅಪಾರವಾಗಿದೆ. ಮುಂಬಯಿ ಮಾತ್ರವಲ್ಲದೆ ಪುಣೆಯಲ್ಲೂ ತುಳು, ಕನ್ನಡಿಗರ ನೂರಾರು ಧಾರ್ಮಿಕ ಕೇಂದ್ರಗಳು ಸ್ಥಾಪನೆಗೊಂಡು ಯುವ ಪೀಳಿಗೆಯಲ್ಲಿ ಧಾರ್ಮಿಕ ಚಿಂತನೆಯನ್ನು ಮೂಡಿಸುತ್ತಿವೆ.

ಮರಾಠಿ ಮಣ್ಣಿನಲ್ಲಿರುವ ಊರಿನವರ  ಧಾರ್ಮಿಕ ಕೇಂದ್ರಗಳು ಬಹಳಷ್ಟು ವೈಶಿಷ್ಟéದಿಂದ ಕೂಡಿವೆ. ಇಲ್ಲಿ ಊರಿನಂತೆ ಜಾತ್ರೆ, ಆಯನಗಳು, ಧಾರ್ಮಿಕ ಉತ್ಸವಗಳು ವರ್ಷಪೂರ್ತಿ ನಡೆಯುತ್ತಿರುತ್ತವೆ. ವಿಶೇಷವೆಂದರೆ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡೆ ಇನ್ನಿತರ ಕ್ಷೇತ್ರಗಳಲ್ಲಿ ಇಲ್ಲಿನ ಮಠ- ಮಂದಿರಗಳು ಮಾಡುತ್ತಿರುವ ಸೇವೆ ಅಪಾರವಾಗಿದೆ. ಇಂತಹ ಕ್ಷೇತ್ರಗಳಲ್ಲಿ ಪುಣೆಯ ಕಾತ್ರಜ್‌ನಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರವೂ ಒಂದಾಗಿದೆ. ಅದರಲ್ಲೂ ಲಾಕ್‌ಡೌನ್‌ ಸಂದರ್ಭದಲ್ಲಿ ಪರಿಸರದ ತುಳುವರು, ಕನ್ನಡಿಗರು ಮತ್ತು ಅನ್ಯಭಾಷಿಗರ ಸಂಕಷ್ಟಕ್ಕೆ ನೆರವಾಗುವ ಮೂಲಕ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮಂಡಳಿ, ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘವು ಎಲ್ಲರ ಪ್ರೀತಿಗೆ ಪಾತ್ರವಾಗಿದೆ.

ಧಾರ್ಮಿಕ ಸಂಸ್ಥೆಯಿಂದ ಜನಸೇವೆ :

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ತುಳು, ಕನ್ನಡಿಗ ಬಡ ಕುಟುಂಬಗಳು ಸಂಕಷ್ಟದಲ್ಲಿವೆ ಎಂಬ ಮಾಹಿತಿಯನ್ನು ತಿಳಿದ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ವಿಶ್ವಸ್ತ ಮಂಡಳಿಯ ಅಧ್ಯಕ್ಷರಾದ ಸುಭಾಷ್‌ ಶೆಟ್ಟಿ ಅವರ ಮುಂದಾಳತ್ವದಲ್ಲಿ ವಿಶ್ವಸ್ಥ ಸಮಿತಿಯ ಸದಸ್ಯರು, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಭಕ್ತರ ಸಹಕಾರದೊಂದಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಜಾತಿ, ಮತ ಭೇದವಿಲ್ಲದೆ ದಿನೋಪಯೋಗಿ ವಸ್ತುಗಳಾದ ದವಸ ಧಾನ್ಯಗಳನ್ನು ಹಂಚಿದರು.

ಆಹಾರ ವಸ್ತುಗಳ ಕಿಟ್‌ ವಿತರಣೆ :

ಲಾಕ್‌ಡೌನ್‌ನಿಂದಾಗಿ ಹಲವಾರು ಕುಟುಂಬ ಗಳು ಜೀವನ ನಿರ್ವಹಣೆಗೆ ಮತ್ತು ದಿನನಿತ್ಯದ ಆಹಾರ ಸಾಮಗ್ರಿಗಳಿಗಾಗಿ ಪರದಾಡುವ ಪರಿಸ್ಥಿತಿ ಯಲ್ಲಿರುವಾಗ ಸಂಘದ ವತಿಯಿಂದ ಕಿಟ್‌ ವಿತರಿಸಲಾಯಿತು. 400ಕ್ಕೂ  ಹೆಚ್ಚು ಕುಟುಂಬಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಿಸಿರುವ ಸಂಸ್ಥೆಯ ಕಾರ್ಯಕರ್ತರು ವೈಯಕ್ತಿಕವಾಗಿ ಯೋಗಕ್ಷೇಮವನ್ನು ವಿಚಾರಿಸುವುದರೊಂದಿಗೆ ಬಡ ಕುಟುಂಬಗಳೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು ಅಗತ್ಯ ವಸ್ತುಗಳ ಪೂರೈಕೆಗೂ ಮುಂದಾದರು.

ಸ್ಥಳೀಯ ಪೊಲೀಸರ ಸಹಕಾರ :

ಪುಣೆಯ ವಿವಿಧೆಡೆಗಳಲ್ಲಿ ಸಂಕಷ್ಟಕ್ಕೀಡಾದವರಿಗೆ ಸಹಾಯವನ್ನು ಮಾಡಲು ಸಂಘದ ಸದಸ್ಯರು ಪೊಲೀಸ್‌ ಸಿಬಂದಿಯ ಸಹಕಾರವನ್ನು ಪಡೆದರು. ಕಿಟ್‌ಗಳನ್ನು ವಿತರಿಸುವಲ್ಲಿ ಪೊಲೀಸ್‌ ಸಿಬಂದಿ ಪಾಲ್ಗೊಂಡಿರುವುದು ವಿಶೇಷವಾಗಿದೆ. ಸಂಘದ ಕಾರ್ಯಕರ್ತರು ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜನತೆಗೆ ಕೊರೊನಾದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಪರಿಸ್ಥಿತಿಯನ್ನು ಎದುರಿಸುವ  ಬಗ್ಗೆ ಮನವರಿಕೆ ಮಾಡಿಕೊಟ್ಟು ಪೊಲೀಸರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಕೋವಿಡ್ ವಾರಿಯರ್ಸ್ ಗೆ ಊಟದ ವ್ಯವಸ್ಥೆ  :

ಕೋವಿಡ್ ದಿಂದ ಲಾಕ್‌ಡೌನ್‌ ಆಗಿ ಎಲ್ಲ ರೀತಿಯ ಹೊಟೇಲ್‌, ಸ್ಟಾಲ್‌ಗ‌ಳು ಮುಚ್ಚಲ್ಪಟ್ಟಿದ್ದರಿಂದ ಕೊರೊನಾ ಅಗತ್ಯ ಸಿಬಂದಿಗೂ ನೀರು ಮತ್ತು ಆಹಾರಕ್ಕಾಗಿ ಪರದಾಡುವ ಸ್ಥಿತಿ ಎದುರಾಗಿತ್ತು. ಈ ಸಂದರ್ಭ ಪುಣೆ ಮಹಾನಗರ ಪಾಲಿಕೆಯ ಸ್ವತ್ಛತ ಕರ್ಮಚಾರಿಗಳು, ಪೊಲೀಸರು, ಹಗಲು-ರಾತ್ರಿ ಎನ್ನದೆ ರೋಗಿಗಳ ಉಪಚಾರ ಮಾಡುತ್ತಿದ್ದ ವೈದ್ಯರು, ಆರೋಗ್ಯ ಕಾರ್ಯಕರ್ತೆಯರು, ಕಾರ್ಮಿಕರಿಗೆ ಶ್ರೀ ಅಯ್ಯಪ್ಪ ಸೇವಾ ಸಂಘದ ವತಿಯಿಂದ ಊಟೋ ಪಚಾರದ ವ್ಯವಸ್ಥೆಯನ್ನು ಮಾಡಲಾಗಿತ್ತು.

ಅರ್‌ಎಸ್‌ಎಸ್‌ ಜತೆಗೂಡಿ ಸಮಾಜ ಸೇವೆ :

ಅಯ್ಯಪ್ಪ ಸ್ವಾಮಿ ಸೇವಾ ಸಂಘವು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪುಣೆ ಇದರ ಜತೆಗೂಡಿ ನಗರದ ವಿವಿಧೆಡೆ ಅತೀ ಬಡ ಕುಟುಂಬಗಳಿಗೆ ದಿನೋಪಯೋಗಿ ವಸ್ತುಗಳನ್ನು ವಿತರಿಸಿದೆ. ಸ್ವಯಂಸೇವಕ ಸಂಘದ ಕಾರ್ಯಕರ್ತರು ಮತ್ತು ಅಯ್ಯಪ್ಪ ಸೇವಾ ಸಂಘದ ಪದಾಧಿಕಾರಿಗಳು ಹಗಲು-ರಾತ್ರಿ ಎನ್ನದೆ ಕೋವಿಡ್ ವಾರಿಯರ್‌ ಗಳಂತೆ ಸೇವೆ ಸಲ್ಲಿಸಿದ್ದಾರೆ. ಹಲವರಿಗೆ ವೈದ್ಯಕೀಯವಾಗಿ ಸಹಕರಿಸಿದ ಕಾರ್ಯಕರ್ತರು ಅಗತ್ಯವಿದ್ದವರಿಗೆ ಔಷಧಗಳನ್ನು ಮನೆಗೆ ತಲುಪಿಸುವ ವ್ಯವಸ್ಥೆಯನ್ನು ಮಾಡಿದರು.

ವಿಶೇಷ ಪೂಜೆ, ಆಚರಣೆಗಳು :  

ಲಾಕ್‌ಡೌನ್‌ನಿಂದ ಧಾರ್ಮಿಕ ಕ್ಷೇತ್ರಗಳು ಕೂಡ ಭಕ್ತರ ದರ್ಶನಕ್ಕೆ ನಿರ್ಬಂಧ ಹೇರಿದ್ದರಿಂದ ದೇವಸ್ಥಾನಗಳು ಮುಚ್ಚಿದ್ದವು. ಅರ್ಚಕರಿಗೆ ಮಾತ್ರ ಮೂರು ಹೊತ್ತಿನ ಪೂಜೆಗೆ ಅವಕಾಶ ನೀಡಲಾಗಿತ್ತು. ಕಾತ್ರಾಜ್‌ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಕಳೆದ ಆರು ತಿಂಗಳುಗಳಿಂದ ತಿಂಗಳ ಸಂಕ್ರಮಣದ ವಿಶೇಷ ಪೂಜೆ, ನಾಗರ ಪಂಚಮಿ, ಶ್ರಾವಣ ಮಾಸದ ಸಾರ್ವಜನಿಕ ಸತ್ಯನಾರಾಯಣ ಮಹಾಪೂಜೆ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶೋತ್ಸವವನ್ನು ಅರ್ಚಕ ವೃಂದ ಮತ್ತು ಸಮಿತಿಯ ಬೆರಳೆಣಿಕೆಯ ಸದಸ್ಯರ ಸಮ್ಮುಖದಲ್ಲಿ ಆಚರಿಸಲಾಯಿತು.

ಕೋವಿಡ್‌-19 ಲಾಕ್‌ಡೌನ್‌ನಿಂದ  ಪುಣೆಯ ಅಯ್ಯಪ್ಪ ಸ್ವಾಮಿ  ದೇವಸ್ಥಾನ ಕೂಡ ಬಂದ್‌ ಆಗಿತ್ತು. ಬಡವ-ಬಲ್ಲಿದ ಎನ್ನದೆ ದೇವಸ್ಥಾನಕ್ಕೆ  ಬರುತ್ತಿದ್ದ ಭಕ್ತರು ಅನಿರೀಕ್ಷಿತವಾಗಿ ಬಂದೊದಗಿದ ಈ ವಿಪತ್ತಿನಿಂದ ಸಂಕಷ್ಟಗೊಳಗಾದರು.  ಈ ಸಮಯದಲ್ಲಿ ಬಡ ಪರಿವಾರಗಳಿಗೆ  ನೆರವು ನೀಡುವುದು ನಮ್ಮ ಕರ್ತವ್ಯ ಎಂಬುದನ್ನು ಅರಿತು ಬಡ ಜನರಿಗೆ ಮತ್ತು ಕೋವಿಡ್‌ ವಿರುದ್ಧ ಹೋರಾಡುವ ಕರ್ಮಚಾರಿಗಳಿಗೆ ಸಂಘವು ತನ್ನಿಂದಾದ ಸಹಾಯವನ್ನು ಮಾಡಿದೆ. ಸಂಘದ ಸರ್ವ ಬಾಂಧವರು ಇದಕ್ಕೆ ಸಹಕರಿಸಿ¨ªಾರೆ. ಕೋವಿಡ್ ಎಂಬ ಮಹಾಮಾರಿ ಆದಷ್ಟು ಬೇಗ ಸಂಪೂರ್ಣವಾಗಿ ನಿರ್ನಾಮವಾಗಿ ಜನರು ತಮ್ಮ ಉದ್ಯೋಗ-ವ್ಯವಹಾರ ಮಾಡಿಕೊಂಡು ನಿರ್ಭೀತಿಯಿಂದ ಇರುವಂತಾಬೇಕು. ಅಯ್ಯಪ್ಪ ಸ್ವಾಮಿ ಈ ಕಂಟಕದಿಂದ ನಮ್ಮೆಲ್ಲರನ್ನು ಪಾರು ಮಾಡಲಿ ಎಂಬುದೇ ನಮ್ಮ ಪ್ರಾರ್ಥನೆಯಾಗಿದೆ. -ಸುಭಾಷ್‌ ಶೆಟ್ಟಿ  ಅಧ್ಯಕ್ಷರು, ಶ್ರೀ ಅಯ್ಯಪ್ಪ  ಸ್ವಾಮಿ ಸೇವಾ ಸಂಘ ಕಾತ್ರಜ್‌

ಟಾಪ್ ನ್ಯೂಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.