ಪುಣೆ: ಕೋವಿಡ್ ಕರ್ತವ್ಯದಲ್ಲಿದ್ದ ಶಿಕ್ಷಕ ಸೋಂಕಿಗೆ ಬಲಿ


Team Udayavani, Aug 6, 2020, 1:08 PM IST

ಪುಣೆ: ಕೋವಿಡ್ ಕರ್ತವ್ಯದಲ್ಲಿದ್ದ ಶಿಕ್ಷಕ ಸೋಂಕಿಗೆ ಬಲಿ

ಸಾಂದರ್ಭಿಕ ಚಿತ್ರ

ಪುಣೆ: ನಗರದ ಸಂಗೀತ ಶಿಕ್ಷಕ ರೊಬ್ಬರು ರವಿವಾರ ಸೋಂಕಿನಿಂದ ಸಾವನ್ನಪ್ಪಿದ ಬಳಿಕ ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಲಾದ ಶಿಕ್ಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರ ಮತ್ತು ಪಕ್ಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 2,700 ಶಿಕ್ಷಕರು ಕೋವಿಡ್‌ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ, ಮುಖಗವಸುಗಳು ಮತ್ತು ಕೈಗವಸುಗಳಂತಹ ಸುರಕ್ಷತೆಯೊಂದಿಗೆ ಮನೆ ಮನೆಗೆ ಸಮೀಕ್ಷೆ ನಡೆಸುತ್ತಿದ್ದಾರೆ.

ಕಳೆದ 3 ತಿಂಗಳುಗಳಿಂದ ಶಿಕ್ಷಕ ಗೋವಿಂದ್‌ ಭಿಲಾರೆ ಅವರು ಪಿಎಂಸಿ ವ್ಯಾಪ್ತಿಯಲ್ಲಿ ಮನೆ-ಮನೆಗೆ ಸಮೀಕ್ಷೆ ಮತ್ತು ಸಂಪರ್ಕ ಪತ್ತೆಹಚ್ಚುವ ಕೆಲಸ ಮಾಡಿದರು. ಪಿಎಮ್‌ಸಿ ನೇಮಿಸಿಕೊಂಡ ಶಿಕ್ಷಕನ ಮೊದಲ ಸಾವು ಇದಾಗಿದೆ ಎಂದು ನಾಗರಿಕ ಅ ಧಿಕಾರಿಗಳು ತಿಳಿಸಿದ್ದಾರೆ. ಭಿಲಾರೆ ಅವರ ಮರಣದ ಬಳಿಕ, ಮಹಾರಾಷ್ಟ್ರ ರಾಜ್ಯ ಶಿಕ್ಷಕರ ಸಂಘವು ಪಿಎಂಸಿ ಶಿಕ್ಷಕರಿಗೆ ಕೋವಿಡ್‌ ಕರ್ತವ್ಯಗಳನ್ನು ನೀಡಬಾರದು ಎಂದು ಒತ್ತಾಯಿಸಿದ್ದು, ಈಗಾಗಲೇ ಅವರು ಕೆಲಸದ ಹೊರೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿವೆ.

ಪಿಎಮ್‌ಸಿ ಶಿಕ್ಷಕರಲ್ಲಿ ಅನೇಕರು ಕೋವಿಡ್‌ ತಂಡಗಳಲ್ಲಿ ಕೆಲಸ ಮಾಡುತ್ತಿರುವುದಲ್ಲದೆ, ಆನ್‌ಲೈನ್‌ ತರಗತಿಗಳು ಮತ್ತು ಹೆಚ್ಚುವರಿ ಶಾಲಾ ಕೆಲಸಗಳನ್ನು ಸಹ ಮಾಡುತ್ತಿದ್ದಾರೆ ಎಂದು ಶಿಕ್ಷಕರ ಸಂಸ್ಥೆ ತಿಳಿಸಿದೆ. ಇಲ್ಲಿಯವರೆಗೆ ಕೋವಿಡ್‌ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಸುಮಾರು 18 ಶಿಕ್ಷಕರು ಸೋಂಕಿಗೆ ಒಳಗಾಗಿದ್ದು, ಪಿಎಂಸಿ ಶಿಕ್ಷಕರಲ್ಲಿ ಭಿಲಾರೆ ಸಾವಿನಿಂದ ಆತಂಕ ಉಂಟಾಗಿದೆ ಎಂದು ಪುಣೆ ವಿಭಾಗದ ಸಂಘದ ಮುಖ್ಯಸ್ಥ ಸಚಿನ್‌ ಡಿಂಬಲ್‌ ಹೇಳಿದ್ದಾರೆ.

ಪುಣೆ ವಿಭಾಗದ ಪ್ರಾಥಮಿಕ ಶಿಕ್ಷಕರ ಸಂಘದ ನಾಲ್ಕು ಸದಸ್ಯರ ಸಮಿತಿಯು ಪಿಎಂಸಿ ಆಯುಕ್ತ ವಿಕ್ರಮ್‌ ಕುಮಾರ್‌ ಅವರೊಂದಿಗೆ ಕರ್ತವ್ಯ ವಿಷಯದ ಬಗ್ಗೆ ಸಭೆ ನಡೆಸಿತು. 3ರಿಂದ 4 ತಿಂಗಳುಗಳಿಂದ 2,700 ಪಿಎಂಸಿ ಶಿಕ್ಷಕರಿಗೆ ಕೋವಿಡ್‌ ಸಂಬಂ ಧಿತ ಕೆಲಸದ ಕರ್ತವ್ಯಗಳನ್ನು ನೀಡಲಾಗಿದೆ. ಇದು ಜನರ ಸ್ವಾಬ್‌ ಪರೀಕ್ಷೆ, ಸಂಪರ್ಕ ಪತ್ತೆಹಚ್ಚುವಿಕೆ, ಪ್ರದೇಶ ಸಮೀಕ್ಷೆ, ವಿಪತ್ತು ನಿರ್ವಹಣಾ ಕಾರ್ಯಗಳನ್ನು ಒಳಗೊಂಡಿದೆ. ನಮಗೆ ನಿರಾಶಾದಾಯಕವಾದ ಮುಖ್ಯ ವಿಷಯವೆಂದರೆ ಯಾವುದೇ ಆವರ್ತಕ ವಿಧಾನವಿಲ್ಲದೆ ಮೂರು ತಿಂಗಳುಗಳಲ್ಲಿ ಕರ್ತವ್ಯಗಳನ್ನು ನೀಡಲಾಯಿತು.

ಶಿಕ್ಷಕರು ದಣಿದಿದ್ದಾರೆ
ಪುಣೆ ವಿಭಾಗದ ಸಂಘದ ಮುಖ್ಯಸ್ಥ ಸಚಿನ್‌ ಡಿಂಬಲ್‌ ಮಾತನಾಡಿ, ಇಂದು ನಾವು ಪಿಎಂಸಿ ಆಯುಕ್ತರನ್ನು ಭೇಟಿ ಮಾಡಿದ್ದೇವೆ ಮತ್ತು ನಮ್ಮ ಎಲ್ಲ ಶಿಕ್ಷಕರಿಗೆ ರಾಜ್ಯ ಸರಕಾರದ ಮಾರ್ಗಸೂಚಿಗಳ ಪ್ರಕಾರ 14 ದಿನಗಳ ಆವರ್ತಕ ಕರ್ತವ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದ್ದೇವೆ. ನಾವು ಕೋವಿಡ್‌ ಕರ್ತವ್ಯಗಳಿಗಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ. ದೈಹಿಕವಾಗಿ, ನಮ್ಮ ಶಿಕ್ಷಕರು ಈಗ ದಣಿದಿದ್ದಾರೆ ಆದರೆ ಕೆಲಸ ಕಳೆದುಕೊಳ್ಳುವ ಭಯದಿಂದಾಗಿ ಅವರು ಕೋವಿಡ್‌ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.