ಪುಣೆ: ಕಾರ್ಕಳದ ಜನರ ಸ್ನೇಹ ಸಮ್ಮಿಲನ ಪೂರ್ವಭಾವಿ ಸಭೆ


Team Udayavani, Feb 16, 2017, 4:14 PM IST

15-Mum03a.jpg

ಪುಣೆ: ನಾನು ಕಾರ್ಕಳದ ಶಾಸಕನಾಗಿ 7 ವರ್ಷ ಊರಿನ ಅಭಿವೃದ್ಧಿ ಮಾಡುವ ಸುಯೋಗ ಒದಗಿಬಂದಿದ್ದು,  ಈ ಅವಧಿಯಲ್ಲಿ ಒಬ್ಬ ಶಾಸಕನಾಗಿ ಕ್ಷೇತ್ರವನ್ನು ಯಾವ ರೀತಿ ಅಭಿವೃದ್ಧಿಪಡಿಸಬಹುದು ಎಂಬುದನ್ನು ಪ್ರಾಮಾಣಿಕವಾಗಿ ಮನಗಂಡು ಪ್ರಯತ್ನಶೀಲನಾಗಿದ್ದೇನೆ ಎಂಬ ಸಂತಸ  ನನಗಿದೆ.

ಈ ಸಂದರ್ಭದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಹೊರನಾಡಿನಲ್ಲಿ ನೆಲೆಸಿರುವ ಕಾರ್ಕಳದ ಜನರಿಗೆ ತಿಳಿಯಪಡಿಸಲು  ಹಾಗೂ ಮುಂದೆ ಕಾರ್ಕಳದಲ್ಲಿ ಯಾವ ರೀತಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ ಎಂಬ ಸಲಹೆ ಸೂಚನೆಗಳನ್ನು ಪಡೆದುಕೊಂಡು ಅವರಲ್ಲಿ ಹುಟ್ಟೂರಿನ ಬಗ್ಗೆ ಅಭಿಮಾನ, ಪ್ರೀತಿಯನ್ನು ಮೂಡಿಸುವ ಉದ್ದೇಶದಿಂದ ಪುಣೆಯಲ್ಲಿ ಮಾ. 5ರಂದು ನಗರದ ಕೃಷ್ಣ ಸುಂದರ್‌ ಗಾರ್ಡನ್‌ ಲಾನ್ಸ್‌ನಲ್ಲಿ ಸಂಜೆ 5ರಿಂದ ಪುಣೆಯ ತುಳುಕನ್ನಡಿಗರ ಸಹಯೋಗದೊಂದಿಗೆ ಸ್ನೇಹ ಸಮ್ಮಿಲನವನ್ನು ಆಯೋಜಿಸಲಾಗಿದೆ . ಈ ಹಿಂದೆ  ಬೆಂಗಳೂರು ಹಾಗೂ ಮುಂಬಯಿಗಳಲ್ಲಿ ಸ್ನೇಹ ಸಮ್ಮಿಲನವನ್ನು ಏರ್ಪಡಿಸಿದ್ದು ನಿರೀಕ್ಷೆಗೂ ಮೀರಿ ಕಾರ್ಕಳದ ಜನರು  ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಇದೇ ರೀತಿ ಪುಣೆಯಲ್ಲಿರುವ ಪ್ರತಿಯೋರ್ವರನ್ನೂ ಸಂಪ
ರ್ಕಿಸಿ ಮಾಹಿತಿ ತಿಳಿಸಿ ಸ್ನೇಹ ಸಮ್ಮಿಲನದಲ್ಲಿ ಭಾಗವಹಿಸುವಂತೆ ಮಾಡಿ ಕಾರ್ಯಕ್ರಮ ಯಶಸ್ವಿಗೊಳಿಸಿ ಕಾರ್ಕಳದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಿ  ಎಂದು ಕಾರ್ಕಳದ ಶಾಸಕ ಸುನಿಲ್‌ ಕುಮಾರ್‌ ನುಡಿದರು.

ಫೆ. 14ರಂದು ಪುಣೆಯ ಕೊರೋನೆಟ್‌ ಹೊಟೇಲ್‌ ಸಭಾಂಗಣದಲ್ಲಿ ನಡೆದ ಕಾರ್ಕಳದ ಜನರ ಸ್ನೇಹಸಮ್ಮಿಲನ -2017 ಇದರ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಕಳ ತಾಲೂಕು ರಚನೆಯಾಗಿ 100 ವರ್ಷ ತುಂಬುತ್ತಿರುವ ಈ ವರ್ಷ ನೂರರ ಸಂಭ್ರಮವನ್ನು ವರ್ಷವಿಡೀ ಆಚರಿಸುತ್ತಿದ್ದು ಹೊರನಾಡಿನ ಊರ ಜನರೊಂದಿಗೆ ಬೆರೆಯುವ ಪರಿಕಲ್ಪನೆಯೂ ಅದಕ್ಕೆ ಪೂರಕವಾಗಿದೆ. ಊರಿನ ಪವಿತ್ರ ಕಾರ್ಯಗಳಲ್ಲಿ ಮುಂಬಯಿಯಲ್ಲಿರುವ ಜನರ ಭೂಮಿಕೆಯೇ ಮುಖ್ಯವಾಗಿದ್ದು, ಕಾರ್ಕಳ ಕ್ಷೇತ್ರದ ಅಭಿವೃದ್ಧಿಯ ಪುಣ್ಯ ಕಾರ್ಯದಲ್ಲಿಯೂ ಎಲ್ಲರ ಸಹಕಾರ ಅಗತ್ಯವಾಗಿದೆ. ಕಳೆದ ಕಳೆದ 5 ವರ್ಷಗಳಿಂದ ಕಾರ್ಕಳ ತಾಲೂಕನ್ನು ಗಮನಿಸಿದರೆ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿರುವುದನ್ನು ಗಮನಿಸಬಹುದಾಗಿದೆ. ಇತಿಹಾಸದಲ್ಲಿ  ಪ್ರಥಮ ಬಾರಿಗೆ ಕೇಂದ್ರದ ಸರಕಾರದಿಂದ 160 ಕೋ. ರೂ. ಹಣವನ್ನು ಮಂಜೂರು ಮಾಡಿಸಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವ  ಹಿನ್ನಲೆಯಲ್ಲಿ ವರ್ಷವೊಂದರಲ್ಲೇ ಸುಮಾರು 50 ಕಿಂಡಿ ಅಣೆಕಟ್ಟುಗಳನ್ನು ಕಟ್ಟಿ ಅಂತರ್ಜಲ ಹೆಚ್ಚಿಸುವ  ಕೈಗೊಳ್ಳಲಾಗಿದೆ. ಒಂದು  ಕೋಟಿ ರೂ. ಗಳ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ಸುಮಾರು 35 ಕಾರ್ಖಾನೆಗಳ ನಿರ್ಮಾಣ, ಪ್ರವಾಸೋದ್ಯಮಕ್ಕೆ ಉತ್ತೇಜನ, ಶಾಲೆಗಳಲ್ಲಿ ಶೌಚಾಲಯ, ಹೆಚ್ಚುವರಿ ಕೊಠಡಿಗಳು, ಶ‌¾ಶಾನ ನಿರ್ಮಾಣ ಮುಂತಾಗಿ  ಹಲವು ಯೋಜನೆಗಳನ್ನು ಜಾರಿಗೊಳಿಸಿ ವಿರೋಧ ಪಕ್ಷದ ಶಾಸಕನಾಗಿ ಸಾಧ್ಯವಾದಷ್ಟು ಪ್ರಾಮಾಣಿಕವಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಆದರೂ ಜನರ ನಿರೀಕ್ಷೆಗಳು ಇನ್ನಷ್ಟು ಇದೆ. ಇದಕ್ಕಾಗಿಯೇ ಊರಿನ ಹಾಗೂ ಪರವೂರಿನಲ್ಲಿರುವ ಊರಿನ ಜನರನ್ನು ಭೇಟಿಯಾಗಿ ಪರಸ್ಪರ ವಿಚಾರವಿನಿಮಯ ಮಾಡಿಕೊಂಡು ಕಾರ್ಕಳವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕರೆನೀಡಿದರು.

ಈ ಸಂದರ್ಭ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಮಾತನಾಡಿ, ಒಬ್ಬ ಶಾಸಕನಾಗಿ ಪûಾ ತೀತವಾಗಿ ನಡೆದುಕೊಂಡು, ಜಾತಿ ಮತ ಧರ್ಮಗಳನ್ನು ಮೀರಿ ಊರಿನ ಜನರ ಸಮಸ್ಯೆ ಗಳಿಗೆ ತ್ವರಿತವಾಗಿ ಸ್ಪಂದಿಸಿ, ಸಮಾಜಹಿತ ಚಿಂತನೆ ಯೊಂದಿಗೆ ಊರಿನ ಪ್ರಗತಿಗೆ ಕಾರಣರಾದ ಶಾಸಕ ಸುನಿಲ್‌ ಕುಮಾರ್‌ ಅಭಿನಂದನೀಯರು.  ಇಂದು ಊರಿನ ರಸ್ತೆಗಳು ಉತ್ತಮಗೊಂಡಿದ್ದರೆ ಅದಕ್ಕೆ ಅವರ ಶ್ರಮವೇ ಕಾರಣವಾಗಿದೆ. ಒಬ್ಬ ಜನಸೇವಕ ನಡೆನುಡಿಯಲ್ಲಿ ಹಾಗೂ ಕಾರ್ಯಗಳಲ್ಲಿ ಹೇಗಿರಬೇಕೆಂದು ಮಾದರಿಯಾಗಿ ಕಂಡುಬರುವ ಅವರಿಗೆ  ನಾವೆಲ್ಲರೂ ಬೆಂಬಲ ನೀಡೋಣ ಎಂದರು.

ಪುಣೆ ರೆಸ್ಟೋರೆಂಟ್‌ ಹೊಟೇಲಿಯರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಪ್ರಾಸ್ತಾವಿಕವಾಗಿ ಮಾತನಾಡಿ,  ನಮ್ಮ ಉಡುಪಿ ಮತ್ತು  ಕನ್ನಡ ಜಿಲ್ಲೆಗಳಲ್ಲಿರುವ ಯಾವೊಬ್ಬ ಶಾಸಕರೂ ತನ್ನೂರಿನ ಬಗ್ಗೆ ಇಷ್ಟೊಂದು ಕಾಳಜಿವಹಿಸಿ ಅಭಿವೃದ್ಧಿಗಾಗಿ  ಹೊರನಾಡಿನಲ್ಲಿರುವ ತನ್ನ ಕ್ಷೇತ್ರದ ಜನರೊಂದಿಗೆ ವಿಚಾರವಿನಿಮಯ ಮಾಡಿ ಚರ್ಚಿಸಿದ  ಉದಾಹರಣೆಗಳಿಲ್ಲ. ಅಲ್ಲದೆ ರಾಜ್ಯದಲ್ಲಿ ತಾನು ಶಾಸಕನಾಗಿದ್ದಾಗ ತನ್ನ ಸರಕಾರವಿಲ್ಲದಿದ್ದರೂ ಕೇಂದ್ರದ ಸಂಪರ್ಕದಿಂದ ಹಣವನ್ನು ಮಂಜೂರು ಗೊಳಿಸಿ ಅಭಿವೃದ್ಧಿಗಾಗಿ ಪಣತೊಟ್ಟ ಇವರು ಮುಂದೆ ಅಧಿಕಾರಕ್ಕೆ  ಬಂದರೆ ಈ ರಾಜ್ಯದ ಮಂತ್ರಿಯಾಗಿ ಆಯ್ಕೆ ಯಾದರೆ ಏನೆಲ್ಲ  ಮಾಡಬಹುದು ಎಂಬುದನ್ನು ನಾವು ನಿರೀಕ್ಷಿ
ಸಬಹುದಾಗಿದೆ. ಅವರ ಈ ಸ್ನೇಹ ಸಮ್ಮಿಲನ ವನ್ನು ಯಶಸ್ವಿಗೊಳಿಸುವುದು ನಮ್ಮಲ್ಲರ ಕರ್ತವ್ಯವಾಗಿದೆ ಎಂದರು.

ಪುಣೆ ತುಳುಕೂಟದ ಗೌರವಾಧ್ಯಕ್ಷ ಮಿಯ್ನಾರು ರಾಜ್‌ಕುಮಾರ್‌ ಎಂ. ಶೆಟ್ಟಿ, ಪುಣೆ
ರೆಸ್ಟೋರೆಂಟ್‌  ಹೊಟೇಲಿಯರ್ಸ್‌ ಅಸೋಸಿ ಯೇಶನ್‌ ಅಧ್ಯಕ್ಷ  ಗಣೇಶ್‌ ಶೆಟ್ಟಿ, ಪಿಂಪ್ರಿ- ಚಿಂಚಾÌಡ್‌ ಹೊಟೇಲ್‌ ಅಸೋಸಿಯೇಶನ್‌ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಪುಣೆ ತುಳುಕೂಟದ ಪಿಂಪ್ರಿ-ಚಿಂಚಾÌಡ್‌ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಶ್ಯಾಮ್‌ ಸುವರ್ಣ, ಪುಣೆ ಬಿಲ್ಲವ ಸಮಾಜ  ಸೇವಾ ಸಂಘದ ಅಧ್ಯಕ್ಷ ಶೇಖರ ಟಿ. ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭ ಸುನೀಲ್‌ ಕುಮಾರ್‌ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುತ್ಛವಿನ್ನಿತ್ತು ಸಮ್ಮಾನಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ರಾಜಾಪುರ ಸಾರಸ್ವತ ಸಂಘದ ಅಧ್ಯಕ್ಷ  ಸದಾನಂದ ನಾಯಕ್‌, ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ಕುಲಾಲ ಸಂಘದ ಅಧ್ಯಕ್ಷ ಹರೀಶ್‌ ಕುಲಾಲ…, ಪುರಂದರ ಪೂಜಾರಿ, ನೂತನ್‌ ಸುವರ್ಣ, ಸದಾಶಿವ ಸಾಲ್ಯಾನ್‌, ಸಂತೋಷ್‌ ಶೆಟ್ಟಿ ಎಣ್ಣೆಹೊಳೆ ಇವರು ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಪುಣೆ ದೇವಾಡಿಗ ಸಂಘದ ಅಧ್ಯಕ್ಷ ಸಚಿನ್‌ ದೇವಾಡಿಗ, ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಅಧ್ಯಕ್ಷ ಸುಭಾಷ್‌ ಶೆಟ್ಟಿ, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ವಸಂತ್‌ ಶೆಟ್ಟಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಅಜಿತ್‌ ಹೆಗ್ಡೆ, ಮಾಧವ ಆರ್‌. ಶೆಟ್ಟಿ, ಮೋಹನ್‌ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ ಶೀತಲ…, ದಿನೇಶ್‌ ಶೆಟ್ಟಿ ಬಜಗೋಳಿ, ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಮಹಾಬಲ ದೇವಾಡಿಗ, ಸುಧಾಕರ ಸಿ. ಶೆಟ್ಟಿ, ರವಿ ಕೆ. ಶೆಟ್ಟಿ, ಸುಧಾಕರ ಪೂಜಾರಿ, ಸುದೀಪ್‌ ಪೂಜಾರಿ, ಶಿವರಾಮ ಸುವರ್ಣ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ವಿಶ್ವನಾಥ ಪೂಜಾರಿ ಸ್ವಾಗತಿಸಿ ಸ್ನೇಹ ಸಮ್ಮಿಲನದ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು. ಸಂತೋಷ್‌ ಶೆಟ್ಟಿ ವಂದಿಸಿದರು. 

  ಚಿತ್ರ -ವರದಿ: ಕಿರಣ್‌ ಬಿ.  ರೈ ಕರ್ನೂರು

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.