ಪುಣೆ ತುಳುಕೂಟದ ವಾರ್ಷಿಕ ಕ್ರೀಡೋತ್ಸವದ ಸಮಾರೋಪ ಸಮಾರಂಭ


Team Udayavani, Jan 17, 2019, 12:47 PM IST

1601mum01.jpg

ಪುಣೆ: ಪುಣೆ ತುಳುಕೂಟದ ಇಂದಿನ ಕ್ರೀಡಾಕೂಟದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿರುವುದಕ್ಕೆ ತುಂಬಾ ಸಂತಸ ವಾಗುತ್ತಿದೆ. ಹೊರನಾಡಿನಲ್ಲಿದ್ದುಕೊಂಡು ಸಂಘ ಸಂಸ್ಥೆಗಳ ಮೂಲಕ ಒಗ್ಗಟ್ಟಿನಿಂದ, ಸ್ನೇಹ ಸೌಹಾರ್ದದಿಂದ ಬೆಸೆದುಕೊಂಡು ಕ್ರೀಡಾಕೂಟದಂತಹ ಚಟುವಟಿಕೆಗಳನ್ನು ಮಾಡುತ್ತಿರುವ ಪುಣೆ ತುಳುಕೂಟದ ಕಾರ್ಯ ಅಭಿನಂದನೀಯವಾಗಿದೆ. ಕ್ರೀಡಾಕೂಟವೆಂದರೆ  ಕೇವಲ ಸ್ಪರ್ಧೆಯಲ್ಲ. ಅದೊಂದು ಸ್ನೇಹ ಸಮ್ಮಿಲನವೆನ್ನಬಹುದಾಗಿದೆ. ಪ್ರತಿಯೊಬ್ಬರಿಗೂ ದೇಹಾರೋಗ್ಯ ಅಗತ್ಯವಾಗಿ ಬೇಕಾಗಿದೆ. ಅದಕ್ಕಾಗಿ ಬೇರೆ ಬೇರೆ  ರೀತಿಯ ಕ್ರೀಡೆಯಲ್ಲಿ  ನಮ್ಮನ್ನು ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ  ಎಂದು ಅಂತಾರಾಷ್ಟ್ರೀಯ ವೈಟ್‌ ಲಿಫ್ಟರ್‌  ಶ್ಯಾಮಲಾ ಶೆಟ್ಟಿ ಅವರು ನುಡಿದರು.

ಅವರು ಜ. 13 ರಂದು ನಗರದ ಬಿಎಂಸಿಸಿ  ಕಾಲೇಜು ಮೈದಾನದಲ್ಲಿ ನಡೆದ ಪುಣೆ ತುಳುಕೂಟದ ವಾರ್ಷಿಕ ಕ್ರೀಡಾಕೂಟದ  ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿ, ಇಂತಹ ಕ್ರೀಡಾಸ್ಪರ್ಧೆಗಳು ಎಲ್ಲೆಲ್ಲಿ ನಡೆ ಯುತ್ತವೆಯೋ ಅಗತ್ಯವಾಗಿ ಭಾಗವಹಿಸುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕಾಗಿದೆ. ನಾನು ಬಾಲ್ಯ   ದಿಂದಲೇ ಪರಿಶ್ರಮಪಟ್ಟು ಕ್ರೀಡಾಕ್ಷೇತ್ರದಲ್ಲಿ ಗುರುತಿಸಿಕೊಂಡು ಹಂತಹಂತವಾಗಿ ಸಾಧನೆಯನ್ನು ಮಾಡಿದ್ದೇನೆ. ಮಕ್ಕಳು  ಶಿಕ್ಷಣ ದೊಂದಿಗೆ ಪ್ರಯತ್ನಪಟ್ಟರೆ ಕ್ರೀಡಾಕ್ಷೇತ್ರದಲ್ಲಿ ಸಾಧನೆಯನ್ನು ಮಾಡಬಹುದಾಗಿದೆ ಎಂದರು.

ಆಳ್ವಾಸ್‌ ಕಾಲೇಜು ಮೂಡಬಿದಿರೆ ಇದರ ಕ್ರೀಡಾ ತರಬೇತುದಾರ ಪ್ರಮೋದ್‌ ಕುಮಾರ್‌ ಶೆಟ್ಟಿ ಅವರು ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿ, ಪುಣೆಯಲ್ಲಿ ಜಾತಿಭೇದವಿಲ್ಲದೆ ವಿವಿಧ ವಯೋಮಾನದ ತುಳುನಾಡಿನ ಬಂಧುಗಳನ್ನು  ಒಗ್ಗೂಡಿಸಿ ಕೊಂಡು ಮಾಡುತ್ತಿರುವ ಕ್ರೀಡಾಕೂಟದಲ್ಲಿ ಭಾಗವಹಿಸಿರು ವುದಕ್ಕೆ ಹೆಮ್ಮೆಯಾಗುತ್ತಿದೆ. ಇದೊಂದು ಸಂತೋ ಷದ ಕೂಟವೆನ್ನಬಹುದಾಗಿದೆ. ನಮ್ಮೆಲ್ಲರ ಆರೋಗ್ಯ ವೃದ್ಧಿಗಾಗಿ ಕ್ರೀಡೆಯಲ್ಲಿ ತೊಡಗಿಸಿ ಕೊಳ್ಳಬೇಕಾ ಗಿದೆ. ಆರೋಗ್ಯವಂತ ದೇಹ ನಮ್ಮದಾದರೆ ಆರೋಗ್ಯವಂತ ಮನಸ್ಸೂ ನಮ್ಮದಾಗುತ್ತದೆ ಎಂದರು.
ಅತಿಥಿಗಳಾಗಿ ಉಪಸ್ಥಿತರಿದ್ದ ಪುಣೆ ಬಂಟರ ಸಂಘದ ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್‌ ಪೂಂಜಾ ಮಾತನಾಡಿ, ಪುಣೆ ತುಳುಕೂಟದ ಇಂದಿನ ಕ್ರೀಡಾಕೂಟದಲ್ಲಿ ಭಾಗಿಯಾಗಿ ರುವುದಕ್ಕೆ ಸಂತೋಷವಾಗುತ್ತಿದೆ. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಪುರುಷರು, ಮಹಿಳೆಯರೆಲ್ಲರೂ ಉತ್ಸಾಹದಿಂದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಂಭ್ರಮಪಟ್ಟಿರುತ್ತಾರೆ. ಇಲ್ಲಿ ಗೆಲುವು ಸೋಲುಗಳ ಬಗ್ಗೆ  ಚಿಂತಿಸದೆ ನಮ್ಮೆಲ್ಲರ ಭಾಗವಹಿಸುವಿಕೆಯೇ ಮುಖ್ಯ ಎಂಬುವುದನ್ನು ಮನಗಂಡು ಮುಂದಿನ ವರ್ಷಗಳಲ್ಲಿ ಇನ್ನೂ ಉತ್ಸಾಹದಿಂದ ಭಾಗವಹಿಸಿ ನಮ್ಮ ಸಂಘದ ಜೊತೆ ಸಹಕಾರ ನೀಡಬೇಕಾಗಿದೆ ಎಂದು ನುಡಿದರು.

ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ತುಳುಕೂಟದ ಗೌರವಾಧ್ಯಕ್ಷ ತಾರಾನಾಥ ಕೆ. ರೈ ಮೇಗಿನಗುತ್ತು, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ ಕಾರ್ಯದರ್ಶಿ ಅರವಿಂದ ರೈ, ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ತುಳುಕೂಟ ಪಿಂಪ್ರಿ-ಚಿಂಚಾÌಡ್‌ ಇದರ ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಕುರ್ಕಾಲ್‌, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಅರವಿಂದ ರೈ ಉಪಸ್ಥಿತರಿದ್ದು ಸಂಘದ ಯಶಸ್ವಿ ಕ್ರೀಡಾಕೂಟಕ್ಕೆ ಅಭಿನಂದಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಸಂಘದ ಕ್ರೀಡಾ ಕಾರ್ಯಾಧ್ಯಕ್ಷ ಯಶವಂತ್‌ ಶೆಟ್ಟಿ ತಾಮಾರು, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ದಿವಾಕರ ಶೆಟ್ಟಿ ಮಾಣಿಬೆಟ್ಟು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷೆ ಗೀತಾ ಡಿ. ಪೂಜಾರಿ ಉಪಸ್ಥಿತರಿದ್ದರು. ಅತಿಥಿಗಳನ್ನು ಶಾಲು ಹೊದೆಸಿ, ಪುಷ್ಪಗುಚ್ಚ, ಸ್ಮರಣಿಕೆಯನ್ನಿತ್ತು  ಸತ್ಕರಿಸಲಾಯಿತು.
ಕ್ರೀಡಾಕೂಟದಲ್ಲಿ ಭಾಗವಹಿಸಿದ 9 ವರ್ಷದೊಳಗಿನ ಎÇÉಾ ಮಕ್ಕಳಿಗೆ ಪ್ರೋತ್ಸಾಹದಾಯಕ ಕ್ರೀಡಾ ಪದಕಗಳನ್ನು ನೀಡಲಾಯಿತು. 

ಕ್ರೀಡೋತ್ಸವದಲ್ಲಿ ಭಾಗವಹಿಸಿ ಬಹುಮಾನಗಳನ್ನು ಗಳಿಸಿದ ಕ್ರೀಡಾಳುಗಳಿಗೆ ಟ್ರೋಫಿಗಳನ್ನು ಅತಿಥಿಗಳ ಹಸ್ತದಿಂದ ನೀಡಲಾಯಿತು. ಈ ಸಂದರ್ಭ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಗಣ್ಯರುಗಳನ್ನು  ಪುಷ್ಪಗುತ್ಛ ನೀಡಿ ಗೌರವಿಸಲಾಯಿತು. ಕ್ರೀಡೋತ್ಸವಕ್ಕೆ ಪ್ರಾಯೋಜಕತ್ವ ನೀಡಿದ ಪ್ರಾಯೋಜಕರುಗಳನ್ನು  ಗೌರವಿಸಲಾಯಿತು. ಕ್ರೀಡಾಸಮಿತಿ ಉಪ ಕಾರ್ಯಾಧ್ಯಕ್ಷ ಪ್ರಕಾಶ್‌ ಪೂಜಾರಿ, ಪ್ರಿಯಾ ಎಚ್‌. ದೇವಾಡಿಗ, ಯಶವಂತ್‌ ಶೆಟ್ಟಿ ತಾಮಾರು  ಕ್ರೀಡಾ ಸ್ಪರ್ಧೆಗಳನ್ನು ನಡೆಸಿಕೊಡುವಲ್ಲಿ ಸಹಕಾರ ನೀಡಿದರು. ದೇಶಭಕ್ತಿಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮವು ಕೊನೆಗೊಂಡಿತು.

 ಇಂದಿನ ಕ್ರೀಡಾಕೂಟದಲ್ಲಿ ಬಹುಸಂಖ್ಯೆಯಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದ ತುಳು-ಕನ್ನಡಿಗರಿಗೆ ವಂದನೆಗಳು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರೆಲ್ಲರೂ ಇಂದಿನ  ಕ್ರೀಡಾಕೂಟದ ಆಯೋಜನೆಗೆ ಶ್ರಮಿಸಿದ್ದು ಅವರೆಲ್ಲರಿಗೂ ಕೃತಜ್ಞತೆಗಳು. ಮುಂದೆಯೂ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಘವನ್ನು ಬೆಂಬಲಿಸಿ .
 – ಮೋಹನ್‌ ಶೆಟ್ಟಿ ಎಣ್ಣೆಹೊಳೆ ಅಧ್ಯಕ್ಷರು, ಪುಣೆ ತುಳುಕೂಟ
 
ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.