ಪುಣೆ ತುಳುಕೂಟ:ಶಾಸಕಿ ಶಕುಂತಳಾ ಶೆಟ್ಟಿ ಅವರಿಗೆ ಸಮ್ಮಾನ
Team Udayavani, Feb 10, 2017, 4:53 PM IST
ಪುಣೆ: ಪುಣೆ ತುಳುಕೂಟದ ಮಹಿಳಾ ವಿಭಾಗದ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಜ. 29ರಂದು ಪುಣೆ ಕನ್ನಡ ಸಂಘದ ಕನ್ನಡ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಂದರ್ಭ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಪುತ್ತೂರಿನ ಶಾಸಕಿ, ಕರ್ನಾಟಕ ಸರಕಾರದ ಸಂಸದೀಯ ಕಾರ್ಯದರ್ಶಿ ಶಕುಂತಳಾ ಟಿ. ಶೆಟ್ಟಿ ಅವರನ್ನು ಶಾಲು ಹೊದೆಸಿ, ಸ್ಮರಣಿಕೆ, ಫಲಪುಷ್ಪಗಳನ್ನು ನೀಡಿ ಸಂಘದ ವತಿಯಿಂದ ಸಮ್ಮಾನಿಸಲಾಯಿತು.
ಈ ಸಂದರ್ಭ ಸಂಘದ ಗೌರವಾಧ್ಯಕ್ಷ ಮಿಯ್ನಾರು ರಾಜ್ಕುಮಾರ್ ಎಂ. ಶೆಟ್ಟಿ, ಅಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು, ಮಹಿಳಾ ವಿಭಾಗದ ನಿಕಟಪೂರ್ವ ಕಾರ್ಯಾಧ್ಯಕ್ಷೆ ನಯನಾ ಸಿ. ಶೆಟ್ಟಿ, ಕಾರ್ಯಾಧ್ಯಕ್ಷೆ ವಿಲ್ಮಾ ಮಾರ್ಟಿಸ್, ಉಪ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ, ಕಾರ್ಯದರ್ಶಿ ಶಶಿಕಲಾ ಎ. ಶೆಟ್ಟಿ, ಕೋಶಾಧಿಕಾರಿ ಪ್ರಿಯಾ ಎಚ್. ದೇವಾಡಿಗ ಉಪಸ್ಥಿತರಿದ್ದರು.
ಚಿತ್ರ : ಕಿರಣ್ ಬಿ. ರೈ ಕರ್ನೂರು