ಪುಣೆ ತುಳುಕೂಟದ ಯುವ ವಿಭಾಗ: ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ


Team Udayavani, Jul 26, 2018, 12:25 PM IST

2507mum01.jpg

ಪುಣೆ: ಪುಣೆ ತುಳುಕೂಟದ ಯುವ ವಿಭಾಗ ಆರಂಭಗೊಂಡು ನಿರಂತರವಾಗಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಾಂಘಿಕ ನೆಲೆ ಯಲ್ಲಿ ಯುವ ಸಮೂಹವನ್ನು  ಬೆಸೆಯುವ ಕಾರ್ಯವನ್ನು  ಮಾಡುತ್ತಿದ್ದು ಮುಖ್ಯವಾಗಿ ಇಂದು  ಮಕ್ಕಳಿಗೆ ತಮ್ಮ ಆಸಕ್ತಿಯ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಿ ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿರುವುದು  ಸ್ತುತ್ಯರ್ಹವಾಗಿದೆ ಎಂದು ಪುಣೆ ತುಳುಕೂಟದ ಅಧ್ಯಕ್ಷರಾದ ತಾರಾನಾಥ ಕೆ. ರೈ ಮೇಗಿನಗುತ್ತು ನುಡಿದರು.

ಅವರು ಜು. 22 ರಂದು ನಗರದ ಮೆಜೆಸ್ಟಿಕ್‌ ಸಭಾಂಗಣ ವಾರ್ಜೆ ಇಲ್ಲಿ ನಡೆದ ಪುಣೆ ತುಳುಕೂಟದ ಯುವ ವಿಭಾಗ ಮಕ್ಕಳಿಗೆ  ಆಯೋಜಿಸಿದ ಚಿತ್ರಕಲಾ ಸ್ಪರ್ಧೆಯ ಪ್ರಮಾಣ ಪತ್ರಗಳನ್ನು ವಿತರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿ,  ಯಾವುದೇ ಚಟುವಟಿಕೆಗಳಾಗಲಿ, ಸ್ಪರ್ಧೆಗಳಾಗಲಿ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಇದರಿಂದಾಗಿ ನಮ್ಮ ಜೀವನಕ್ಕೆ ಪ್ರೇರಣೆ ಸಿಗುವುದರಲ್ಲಿ ಸಂಶಯವಿಲ್ಲ. ಮುಂದೆ ದೊಡ್ಡ ದೊಡ್ಡ ಕಲಾವಿದರಾದರೂ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿದ ಆನಂದ ಜೀವನಕ್ಕೆ ಸ್ಫೂರ್ತಿ ನೀಡುತ್ತದೆ. ಯುವ ವಿಭಾಗದಿಂದ  ಇನ್ನೂ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿರಲಿ ಸಂಘದ ವತಿಯಿಂದ ಸಹಕಾರ ನೀಡಲಾಗುವುದು ಎಂದರು.

ಹಿರಿಯ ಯಕ್ಷ ನಾಟ್ಯಗುರು ಮದಂಗಲ್ಲು ಆನಂದ ಭಟ್‌ ಮಾತನಾಡಿ, ನಾವು ಇಂದು ಇಷ್ಟು ದೊಡ್ಡವರಾಗಿ ಬೆಳೆದರೂ ನಮ್ಮ ಬಾಲ್ಯದಲ್ಲಿ ಶಾಲಾ ದಿನಗಳಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದ ನೆನಪುಗಳು ಇನ್ನೂ ಹಸಿರಾಗಿದೆ. ಶಾಲಾ ದಿನಗಳಲ್ಲಿ ನಮಗೆ ಸಿಕ್ಕಿದ ಇಂತಹ ಅವಕಾಶಗಳಲ್ಲಿ ಭಾಗವಹಿ ಸುತ್ತಾ ಭವಿಷ್ಯದಲ್ಲಿ ಉನ್ನತ ಯಶಸ್ಸನ್ನು ಗಳಿಸುವಂತವರಾಗಿ. ಪುಣೆ ತುಳುಕೂಟದ ಯುವ ವಿಭಾಗದ ಕಾರ್ಯ ಅಭಿನಂದನೀಯ ಎಂದರು.

ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ ಮಾತನಾಡಿ, ನಾವು ಸತತವಾಗಿ ದ್ವಿತೀಯ ವರ್ಷ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸುತ್ತಿದ್ದೇವೆ.  ಮಕ್ಕಳ ಅಭಿರುಚಿಯನ್ನು ಪ್ರೋತ್ಸಾಹಿ ಸುವ ಉದ್ದೇಶ ನಮ್ಮದಾಗಿದ್ದು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಆನಂದಿಸುತ್ತಿ¨ªಾರೆ. ನಮ್ಮ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ನಮ್ಮೆಲ್ಲ ಕಾರ್ಯಕ್ರಮಗಳಿಗೆ ಬೆಂಬಲವಾಗಿ ನಿಂತು ಪ್ರೋತ್ಸಾಹಿಸುವುದರಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋ ಜಿಸಲು ಸಾಧ್ಯವಾಗುತ್ತದೆ. ಇಂತಹ ಅವ ಕಾಶಗ  ಒದಗಿಸಿರುವುದಕ್ಕೆ ಅವ ರಿಗೆ ಕೃತಜ್ಞತೆ ಸಲ್ಲಿಸುವೆ ಎಂದರು.

ಸಂಘದ ಗೌರವಾಧ್ಯಕ್ಷ  ಮಿಯ್ನಾರ್‌ ರಾಜ್‌ ಕುಮಾರ್‌ ಎಂ. ಶೆಟ್ಟಿ, ಕೋಶಾಧಿಕಾರಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಶ್ರೀಧರ ಶೆಟ್ಟಿ ಕÇÉಾಡಿ, ಮಹಿಳಾ ವಿಭಾಗದ ಉಮಾ ಶೆಟ್ಟಿ ಇವರುಗಳು ಕಾರ್ಯಕ್ರಮಕ್ಕೆ ಶುಭ ಕೋರಿದರು. ಈ ಸಂದರ್ಭ ಭಾಗವಹಿಸಿದ ಎÇÉಾ ಮಕ್ಕಳಿಗೂ ಪ್ರಮಾಣ ಪತ್ರಗಳನ್ನು ನೀಡಲಾಯಿತು. ನೂರಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಭಾಗವಹಿಸಿ ಬಣ್ಣಬಣ್ಣದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ  ಸಂಘದ ಪದಾಧಿಕಾರಿಗಳಾದ  ದಿವಾಕರ ಶೆಟ್ಟಿ ಮಾಣಿಬೆಟ್ಟು, ಯಶವಂತ್‌ ಶೆಟ್ಟಿ ತಾಮಾರು, ವಿಶ್ವನಾಥ ಶೆಟ್ಟಿ, ಮಹಿಳಾ ವಿಭಾಗದ ಸುಜಾತಾ ಡಿ. ಶೆಟ್ಟಿ, ಸರಿತಾ ಟಿ. ಶೆಟ್ಟಿ, ಸರಿತಾ ವೈ. ಶೆಟ್ಟಿ, ರಂಜಿತಾ ಶೆಟ್ಟಿ, ಶಕುಂತಲಾ ಆರ್‌. ಶೆಟ್ಟಿ, ನಯನಾ ಸಿ. ಶೆಟ್ಟಿ, ರಮಾ ಶೆಟ್ಟಿ,  ಉಮಾ ಶೆಟ್ಟಿ ಹಾಗೂ ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದರು.  ಯುವ ವಿಭಾಗದ ಅಭಿಜಿತ್‌ ಶೆಟ್ಟಿ, ಸುಮಿತ್‌ ಶೆಟ್ಟಿ, ಪ್ರತೀಕ್‌ ಶೆಟ್ಟಿ, ಆದರ್ಶ್‌ ಶೆಟ್ಟಿ, ಪ್ರೀತಮ್‌ ಶೆಟ್ಟಿ, ರತನ್‌ ಸಾಲ್ಯಾನ್‌, ರಾಜೇಂದ್ರ ಕೋಟ್ಯಾನ್‌, ಅಪೂರ್ವಾ ಶೆಟ್ಟಿ, ಮಧುರಾ ನಾಯ್ಕ…, ಪ್ರಾಣೇಶ್‌ ಶೆಟ್ಟಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಶ್ರಮಿಸಿದರು. 

ಚಿತ್ರ-ವರದಿ:ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.