“ಪುಣ್ಯಶ್ಲೋಕ ವಾರದ’ಎಂಬ ಗ್ರಂಥ ಬಿಡುಗಡೆ
ವಾರದ ಮಲ್ಲಪ್ಪನವರು ಇತರರಿಗೆ ಮಾದರಿ: ಕಾಶೀ ಜಗದ್ಗುರು
Team Udayavani, Jun 21, 2019, 5:45 PM IST
ಸೊಲ್ಲಾಪುರ: ಸೊಲ್ಲಾಪುರದ ವಾರದ ಮಲ್ಲಪ್ಪನವರು ವೀರಶೈವ ಧರ್ಮದ ಒಬ್ಬ ಯುಗಪುರುಷರಾಗಿದ್ದರು. ವಾರದ ಮಲ್ಲಪ್ಪನವರನ್ನು ಸೊಲ್ಲಾಪುರದ ಜನತೆ ಅಪ್ಪಸಾಹೇಬ್ ಎಂದು ಕರೆಯುತ್ತಿದ್ದರು ಎಂದು ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಸೊಲ್ಲಾಪುರ ನಗರದ ಹುತಾತ್ಮ ಸೃ¾ತಿ ಭವನದಲ್ಲಿ ಹಮ್ಮಿಕೊಂಡಿದ್ದ ವಾರದ ಮಲ್ಲಪ್ಪನವರ ಚರಿತ್ರೆ ಗ್ರಂಥವಾದ ‘ಪುಣ್ಯಶ್ಲೋಕ ವಾರದ’ ಎಂಬ ಗ್ರಂಥ ಬಿಡುಗಡೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿ, ಬ್ರಿಟಿಷ್ ಸರಕಾರವು ಇವರ ಸಾಮಾಜಿಕ ಸೇವೆಯನ್ನು ಪರೀಕ್ಷಿಸಿ ಇವರಿಗೆ ರಾವ್ ಬಹದ್ದೂರ್ ಎಂಬ ಪ್ರಶಸ್ತಿ ನೀಡಿ ಗೌರವಿಸಿದ್ದರು. ಅಪ್ಪಸಾಹೇಬ್ ವಾರದವರು ಸಾಮಾಜಿಕ, ಶೈಕ್ಷಣೀಕ, ಧಾರ್ಮಿಕ, ಔದ್ಯೋಗಿಕ ಮತ್ತು ರಾಜಕೀಯವಾಗಿ ಮಾಡಿದ ಸೇವೆ ಅಪೂರ್ವವಾದದು. ಸೊಲ್ಲಾಪುರದ ಜನತೆ ಇವರನ್ನು ಮಹಾರಾಜ ನೆಂತಲೆ ಕರೆಯುತ್ತಿದ್ದರು. ಇವರು ನರಸಿಂಹ ಗಿರಿಜಿ ಎಂಬ ಮುಂಬಯಿಯ ಮಾರ್ವಾಡಿ ಅವರ ಸಹಭಾಗಿತ್ವದಲ್ಲಿ ನೂಲಿನ ಗಿರಣಿಯನ್ನು ಸ್ಥಾಪಿಸಿದ್ದರು. ಅದರಿಂದ ಸಾವಿರಾರು ಬಡ ಕುಟುಂಬಗಳಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದರು. ತಮ್ಮ ಸಾವಿರಾರು ಎಕರೆ ಭೂಮಿಯ ಜೊತೆಗೆ ಇತರರ ಭೂಮಿಯನ್ನು ಪಡೆದುಕೊಂಡು 16 ಸಾವಿರ ಎಕರೆ ಭೂಮಿಯನ್ನು ರೈತರಿಗೆ ನೀಡುವುದರ ಮೂಲಕ ಅನೇಕ ರೈತರಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟಿದ್ದರು. ಅಖೀಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿ ಅವರು ಮಾಡಿದ ಕಾರ್ಯ ಅಪೂರ್ವವಾದದ್ದು. ಇಂತಹ ಮಹಾನೀಯರು ತಮ್ಮ ನಿವಾಸಕ್ಕಾಗಿ ಸೊಲ್ಲಾಪುರದಲ್ಲಿ ಇಂದ್ರ ಭವನವನ್ನು ನಿರ್ಮಿಸಿದ್ದರು. ಸೊಲ್ಲಾಪುರದಲ್ಲಿ ಅಷ್ಟು ಸುಂದರವಾದ ವಾಸ್ತುಶಿಲ್ಪವನ್ನು ಮತ್ತೆ ಯಾರಿದಂಲೂ ನಿರ್ಮಿಸಲಿಕ್ಕೆ ಸಾಧ್ಯವಾಗಲಿಲ್ಲ. ಈ ವಾಸ್ತುವಿನಲ್ಲಿ ಇಂದು ಸೊಲ್ಲಾಪುರ ಮಹಾನಗರ ಪಾಲಿಕೆ ಕಾರ್ಯ ನಿರ್ವಹಿಸುತ್ತಿದೆ. ಬ್ರಿಟಿಷರ ವಾಸ್ತುವಿನ ಮಾದರಿಯಲ್ಲಿ ನಿರ್ಮಿಸಿದ ಈ ವಾಸ್ತು ಸೊಲ್ಲಾಪುರಕ್ಕೆ ಒಂದು ಹೆಮ್ಮೆಯ ಗರಿಯನ್ನು ಮೂಡಿಸುವಂತಿದೆ. ಹೀಗೆ ವಾರದ ಮಲ್ಲಪ್ಪನವರು ಬಹು ಪ್ರತಿಭೆಯ ವ್ಯಕ್ತಿತ್ವವನ್ನು ಅಮರಾವತಿ ನಾ. ರಾ. ಬಾಮನ ಗಾವ್ಕರ್ ಇವರು ಮರಾಠಿಯಲ್ಲಿ ಅವರ ಚರಿತ್ರೆಯನ್ನು ಪುಣ್ಯಶ್ಲೋಕ ವಾರದ ಎಂಬ ಹೆಸರಿನಿಂದ ರಚಿಸಿದ್ದರು. ಇಂದು ಅದೇ ಗ್ರಂಥವು ಮರು ಮುದ್ರಣಗೊಂಡು ಲೋಕಾರ್ಪಣೆಗೊಳ್ಳುತ್ತಿರುವುದು ಒಂದು ಸಂತೋಷದ ಸಂಗತಿಯಾಗಿದೆ ಎಂದು ಹೇಳಿದರು.
ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸೊಲ್ಲಾಪುರ ವಿವಿ ಕುಲಪತಿ ಮೃಣಾಲಿನಿ ಫಡ್ನವೀಸ್ ಉಪಸ್ಥಿತರಿದ್ದರು. ಸೊಲ್ಲಾಪುರದ ಮೇಯರ್ ಶೋಭಾ ಬನಶೆಟ್ಟಿ, ರಾಜಶೇಖರ್ ಶಿವದಾರೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು. ಮರಾಠಿ ವೀರಶೈವ ಸಾಹಿತ್ಯದ ಶ್ರೇಷ್ಠ ಸಂಶೋಧಕರಾದ ಡಾ| ಶೇಷನಾರಾಯಣ ಪಸಾರಕರ ಇವರು ಈ ಗ್ರಂಥದ ಕುರಿತು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ