ಸಂಪೂರ್ಣ ಮಹಾರಾಷ್ಟ್ರ ಆವರಿಸಿದ ಮಾನ್ಸೂನ್
Team Udayavani, Jun 15, 2020, 9:20 AM IST
ಸಾಂದರ್ಭಿಕ ಚಿತ್ರ
ಮುಂಬಯಿ, ಜೂ. 14: ಕರಾವಳಿ ಮಹಾರಾಷ್ಟ್ರವನ್ನು ಅಪ್ಪಳಿಸಿದ ನಾಲ್ಕು ದಿನಗಳ ಅನಂತರ ನೈಋತ್ಯ ಮಾನ್ಸೂನ್ ಸ್ಥಿರವಾದ ಪ್ರಗತಿಯನ್ನು ಸಾಧಿಸಿದ್ದು, ಇದೀಗ ಸಂಪೂರ್ಣ ರಾಜ್ಯವನ್ನು ಆವರಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರವಿವಾರ ತಿಳಿಸಿದೆ.
ಮಾನ್ಸೂನ್ನ ಪ್ರಗತಿಯು ಈವರೆಗೆ ಸಾಮಾನ್ಯವಾಗಿದೆ ಮತ್ತು ನಿರೀಕ್ಷಿತ ಮಾರ್ಗದಲ್ಲಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ 10 ದಿನಗಳಲ್ಲಿ ಮಧ್ಯ ಮತ್ತು ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭದ ಕೆಲವು ಭಾಗಗಳಲ್ಲಿ ನಿರಂತರ ಮಳೆಯಾಗಿದೆ ಎಂದು ಐಎಂಡಿಯ ಮುಂಬಯಿ ಕೇಂದ್ರದ ಉಪ ಮಹಾ ನಿರ್ದೇಶಕ ಕೆ. ಎಸ್. ಹೊಸಳಿಕರ್ ಅವರು ಮಾಹಿತಿ ನೀಡಿದ್ದಾರೆ. ನೈಋತ್ಯ ಮಾನ್ಸೂನ್ ರವಿವಾರ ಇಡೀ ರಾಜ್ಯವನ್ನು ಆವರಿಸಿದೆ ಎಂದವರು ಹೇಳಿದ್ದಾರೆ.
ಉತ್ತರ ಮಹಾರಾಷ್ಟ್ರ ಮತ್ತು ಮರಾಠವಾಡ ಪ್ರದೇಶದ ಹೆಚ್ಚಿನ ಭಾಗಗಳು ಪ್ರತಿವರ್ಷ ನೀರಿನ ಕೊರತೆಯನ್ನು ಎದುರಿಸುತ್ತವೆ. ಪ್ರಸಕ್ತ ವರ್ಷ ಈ ಪ್ರದೇಶಗಳಲ್ಲಿ ಮಳೆ ಬಂದಿರುವುದು ಉತ್ತಮ ಸಂಕೇತವಾಗಿದೆ. ಇದು ರೈತರ ಬಿತ್ತನೆ ಪೂರ್ವ ಚಟುವಟಿಕೆಗಳನ್ನು ವೇಗಗೊಳಿಸಲು ಸಹಾಯ ಮಾಡಲಿದೆ ಎಂದವರು ನುಡಿದಿದ್ದಾರೆ.
ಆದರೆ, ನಾಸಿಕ್ ಸೇರಿದಂತೆ ಕೆಲವು ನಗರ ಪ್ರದೇಶಗಳಲ್ಲಿ ಭಾರೀ ಮಳೆಯು ಕೆಲವು ಸಮಸ್ಯೆಗಳಿಗೆ ಕಾರಣವಾಯಿತು. ಶನಿವಾರ ಭಾರೀ ಮಳೆಯ ಅನಂತರ ನಾಸಿಕ್ ರೋಡ್ ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮ ಪ್ರದೇಶದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಮಳೆ ಪ್ರಾರಂಭವಾಯಿತು ಮತ್ತು ಇದಾದ ಒಂದೆರಡು ಗಂಟೆಗಳಲ್ಲೇ ನಾಸಿಕ್ ರೋಡ್ ಪೊಲೀಸ್ ಠಾಣೆ ಮುಳುಗಡೆ ಹೊಂದಿತು. ನೀರನ್ನು ಹೊರಹಾಕಲು ಸರ್ವ ಸಿಬಂದಿಗಳು ಹರಸಾಹಸ ಮಾಡಬೇಕಾಯಿತು ಎಂದು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು