ಶ್ರೀ ರಜಕ ಸಂಘ ಮುಂಬಯಿ: ಗುರುವಂದನೆ ಕಾರ್ಯಕ್ರಮ
Team Udayavani, Aug 15, 2018, 1:39 PM IST
ಮುಂಬಯಿ: ಶ್ರೀ ರಜಕ ಸಂಘ ಮುಂಬಯಿ ಸಂಸ್ಥೆಯ ವತಿಯಿಂದ ಗುರುವಂದನ ಕಾರ್ಯಕ್ರಮವು ಆ. 5 ರಂದು ದಾದರ್ ಪೂರ್ವದ ಕೊಹಿನೂರ್ ಭವನ್ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ರಂಜಕ ಸಂಘ ಮುಂಬಯಿ ಅಧ್ಯಕ್ಷ ಸತೀಶ್ ಸಾಲ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಘದ ಉಪಾಧ್ಯಕ್ಷ ದಾಸು ಸಿ. ಸಾಲ್ಯಾನ್, ಹಿರಿಯ ಸದಸ್ಯರು, ಪದಾಧಿಕಾರಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಪೂರ್ಣಿಮೆ ಅಂಗವಾಗಿ ಗುರುವಿನ ಗೌರವಾರ್ಥಕವಾಗಿ ವರ್ಷಂಪ್ರತಿ ಸತ್ಕರಿಸುವಂತೆ ಈ ಬಾರಿ ರಜಕ ಸಮಾಜದ ಶಿಕ್ಷಕಿಯರಾದ ಶಾಲಿನಿ ಶಶಿಕಾಂತ್ ಕುಂದರ್ ಮತ್ತು ವಂದನಾ ವಿಶ್ವನಾಥ್ ಕುಂದರ್ ಅವರ ಗುರುವಂದನೆ ನಡೆಯಿತು.
ಶಿಕ್ಷಣ ವಿಭಾಗದ ಕಾರ್ಯಾಧ್ಯಕ್ಷೆ ಸುಮಿತಾ ಡಿ. ಸಾಲ್ಯಾನ್ ಮತ್ತು ಉಪ-ಕಾರ್ಯಾಧ್ಯಕ್ಷ ಸುಭಾಷ್ ಸಾಲ್ಯಾನ್ ಅವರು ಸಮ್ಮಾನಿತರನ್ನು ಪರಿಚಯಿಸಿದರು. ಬಳಿಕ ಪದಾಧಿಕಾರಿಗಳು ಶಶಿಕಾಂತ್ ಕುಂದರ್ ಪರಿವಾರವನ್ನೊಳಗೊಂಡು ಶಾಲು ಹೊದೆಸಿ ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗುರುವಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಮ್ರೇಡ್ ಪದವಿ ಗಳಿಸಿದ ಸತೀಶ್ ಗುಜರನ್ ಅವರಿಗೆ ಸಾಧಕ ಪ್ರಶಸ್ತಿಯನ್ನು ಶಾಲು ಹೊದೆಸಿ, ಫಲಪುಷ್ಪ ಸ್ಮರಣಿಕೆಯೊಂದಿಗೆ ಪ್ರದಾನಿಸಲಾಯಿತು. ರಜಕ ಸಂಘ ಮುಂಬಯಿ ಮತ್ತು ಪ್ರಾದೇಶಿಕ ವಲಯದ ಪದಾಧಿಕಾರಿಗಳು ಉಪಸ್ಥಿತರಿದ್ದು ಶುಭಹಾರೈಸಿದರು. ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಶಶಾಂಕ್ ಸಾಲ್ಯಾನ್ ಸಮ್ಮಾನಿತರನ್ನು ಪರಿಚಯಿಸಿದರು.
ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಪಲಿಮಾರ್ ಸ್ವಾಗತಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ