ಸೋಂಕಿತರ ಭೇಟಿಗೆ ಅವಕಾಶ ನೀಡಲು ಮನವಿ
Team Udayavani, May 23, 2021, 12:53 PM IST
ಮುಂಬಯಿ: ಚಿಂತಾಜನಕ ಸ್ಥಿತಿಯಲ್ಲಿರುವ ಕೊರೊನಾ ಸೋಂಕಿತರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಲು ಅವರ ಆಪ್ತ ಸಂಬಂಧಿಗಳಿಗೆ ಅವಕಾಶ ನೀಡುವಂತೆ ಶಿವಸೇನೆ ಕಾರ್ಪೊರೇಟರ್ ಮತ್ತು ಬಿಎಂಸಿಯ ಸುಧಾರಣಾ ಸಮಿತಿಯ ಅಧ್ಯಕ್ಷ ಸದಾನಂದ್ ಪರಬ್ ಅವರು ಬಿಎಂಸಿ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ಕೊರೊನಾ ಸೋಂಕಿತರು ಒಂಟಿಯಾಗಿರು ವಾಗ ಅವರ ಮಾನಸಿಕ ಒತ್ತಡ ಹೆಚ್ಚುತ್ತದೆ. ಕ್ವಾರಂಟೈನ್ ಸಂದರ್ಭ ಅವರನ್ನು ಕಾಣಲು ಸಂಬಂಧಿಗಳಿಗೆ ಅವಕಾಶ ನೀಡಿದ್ದಲ್ಲಿ ಅವರು ವೇಗವಾಗಿ ಚೇತರಿಸಿಕೊಳ್ಳಬಹುದು ಎಂದು ಕಾರ್ಪೊರೇಟರ್ ಹೇಳಿದ್ದಾರೆ.
ನಗರದ ಆಸ್ಪತ್ರೆಗಳು ರೋಗಿಗಳು ನಿರಾಳವಾಗಿ ಮತ್ತು ಒತ್ತಡರಹಿತವಾಗಿರಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ರೋಗಿಗಳು ಮತ್ತು ಅವರ ಕುಟುಂಬಗಳ ನಡುವೆ ಸಂಪರ್ಕವನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದಾಗ್ಯೂ, ಪಿಪಿಇ ಕಿಟ್ಗಳನ್ನು ಧರಿಸುವುದು ಸೇರಿದಂತೆ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದು
ಕೊಳ್ಳುವ ಮೂಲಕ ರೋಗಿಯನ್ನು ನೋಡಲು ತಕ್ಷಣದ ರಕ್ತಸಂಬಂಧಿಗಳಿಗೆ ಅವಕಾಶ ನೀಡಬೇಕು ಎಂದು ಪರಬ್ ಒತ್ತಾಯಿಸಿದ್ದಾರೆ.
ಸೋಂಕಿತರ ಸಂಬಂಧಿಗಳು ಕೋವಿಡ್ ವಾರ್ಡ್ಗಳಿಗೆ ಪ್ರವೇಶಿಸುವುದನ್ನು ನಿರ್ಬಂ ಧಿಸಲಾಗಿದೆ. ನಿರ್ಣಾಯಕ ರೋಗಿಗಳಿಗೆ 14 ದಿನಗಳ ಕಾಲ ರಕ್ತಸಂಬಂಧಿಗಳನ್ನು ಭೇಟಿ ಮಾಡಲು ಅನುಮತಿಯಿಲ್ಲ, ಅನೇಕ ಕುಟುಂಬಗಳು ಕೊರೊನಾದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದು, ಈ ಕ್ರಮ ಅನುಷ್ಠಾನದಿಂದ ಸೋಂಕಿತರಿಗೆ ಭಲ ಬರುತ್ತದೆ ಎಂದು ಶಿವಸೇನೆ ಕಾರ್ಪೊರೇಟರ್ ಸದಾನಂದ್ ಪರಬ್ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ