ಯೋಜಿತ ರೀತಿಯಲ್ಲಿ ಸಾರಿಗೆ ಪುನರಾರಂಭಿಸಿ


Team Udayavani, Sep 30, 2020, 7:32 PM IST

ಯೋಜಿತ ರೀತಿಯಲ್ಲಿ ಸಾರಿಗೆ ಪುನರಾರಂಭಿಸಿ

ಮುಂಬಯಿ, ಸೆ. 29: ಕೋವಿಡ್‌ ಹಿನ್ನೆಲೆ ಆರ್ಥಿಕವಾಗಿ ತೀವ್ರವಾಗಿ ತತ್ತರಿಸಿರುವ ಎಲ್ಲ ವರ್ಗದ ಜನರು ತಮ್ಮ ಜೀವನೋಪಾಯ ವನ್ನು ಗಳಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಉಪನಗರ ಲೋಕಲ್‌ ರೈಲು ಸೇರಿದಂತೆ ಎಲ್ಲ ಸಾರ್ವಜನಿಕ ಸಾರಿಗೆ ಸೌಲಭ್ಯಗಳನ್ನು ಯೋಜಿತ ರೀತಿಯಲ್ಲಿ ಪುನರಾರಂಭಿಸಿ ಎಂದು ಬಾಂಬೆ ಹೈಕೋರ್ಟ್‌ ಮಂಗಳವಾರ ರಾಜ್ಯ ಸರಕಾರಕ್ಕೆ ತಿಳಿಸಿದೆ.

ಕೆಳ ಹಂತದ ನ್ಯಾಯಾಲಯಗಳಿಗೆ ಹಾಜರಾಗಲು ವಕೀಲರಿಗೆ ಅನುಮತಿಯನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆ ವೇಳೆ ನ್ಯಾಯಾಲಯವು ಈ ಸಲಹೆ ನೀಡಿದೆ. ರಾಜ್ಯ ಸರಕಾರ ವಕೀಲರನ್ನು ಅಗತ್ಯ ಸೇವಾ ಪೂರೈಕೆದಾರರೆಂದು ಪರಿಗಣಿಸಬೇಕು ಮತ್ತು ಕೆಳ ನ್ಯಾಯಾಲಯಗಳಿಗೆ ಹಾಜರಾಗಲು ಉಪನಗರ ರೈಲುಗಳಲ್ಲಿ ಪ್ರಯಾಣಿಸಲು ಅವರಿಗೆ ಅನುಮತಿಯನ್ನು ನೀಡಬೇಕು ಎಂದು ಹಿರಿಯ ವಕೀಲ ಡಾ| ಮಿಲಿಂದ್‌ ಸಾಠೆ ಅವರು ಮಹಾರಾಷ್ಟ್ರ ಮತ್ತು ಗೋವಾದ ಬಾರ್‌ ಕೌನ್ಸಿಲ್‌ ಸಲ್ಲಿಸಿದ ಪಿಐಎಲ್‌ ಕುರಿತ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ದೀಪಂಕರ್‌ ದತ್ತ ಮತ್ತು ನ್ಯಾಯಮೂರ್ತಿ ಜಿ.ಎಸ್‌.

ಕುಲಕರ್ಣಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಆದಾಗ್ಯೂ ಸರಕಾರ ಪರ ವಕೀಲೆ ಪೂರ್ಣಿಮಾ ಕಾಂತರಿಯಾ ಅವರು ಈ ಮನವಿಯನ್ನು ವಿರೋಧಿಸಿದ್ದು, ಪ್ರಯಾಣದ ನಿರ್ಬಂಧಗಳ ಹೊರತಾಗಿಯೂ ಪೀಕ್‌ ಅವಧಿಯಲ್ಲಿ ಉಪನಗರ ರೈಲುಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿರುವುದರಿಂದ ಕೋವಿಡ್‌ ಪರಿಸ್ಥತಿ ಇನ್ನಷ್ಟು ಕೆಟ್ಟದಾಗುತ್ತದೆ ಎಂದು ವಾದಿಸಿದ್ದಾರೆ.

ಪೀಕ್‌ ಅವಧಿಯಲ್ಲಿ ರೈಲುಗಳು ತುಂಬಿರುವುದರಿಂದ ಕೆಳ ನ್ಯಾಯಾಲಯಗಳು ಮಧ್ಯಾಹ್ನ 2 ಗಂಟೆಯಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಬಹುದಾಗಿದೆ ಎಂದು ನ್ಯಾಯಪೀಠವು ಸಲಹೆಯನ್ನು ನೀಡಿದೆ. ಈ ಕ್ರಮವು ವಕೀಲರಿಗೆ ಮಧ್ಯಾಹ್ನ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.

ನಾವು ಪರಿಸ್ಥಿತಿಯನ್ನು ನಿವಾರಿಸುವ ಮಾರ್ಗಗಳ ಬಗ್ಗೆ ಯೋಚಿಸಬೇಕು. ಓಣಂ ಆಚರಣೆಯ ಅನಂತರ ಕೋವಿಡ್‌ ಪ್ರಕರಣಗಳಲ್ಲಿ ಶೇ. 126ರಷ್ಟು ಏರಿಕೆಯನ್ನು ಕಂಡಿರುವ ಕೇರಳದಲ್ಲಿ ಏನಾಗಿದೆ ಎಂಬುದರ ಬಗ್ಗೆ ನಾವು ಎಚ್ಚರ ವಹಿಸಬೇಕಾಗಿದೆ ಎಂದೂ ಸಿಜೆ ದತ್ತಾ ತಿಳಿಸಿದ್ದಾರೆ.

ವಕೀಲರನ್ನು ಮಾತ್ರ ಅನುಮತಿಸುವುದು ನಮ್ಮ ಕಡೆಯಿಂದ ಪಕ್ಷಪಾತ ಮಾಡಿದಂತಾಗಲಿದೆ. ನಾವು ಕೇವಲ ವಕೀಲರ ಬಗ್ಗೆ ಯೋಚಿಸಲು ಸಾಧ್ಯವಿಲ್ಲ, ಇತರ ಕ್ಷೇತ್ರಗಳ ಜನರ ಬಗ್ಗೆಯೂ ಯೋಚಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ. ಅ. 5 ರೊಳಗೆ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುವ ಉದ್ದೇಶದಿಂದ ಈ ಸಲಹೆಗಳ ಒಂದು ಪ್ರತಿಯನ್ನು ಮಹಾರಾಷ್ಟ್ರ ಸರಕಾರದೊಂದಿಗೆ ಹಂಚಿಕೊಳ್ಳುವಂತೆ ನ್ಯಾಯಾಲಯವು ಅರ್ಜಿದಾರರ ಪರ ವಕೀಲರನ್ನು ಕೇಳಿದೆ. ಸಂಬಂ ತ ಅರ್ಜಿಗಳ ಬಗ್ಗೆ ಅ. 6ರಂದು ನಡೆಯಲಿರುವ ಮುಂದಿನ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ

ತಮ್ಮ ನಿರ್ಧಾರವನ್ನು ತಿಳಿಸುವಂತೆ ರಾಜ್ಯ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಟಾಪ್ ನ್ಯೂಸ್

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.