ಡೊಂಬಿವಲಿ, ಕಲ್ಯಾಣ್‌: ರಸ್ತೆ ಬದಿ ಅಂಗಡಿ ತೆರೆಯಲು ಅವಕಾಶ


Team Udayavani, Aug 23, 2020, 11:41 AM IST

mumbai-tdy-1

ಸಾಂದರ್ಭಿಕ ಚಿತ್ರ

ಥಾಣೆ, ಆ. 20: ಮಾಲ್‌ಗ‌ಳು, ಜಿಮ್‌ ಮತ್ತು ಈಜುಕೊಳಗಳನ್ನು ಹೊರತುಪಡಿಸಿ ಕೋವಿಡ್‌ ಹಾಟ್‌ಸ್ಪಾಟ್‌ ಗಳ ಹೊರಗಿನ ವಾಣಿಜ್ಯ ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಸ್ಥಳೀಯ ನಾಗರಿಕ ಸಂಸ್ಥೆ ಅವಕಾಶವನ್ನು ನೀಡಿದೆ. ಇಲ್ಲಿನ ಈ ಹಿನ್ನೆಲೆ ಕಲ್ಯಾಣ್‌ ಮತ್ತು ಡೊಂಬಿವಲಿ ಪಟ್ಟಣಗಳಲ್ಲಿ ಬುಧವಾರದಿಂದ ರಸ್ತೆಯ ಎರಡೂ ಬದಿಗಳಲ್ಲಿ ಅಂಗಡಿಗಳು ತೆರೆಯಲ್ಪಟ್ಟಿವೆ.

ಕಲ್ಯಾಣ್‌ ಡೊಂಬಿವಲಿ ಮಹಾನಗರ ಪಾಲಿಕೆಯು (ಕೆಡಿಎಂಸಿ) ಪ್ರದೇಶದಲ್ಲಿ ಅಂಗಡಿಗಳನ್ನು ತೆರೆದಿಡುವ ಸಮಯವನ್ನು ಕೂಡ ವಿಸ್ತರಿಸಿದೆ. ಈ ಮೊದಲು ರಸ್ತೆಯ ಎರಡು ಬದಿಗಳಲ್ಲಿನ ಅಂಗಡಿಗಳನ್ನು ಪರ್ಯಾಯ ದಿನಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ತೆರೆದಿಡಲು ಅವಕಾಶವಿತ್ತು. ಕೆಡಿಎಂಸಿ ಆಯುಕ್ತ ವಿಜಯ್‌ ಸೂರ್ಯವಂಶಿ ಅವರು ಮಂಗಳವಾರ ಸಂಜೆ ಹೊರಡಿಸಿದ ಆದೇಶದಲ್ಲಿ ಮಾಲ್‌ಗ‌ಳು, ಮಾರುಕಟ್ಟೆ ಸಂಕೀರ್ಣಗಳು, ತರಕಾರಿ ಮಾರುಕಟ್ಟೆಗಳು, ಜಿಮ್‌ಗಳು ಮತ್ತು ಈಜುಕೊಳಗಳನ್ನು ಹೊರತುಪಡಿಸಿ ಕೋವಿಡ್‌ ಹಾಟ್‌ಸ್ಪಾಟ್‌ಗಳ ಹೊರಗಿನ ಎಲ್ಲ ಅಂಗಡಿಗಳನ್ನು ಎಲ್ಲ ದಿನಗಳಲ್ಲಿ ತೆರೆಯಲು ಅವಕಾಶ ಮಾಡಿಕೊಟ್ಟಿದ್ದು, ಅವುಗಳ ಸಮಯವನ್ನು ವಿಸ್ತರಿಸಿದ್ದಾರೆ.

ಕೋವಿಡ್ ಹರಡುವುದನ್ನು ತಡೆಗಟ್ಟಲು ನಿಗದಿಪಡಿಸಿದ ಪೋಟೋಕಾಲ್ ಗಳನ್ನು ಕಟ್ಟುನಿಟ್ಟಾಗಿ ಪಾಲಿಸ ಬೇಕು. ಮಾರ್ಗ ಸೂಚಿಗಳನ್ನು ಉಲ್ಲಂಘಿಸುವ ವ್ಯಾಪಾರ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕಾಲಕಾಲಕ್ಕೆ ಘೋಷಿಸಲಾಗುವ ನಿರ್ಬಂಧಗಳನ್ನು ಅನುಸರಿಸಲು ಕೋವಿಡ್‌ ಹಾಟ್‌ಸ್ಪಾಟ್‌ಗಳಾಗಿ ಗೊತ್ತುಪಡಿಸಿದ ಪ್ರದೇಶಗಳು ಅಗತ್ಯವಾಗಿರುತ್ತವೆ ಎಂದು ಕೆಡಿಎಂಸಿ ವಕ್ತಾರೆ ಮಾಧುರಿ ಫೋಪಾಲೆ ಹೇಳಿದ್ದಾರೆ.

ಪ್ರಸ್ತುತ ಪಟ್ಟಣದ ಬೀದಿಗಳಲ್ಲಿ ಜನರು ಮಾಸ್ಕ್ ಧರಿಸಿಕೊಂಡು ಗಣೇಶ ಚತುರ್ಥಿ ಹಿನ್ನೆಲೆ ವಿಗ್ರಹಗಳು, ಅಲಂಕಾರಿಕ ವಸ್ತು ಮತ್ತು ಮಿಠಾಯಿಗಳನ್ನು ಖರೀದಿಸಲು ಅಂಗಡಿಗಳ ಹೊರಗೆ ಸರದಿ ಸಾಲುಗಳಲ್ಲಿ ನಿಂತಿರುವುದು ಕಾಣಲು ಸಿಕ್ಕಿದೆ ಎಂದಿದಾರೆ. ನಿಯಮಗಳನ್ನು ಸಡಿಲಿಸುವ ನಾಗರಿಕ ಸಂಸ್ಥೆಯ ನಿರ್ಧಾರವನ್ನು ಕಲ್ಯಾಣ್‌ ನಿವಾಸಿ ತುಷಾರ್‌ ರಾಜೆ ಅವರು ಸ್ವಾಗತಿಸಿದ್ದು, ನಾಗರಿಕರು ಸೋಂಕು ಹರಡುವುದನ್ನು ತಡೆಗಟ್ಟುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದಾರೆ. ನಿರ್ಬಂಧಗಳ ಸರಾಗಗೊಳಿಸುವಿಕೆಯು ಮಾರುಕಟ್ಟೆಗಳಲ್ಲಿ ಜನಸಂದಣಿಗೆ ಕಾರಣವಾಗಬಹುದು ಆದರೆ ವ್ಯವಹಾರಗಳನ್ನು ಬಹಳ ಸಮಯದವರೆಗೆ ಮುಚ್ಚಲು ಸಾಧ್ಯವಿಲ್ಲ ಎಂದು ಡೊಂಬಿವಲಿ ನಿವಾಸಿ ಭಗವಾನ್‌ ಮಾಂಡ್ಲಿಕ್‌ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.