ಲಾಕ್‌ಡೌನ್‌: ಜನರ ನೆರವಿಗೆ ನಿಂತ ರೋಹನ್‌ ಶೆಟ್ಟಿ


Team Udayavani, Oct 20, 2020, 7:35 PM IST

ಲಾಕ್‌ಡೌನ್‌: ಜನರ ನೆರವಿಗೆ ನಿಂತ ರೋಹನ್‌ ಶೆಟ್ಟಿ

ಪುಣೆ, ಅ. 19: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಗರದಲ್ಲಿ ಲಾಕ್‌ಡೌನ್‌ ಘೋಷಿಸಲಾಗಿತ್ತು. ಆ ಹೊತ್ತಿನಲ್ಲಿ ಸಂಕಷ್ಟಕ್ಕೆ ಸಿಲುಕಿದ ನಾಗರಿಕರಿಗೆ ಸಮುದಾಯ ಸಂಘಟನೆ ಗಳು ಒಂದು ಹಂತದಲ್ಲಿ ನೆರವಿಗೆ ಬಂದರೆ, ಇನ್ನು  ಕೆಲವರು ವೈಯಕ್ತಿಕ ನೆಲೆಯಲ್ಲಿ ನೆರವಿಗೆ ನಿಂತು ಮಾನವೀಯತೆ ಮೆರೆದರು. ಅಂಥವರಲ್ಲಿ ಪುಣೆಯ ಯುವ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ ಅವರು ಒಬ್ಬರು. ಹಿರಿಯ ನಾಗರಿಕರಿಗೆ, ಅನಾರೋಗ್ಯ ಪೀಡಿತರಿಗೆ, ತಮ್ಮ ಊರುಗಳಿಗೆ ತೆರಳ ಲಾಗದೇ ತೊಂದರೆಗೀಡಾದವರಿಗೆ, ಕೋವಿಡ್ ಯೋಧರಿಗೆ, ಶುಚಿತ್ವದ ಕರ್ಮ ಚಾರಿಗಳಿಗೆ ನೆರವಿನ ಹಸ್ತ ಚಾಚಿದ್ದಾರೆ.

ರೇಷನ್‌ ಕಿಟ್‌ ವಿತರಣೆ :

ವಿವಿಧ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಇವರು, ಸುಮಾರು 700 ಕುಟುಂಬಗಳಿಗೆ ಆಹಾರ ವಸ್ತುಗಳ ಕಿಟ್‌ಗಳನ್ನು ಪೂರೈಸಿದ್ದಾರೆ. ನಗರದ ವಿವಿಧೆಡೆ ದಿನದ 24 ಗಂಟೆಯೂ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಎಲ್ಲೂ ಊಟ-ಚಹಾ ಸಿಗದ ಹೊತ್ತಿನಲ್ಲಿ ಅವೆಲ್ಲವನ್ನೂ ಒದಗಿಸು ತ್ತಿದ್ದರು ರೋಹನ್‌.

ಪೊಲೀಸರಿಗೆ ಮಾಸ್ಕ್ ವಿತರಣೆ :

ವಿವಿಧ ಪೊಲೀಸ್‌ ಠಾಣೆಗಳ ಪೊಲೀಸರಿಗೆ 300ಕ್ಕೂ ಹೆಚ್ಚು ಮಾಸ್ಕ್, ಮಾಸ್ಕ್ ಶೀಲ್ಡ್‌ಗಳನ್ನು ಹಂಚಲಾಗಿದೆ. ಪೊಲೀಸರು ಅಲ್ಲಲ್ಲಿ ಟೆಂಟ್‌ ಹಾಕಿ ಕಾರ್ಯ ನಿರ್ವಹಿಸಲು ಸುಮಾರು 40 ಟೇಬಲ್‌ ಹಾಗೂ ಕುರ್ಚಿಗಳನ್ನು ಒದಗಿಸಲಾಗಿದೆ. ಬಿಬ್ವೆವಾಡಿಯಲ್ಲಿರುವ ಆರ್ಧಾ ಮುಖ ಬಾಧಿರ್‌ ಶಾಲೆಯನ್ನು ಸಂಪೂರ್ಣ ಸ್ಯಾನಿ ಟೇಶನ್‌ ಮಾಡಿಸಲಾಗಿದೆ. ಯುವ ವಿಭಾಗದ ಸದಸ್ಯರ ಅವರ ಒಂದು ಘಟಕವು ಪೊಲೀಸರ ಸೇವೆಯಲ್ಲೇ  ತೊಡಗಿದ್ದು ವಿಶೇಷ.

ಲಯನ್ಸ್‌  ಕ್ಲಬ್‌ ಸಹಯೋಗ :  ಲಯನ್ಸ್‌ ಕ್ಲಬ್‌ ಪುಣೆ ಸಹಯೋಗದಲ್ಲಿ ಜನರ ಆರೋಗ್ಯ ಸುಧಾರಣೆಗಾಗಿ ಹೋಮಿಯೋಪತಿಕ್‌ ಔಷಧಗಳನ್ನು ವಿತರಿಸಲಾಯಿತು. ವಿವಿಧ ಶಾಲೆ ಗಳಿಗೆ ಸ್ಯಾನಿಟೈಸೇಶನ್‌ ಮೆಷಿನ್‌ಗಳನ್ನೂ ವಿತರಿಸಲಾಯಿತು.

2017ರಿಂದ ಪುಣೆ ತುಳುಕೂಟದ ಯುವ :

ವಿಭಾಗದ ಕಾರ್ಯಾಧ್ಯಕ್ಷರಾಗಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಸ್ಪರ್ಧೆಗಳು, ಚಿತ್ರಕಲಾ ಸ್ಪರ್ಧೆ, ಜನಜಾಗೃತಿಗಾಗಿ ಸೈಕಲ್‌ ರ್ಯಾಲಿ, ರಸ್ತೆ ಸುರಕ್ಷಾ ಜಾಗೃತಿ- ಹತ್ತಾರು ವಿಶಿಷ್ಟವಾದ ಕಾರ್ಯಕ್ರಮ ಸಂಘಟಿಸಿದ್ದಾರೆ. ಕಳೆದ ಮಹಾನಗರಪಾಲಿಕೆ ಚುನಾವಣೆ ಯಲ್ಲೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರೋಹನ್‌,  ಇಲ್ಲಿಯ ನಿವೃತ್ತ ಬ್ಯಾಂಕ್‌ ಉದ್ಯೋಗಿ ಪುರುಷೋತ್ತಮ  ಶೆಟ್ಟಿ ಮತ್ತು ಸಮಾಜ ಸೇವಕಿ ಪ್ರೇಮಾ ಶೆಟ್ಟಿ  ದಂಪತಿಯ ಪುತ್ರ.

ಕೋವಿಡ್ ಜಾಗೃತಿ :

ಕೋವಿಡ್ ಸೋಂಕಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿಯನ್ನು ಮೂಡಿಸಿದ್ದು ಇವರ ನೇತೃತ್ವದ ತಂಡದ ಮತ್ತೂಂದು ಒಳ್ಳೆಯ ಕೆಲಸ. ಕೊಳಗೇರಿ ನಿವಾಸಿಗಳಿಗೆ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಇನ್ನಿತರ ಕೋವಿಡ್‌ ಮಾರ್ಗಸೂಚಿಗಳನ್ನು ಮನವರಿಕೆ ಮಾಡಲಾಯಿತು. ಶುಚಿತ್ವ ಮಾರ್ಗದರ್ಶನ ಶಿಬಿರ, ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಯಿತು. ಹಲವಾರು ಜನರಿಗೆ ತಮ್ಮ ಊರುಗಳಿಗೆ ತೆರಳಲು ಅಗತ್ಯ ಪರವಾನಿಗೆ ಗಳನ್ನು ಒದಗಿಸಲಾಯಿತು. ಪಿಂಪ್ರಿ-ಚಿಂಚಾÌಡ್‌ನ‌ ಭೋಸ್ರಿ ಪ್ರದೇಶದಲ್ಲಿ ಸುಮಾರು 300 ಜನರಿಗೆ ಆಹಾರಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.