ನಾಟ್ಯರಂಗದ ಕೋಲ್ಮಿಂಚು ಸಹನಾ ಕುಲಾಲ್‌ ಭರತನಾಟ್ಯ ರಂಗಪ್ರವೇಶ


Team Udayavani, Jun 16, 2017, 2:55 PM IST

12-Mum01b.jpg

ಇಂದಿನ ದಿನಗಳಲ್ಲಿ ನೃತ್ಯಪ್ರಕಾರಗಳನ್ನು ಮೆಚ್ಚದ ರಸಿಕರೇ ಇಲ್ಲ. ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದವರೂ ನೃತ್ಯಾಭ್ಯಾಸದ ನಂಟನ್ನು ಬಿಟ್ಟಿಲ್ಲ. ಹತ್ತಾರು ಪ್ರಕಾರದ ಪಾರಂಪರಿಕ ನೃತ್ಯ ಶೈಲಿಯೊಂದಿಗೆ ಆಧುನಿಕ ಸ್ಪರ್ಶಗಳನ್ನೂ ಸೇರಿಸಿಕೊಂಡು ನೋಡುಗರ ಕಣ್ಣನ್ನು ಮಂತ್ರಮುಗ್ಧಗೊಳಿಸುವ ಅದ್ಭುತ ನೃತ್ಯ ಪ್ರಕಾರಗಳನ್ನು ನಾವು ನೋಡಬಹುದಾಗಿದೆ. ಅಂತೆಯೇ ಶಾಸ್ತ್ರೀಯ ಶೈಲಿಯ ಭರತನಾಟ್ಯಕ್ಕೆ  ಮನಸೋಲದವರಿಲ್ಲ.

ನಿರಂತರ ಅಭ್ಯಾಸ, ಏಕಾಗ್ರತೆಯೊಂದಿಗೆ ಮನಸ್ಸನ್ನು ಧ್ಯಾನೀಕರಿಸಿ ವಿವಿಧ ಭಾವ ಭಂಗಿಗಳೊಂದಿಗೆ ದೇವರ ನಾಮಕ್ಕೆ ಪ್ರಸ್ತುತಪಡಿಸುವ ಭರತನಾಟ್ಯವನ್ನು ಅದೆಷ್ಟೋ ಕಲಾವಿದರು ಸಮೃದ್ಧಿಗೊಳಿಸಿದ್ದಾರೆ. ಇದೇ ರೀತಿ ಪುಣೆಯ ಕನ್ನಡತಿ ಸಹನಾ ಕುಲಾಲ್‌ ಎಂಬ ಅನನ್ಯ ನಾಟ್ಯ ಪ್ರತಿಭೆ ನೃತ್ಯವನ್ನು ಒಲಿಸಿಕೊಂಡು ನೋಡುಗರ ಕಣ್ಮನ ಸೆಳೆಯುವ ಪ್ರತಿಭೆಯನ್ನು ಪ್ರದರ್ಶಿಸುತ್ತಿರುವುದು ಪ್ರಶಂಸನೀಯವಾಗಿದೆ. ವಿವಿಧ ಸಂಘ ಸಂಸ್ಥೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಉತ್ತಮ ನೃತ್ಯಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದ ಸಹನಾ ಕುಲಾಲ್‌ ಮೇ 30ರಂದು ಪುಣೆಯ ಯಶವಂತರಾವ್‌ ಚವಾಣ್‌ ನಾಟ್ಯ ಗೃಹದಲ್ಲಿ ನೃತ್ಯಾಂಜಲಿ ನೃತ್ಯ ಸಂಸ್ಥೆ ವತಿಯಿಂದ ವೈಶಾಲಿ ಪಾರಸನೀಸ್‌ ಅವರ ಸಂಯೋಜನೆಯಲ್ಲಿ ಭರತನಾಟ್ಯ ರಂಗಪ್ರವೇಶ ಮಾಡಿದರು.

ಶಿವಾರ್ಪಣಂ ಎನ್ನುವ  ಕಾರ್ಯಕ್ರಮವು ಸೇರಿದ್ದ ಕಲಾರಸಿಕರನ್ನು ಮೋಡಿ ಮಾಡುವುದರಲ್ಲಿ ಯಶಸ್ವಿಯಾಯಿತು. ಈ ಕಾರ್ಯಕ್ರಮದಲ್ಲಿ ಸಹನಾ ಕುಲಾಲ್‌ ಅವರೊಂದಿಗೆ ವೈಶಾಲಿ ಪಾರಸನೀಸ್‌ ಅವರ  ಶಿಷ್ಯೆಯರಾದ ಅಪರ್ಣಾ, ರೇಷ್ಮಾ ನಾಯರ್‌, ನೇಹಾ ಸುರೇಶ್‌, ಹರ್ಷದಾ ಕುಲಕರ್ಣಿ, ಸುದೇಶ್ನಾ ನಾಗಪುರೆ ಮತ್ತು ಅಂಕಿತಾ ಡಿಮ್ಲೆ ಇವರು ಶಿವನ ಕುರಿತಾದ ಹಾಡುಗಳಿಗೆ ನೃತ್ಯಗಳನ್ನು ಪ್ರಸ್ತುತಗೊಳಿಸಿದರು. ಋತುಜಾ ಪಾಠಕ್‌ ಹಾಗೂ ಸಯಾಲಿ ಪಾಠಕ್‌  ಕಾರ್ಯಕ್ರಮ ನಿರೂಪಿಸಿದರು.

ಪುಣೆಯಲ್ಲಿ ವಾಸ್ತವ್ಯವಿರುವ ಸಹನಾ ಕುಲಾಲ್‌ ಮೂಲತಃ ಬದಿಯಡ್ಕ ಚಂದ್ರಶೇಖರ  ಕುಲಾಲ್‌ ಹಾಗೂ ಸರಸ್ವತಿ ಕುಲಾಲ್‌ ದಂಪತಿಯ ಪುತ್ರಿ. ಪ್ರಸ್ತುತ 12ನೇ ತರಗತಿಯಲ್ಲಿ ಕಲಿಯುತ್ತಿರುವ ಸಹನಾ ಬಾಲ್ಯದಿಂದಲೂ ನೃತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದು  ವೈಶಾಲಿ ಪಾರಸನೀಸ್‌ ಅವರಿಂದ ಭರತನಾಟ್ಯವನ್ನು ಅಭ್ಯಸಿಸಿದ್ದರು. ಈಗಾಗಲೇ ಹಲವಾರು ನೃತ್ಯ ಕಾರ್ಯಕ್ರಮಗಳನ್ನು ನೀಡಿ ಪ್ರತಿಭಾನ್ವಿತೆಯಾಗಿ ಗುರುತಿಸಿಕೊಂಡಿರುವ ಸಹನಾ  ಭವಿಷ್ಯದಲ್ಲಿ ಉತ್ತಮ  ಪ್ರದರ್ಶನಗಳ ಮೂಲಕ ಪ್ರಸಿದ್ಧಿಯನ್ನು ಪಡೆಯಲೆಂದು ಶುಭ ಹಾರೈಕೆ. 

  ಕಿರಣ್‌  ಬಿ. ರೈ ಕರ್ನೂರು

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.