ಹೇಳಿದ್ದು 20 ಸಾವಿರ; ಬಂದದ್ದು ಕೇವಲ 700 ವೈದ್ಯರು

ವೈದ್ಯರ ಕೊರತೆಯನ್ನು ಎದುರಿಸುತ್ತಿರುವ ಕೋವಿಡ್‌-19 ಸೆಂಟರ್‌ಗಳು

Team Udayavani, Jun 18, 2020, 10:19 AM IST

ಹೇಳಿದ್ದು 20 ಸಾವಿರ; ಬಂದದ್ದು ಕೇವಲ 700 ವೈದ್ಯರು

ಮುಂಬಯಿ: ರಾಜ್ಯದಲ್ಲಿ ಒಂದೆಡೆ ಕೋವಿಡ್ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇನ್ನೊಂದೆಡೆ ಕೋವಿಡ್‌-19 ಆರೈಕೆ ಕೇಂದ್ರಗಳಲ್ಲಿ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಈ ಮಧ್ಯೆ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶನಾಲಯ (ಡಿಎಂಇಆರ್‌) ಮೇ ತಿಂಗಳಲ್ಲಿ ಕರ್ತವ್ಯಕ್ಕಾಗಿ ವೈದ್ಯರು ವರದಿ ಮಾಡಬೇಕೆಂಬ ಆದೇಶಕ್ಕೆ 20,000 ವೈದ್ಯರು ಪ್ರತಿಕ್ರಿಯಿಸಿದ್ದು, ಇಲ್ಲಿಯವರೆಗೆ ಕೇವಲ 700 ಮಂದಿ ವೈದ್ಯರು ಮಾತ್ರ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಮೂಲಗಳು ತಿಳಿಸಿವೆ.

ಗೈರು ಹಾಜರಾದರೆ ಕ್ರಮ
ಮೇ 4 ರಂದು ಡಿಎಂಇಆರ್‌ ನಗರದ 25 ಸಾವಿರ ನೋಂದಾಯಿತ ವೈದ್ಯರನ್ನು 15 ದಿನಗಳ ಕಡ್ಡಾಯ ಕೋವಿಡ್‌-19 ಕರ್ತವ್ಯಕ್ಕಾಗಿ ವರದಿ ಮಾಡುವಂತೆ ಸುತ್ತೋಲೆ ಹೊರಡಿಸಿತ್ತು. ಒಂದು ವೇಳೆ ಗೈರು ಹಾಜರಾದರೆ ವೈದ್ಯಕೀಯ ಕೌನ್ಸಿಲ್‌ ಆಫ್ ಇಂಡಿಯಾ ಕೋಡ್‌ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಇದು ವೈದ್ಯರ ಪರವಾನಗಿಯನ್ನು ಅಮಾನತುಗೊಳಿಸಬಹುದು ಅಥವಾ ರದ್ದುಗೊಳಿಸಬಹುದು ಎಂದು ಆದೇಶಿಸಲಾಗಿತ್ತು. ಸುತ್ತೋಲೆಗೆ ಪ್ರತಿಕ್ರಿಯಿಸಿದ 20, 000 ನೋಂದಾಯಿತ ವೈದ್ಯರಲ್ಲಿ, ಡಿಎಂಇಆರ್‌ 4,246 ಜನರನ್ನು ಆಯ್ಕೆ ಮಾಡಿ ಈ ಪಟ್ಟಿಯ ನ್ನು ತಪಾಸಣೆಗಾಗಿ ಬಿಎಂಸಿಗೆ ಕಳುಹಿಸಿದೆ. ಕೋವಿಡ್‌ ಕರ್ತವ್ಯಕ್ಕಾಗಿ ಡಿಎಂಇಆರ್‌ 55 ವರ್ಷಕ್ಕಿಂತ ಮೇಲ್ಪಟ್ಟ ವೈದ್ಯರನ್ನು ಅನರ್ಹಗೊಳಿ ಸುವುದರಿಂದ ಶಾರ್ಟ್‌ಲಿಸ್ಟ್‌ ಮಾಡಿದ ವೈದ್ಯರು 25ರಿಂದ 45 ವರ್ಷ ವಯಸ್ಸಿನವರಾಗಿದ್ದರು.

ಸರಕಾರಿ ವೈದ್ಯರಿಗೆ ವಿನಾಯಿತಿ
ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ನಡೆಸುವ ಆಸ್ಪತ್ರೆಗಳಲ್ಲಿ ಕೆಲಸ ಮಾಡುವವರಿಗೆ ವಿನಾಯಿತಿ ನೀಡಲಾಗಿತ್ತು. ಈಗಾಗಲೇ ಆಸ್ಪತ್ರೆಗಳಲ್ಲಿ ಅಭ್ಯಾಸ ಮಾಡುತ್ತಿದ್ದ ವೈದ್ಯರಿಗೂ ವಿನಾಯಿತಿ ನೀಡಲಾಗಿದೆ. ಶಾರ್ಟ್‌ಲಿಸ್ಟ್‌ ಮಾಡಿದ ವೈದ್ಯರನ್ನು ಪರೀಕ್ಷಿಸಿದ ಅನಂತರ ಬಿಎಂಸಿ 700 ವೈದ್ಯರು ಮಾತ್ರ ಲಭ್ಯವಿರುವುದು ಎಂದು ತಿಳಿಸಿದೆ. ಹೆಚ್ಚಿನ ವೈದ್ಯರು ಭಾರತದ ಹೊರಗಿದ್ದಾರೆ. ಮುಂಬಯಿಯಲ್ಲಿ ನಾವು ಅವರನ್ನು ಕೋವಿಡ್‌ ಡ್ನೂಟಿಗೆ ನಿಯೋಜಿಸುವುದು ಹೇಗೆ? ಅಲ್ಲದೆ ಅನೇಕ ವೈದ್ಯರು ಈಗಾಗಲೇ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಅಲ್ಲೇ ಕೋವಿಡ್‌ ಕರ್ತವ್ಯಕ್ಕೆ ನಿಯೋಜಿಸಿದ್ದೇವೆ. ಕೋವಿಡ್‌ ಅಲ್ಲದ ವೈದ್ಯರ ಅವಶ್ಯಕತೆಯೂ ನಮಗಿದೆ. ಚಿಕಿತ್ಸಾಲಯಗಳನ್ನು ನಡೆಸುವ ಸಾಮಾನ್ಯ ವೈದ್ಯರು ನಮಗೆ ಬೇಕಾಗಿದ್ದಾರೆ ಎಂದು ಬಿಎಂಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾಸಗಿ ಚಿಕಿತ್ಸಾಲಯಗಳ ವೈದ್ಯರ ಅಗತ್ಯತೆ
ಖಾಸಗಿ ಚಿಕಿತ್ಸಾಲಯಗಳನ್ನು ನಡೆಸುತ್ತಿರುವ ವೈದ್ಯರ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲದಿದ್ದರೂ, ಮಹಾರಾಷ್ಟ್ರ ವೈದ್ಯಕೀಯ ಮಂಡಳಿ ಅಂದಾಜಿನ ಪ್ರಕಾರ ಮುಂಬಯಿಯಲ್ಲಿ ಸುಮಾರು 5,000 ವೈದ್ಯರು ಲಭ್ಯವಿದ್ದಾರೆ, ಅವರು 55 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ನೋಟಿಸ್‌ ಮುಖ್ಯವಾಗಿ ಚಿಕಿತ್ಸಾಲಯಗಳನ್ನು ಹೊಂದಿರುವ ವೈದ್ಯರನ್ನು ಗುರಿಯಾಗಿರಿಸಿಕೊಂಡಿದೆ. ಅವರು ನಾಗರಿಕ ಆಸ್ಪತ್ರೆಗಳಲ್ಲಿ ಮತ್ತು ಅವರ ಚಿಕಿತ್ಸಾಲಯಗಳಲ್ಲಿ ಏಕಕಾಲದಲ್ಲಿ ಕೆಲಸ ಮಾಡಬಹುದು ಎಂದು ಎಂಎಂಸಿಯ ಅಧ್ಯಕ್ಷ ಡಾ| ಶಿವಕುಮಾರ್‌ ಉತ್ತೂರ್‌ ಹೇಳಿದ್ದಾರೆ, ವಿಶೇಷವೆಂದರೆ ನೋಂದಾಯಿತ ಸುಮಾರು ಶೇ. 5ರಷ್ಟು ಜನರು ವಿದೇಶದಲ್ಲಿ ವಾಸಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಸಕ್ರಿಯ ಕೋವಿಡ್‌ -19 ಪ್ರಕರಣಗಳ ಸಂಖ್ಯೆ ಏರುತ್ತಿರುವುದರಿಂದ, ಹೆಚ್ಚಿನ ವೈದ್ಯರು ತುರ್ತಾಗಿ ಅಗತ್ಯವಿದೆ ಎಂದು ಬಿಎಂಸಿ ಹೇಳಿದೆ. ವೈದ್ಯರ ಕೊರತೆಯನ್ನು ಪೂರೈಸಲು ನಮಗೆ ಶಾಶ್ವತ ಪರಿಹಾರ ಬೇಕು. ಪ್ರತಿ 15 ದಿನಗಳ ಅನಂತರ, ನಾವು ವೈದ್ಯರನ್ನು ಸ್ಕ್ಯಾನ್‌ ಮತ್ತು ಪರೀಕ್ಷೆಗೊಳಪಡಿಸುವ ಪ್ರಕ್ರಿಯೆಯ ಮೂಲಕ ಸಾಗುತ್ತಿ ದ್ದೇವೆ ಎಂದು ಬಿಎಂಸಿಯ ಆರೋಗ್ಯ ವಿಭಾಗದ ಅಧಿಕಾರಿಯೊಬ್ಬರು ಹೇಳಿದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.