ಸಾಂತಾಕ್ರೂಜ್‌ ಪೇಜಾವರ ಮಠ ಪೇಜಾವರ ಶ್ರೀಗಳಿಗೆ ರಜತ ತುಲಾಭಾರ


Team Udayavani, Jun 27, 2019, 2:44 PM IST

2506MUM04

ಮುಂಬಯಿ: ದೊಡ್ಡ ಯೋಜನಾ ಕಾರ್ಯಕ್ಕಾಗಿ, ಭಗವಂತನ ಸೇವೆಗಾಗಿ ಏರ್ಪಡಿಸಿದ ತುಲಾಭಾರ ಸೇವೆ ಇದಾಗಿದೆ. ಇದು ಕೃಷ್ಣನ ಮಂದಿರಕ್ಕಾಗಿ ಶ್ರೀಕೃಷ್ಣನ ತುಲಾಭಾರವಾಗಿದೆ. ಆದ್ದರಿಂದ ಕೃಷ್ಣನ ಭಕ್ತರೆಲ್ಲರ ಈ ತುಲಾಭಾರ ಇದು ನನ್ನದಲ್ಲ, ಭಗವಂತನ ಸೇವಾ ತುಲಾಭಾರವಾಗಿದೆ. ಕೃಷ್ಣನ ಸೇವೆ ಎಂಬ ರೂಪದಿಂದ ಕೃಷ್ಣನ ಭಕ್ತರೆಲ್ಲರೂ ಸೇರಿ ಮಾಡಿದ ತುಲಾಭಾರ. ಜನರಿಂದ ಜನರಿಗಾಗಿ ಜನರ ಕಾರ್ಯ ಕೃಷ್ಣನೇ ಮಾಡಿಸುವ ಸೇವೆ ಇದಾಗಿದೆ. ಆದ್ದರಿಂದ ನನಗಿದು ಭಾರವೇ ಅಲ್ಲ. ಯಾಕೆಂದರೆ ಇದು ನನಗಲ್ಲ ಕೃಷ್ಣನಿಗೆ ಸಂದ ಸೇವೆಯಾಗಿದೆ. ನನಗೆನೇ ಅಂತ ಮಾಡುತ್ತಿದ್ದರೆ ನನಗೆ ಖಂಡಿತ ಭಾರವಾಗುತ್ತಿತ್ತು ಎಂದು ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ನುಡಿದರು.

ಜೂ. 24 ರಂದು ಸಂಜೆ ಸಾಂತಾಕ್ರೂಜ್‌ ಪೇಜಾವರ ಮಠದಲ್ಲಿ ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ ಗೋಕುಲ, ಬಿಎಸ್‌ಕೆಬಿ ಅಸೋಸಿಯೇಶನ್‌ ಮುಂಬಯಿ ಹಾಗೂ ಶ್ರೀ ಕೃಷ್ಣ ಭಕ್ತಾದಿಗಳು ಮತ್ತು ಶ್ರೀ ಪೇಜಾವರ ಮಠಾಧೀಶರ ಅಭಿಮಾನಿಗಳು ಇದೇ ಪ್ರಪ್ರಥಮ ಬಾರಿಗೆ ಮುಂಬಯಿ ಹಾಗೂ ಉಪನಗರಗಳಲ್ಲಿ ಆಯೋಜಿಸಿರುವ ಪೇಜಾವರ ಶ್ರೀಗಳ ರಜತ ತುಲಾಭಾರ ಸಪ್ತಾಹಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಮಧ್ವಾಚಾರ್ಯರು ವರ್ಣಿಸಿದಂತೆ ಕೃಷ್ಣ ಅಂದರೆ ದೊಡ್ಡ ಸಮುದ್ರ, ಏಕ ಸಾಗರ ಎಂದರ್ಥ. ಆ ಸಮುದ್ರದಲ್ಲಿ ಜಲವಿದೆ. ಆದರೆ ಕೃಷ್ಣನಲ್ಲಿ ತುಂಬಿದ್ದು ಜಲವಲ್ಲ ಬಲ. ಸಾಗರದಲ್ಲಿ ಬೇಕಾದಷ್ಟು ರತ್ನಗಳಿದ್ದರೆ ಕೃಷ್ಣನಲ್ಲಿ ಬೇಕಾದಷ್ಟು ಗುಣಗಳಿವೆ. ಇಂತಹ ಕೃಷ್ಣನಲ್ಲಿ ಯೋಗಿಗಳು, ಧ್ಯಾನಿಗಳು, ಗೋವುಗಳು, ಗೋಪಾಲಗರೂ, ಗೋಪಿಕಾ ಸ್ತ್ರೀಯರು ಸೇರಿದಂತೆ ಎಲ್ಲರೂ ಕೂಡಾ ಕೃಷ್ಣನತ್ತ ಧಾವಿಸಿ ಬರುತ್ತಾರೆ. ಎಲ್ಲರನ್ನೂ ಸೆಳೆಯುವ ಆಕರ್ಷಣೆಯ ಶಕ್ತಿ ಶ್ರೀಕೃಷ್ಣನಿಗಿದೆ. ಬರೇ ಭಾರತೀಯರು ಮಾತ್ರವಲ್ಲ ವಿದೇಶಿಯರೂ ಶ್ರೀಕೃಷ್ಣನ ನಾಮಸ್ಮರಣೆಗೈಯುವುವಾಗ ಕುಣಿಯುತ್ತಾ ಆತನಲ್ಲಿ ಆಕರ್ಷಿತರಾಗುತ್ತಾರೆ. ಶ್ರೀ ಕೃಷ್ಣನ ಆಕರ್ಷಣಾ ಶಕ್ತಿ ಅತ್ಯದ್ಭುತವಾದುದು. ಜಡವಾದ ಈ ಭೂಮಿಯ ಆಕರ್ಷಣಾಶಕ್ತಿ ಮೇಲಿದ್ದದ್ದನ್ನು ಕೆಳಕ್ಕೆ ತಳ್ಳುವಂತಿದ್ದರೆ, ಶ್ರೀಕೃಷ್ಣನ ಶಕ್ತಿ ಕೆಳಗಿದ್ದದ್ದನ್ನು ಮೇಲಕ್ಕೆ ಎತ್ತುವ ಆಕರ್ಷಣಾ ಶಕ್ತಿಯಾಗಿದೆ. ಎಲ್ಲರ ಉದ್ಧಾರಕ ಕೃಷ್ಣನ ಶಕ್ತಿಯನ್ನು ಎಷ್ಟು ಕೊಂಡಾಡಿದರೂ ಸಾಕಾಗದು. ಕೃಷ್ಣ ರಜತ ಪೀಠವಾಸಿಯಾಗಿದ್ದು ಆತನಿಗೆ ರಜತ ತುಲಾಭಾರ ಸಂದಂತಾಯಿತು. ಅಂತೆಯೇ ಗೋಪಾಲಕೃಷ್ಣ ಪಬ್ಲಿಕ್‌ ಟ್ರಸ್ಟ್‌ನವರು ರೂಪಿಸಲು ಉದ್ದೇಶಿರುವ ಶ್ರೀಕೃಷ್ಣನ ಮಂದಿರವೂ ಶಿಲಾಮಯವಾಗಿ ಶಾಶ್ವತಮಯವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರು.

ಶ್ರೀ ಅಂಬಿಕಾ ಮಹಾಗಣಪತಿ ದೇವಸ್ಥಾನ ವಿದ್ಯಾವಿಹಾರ್‌ ಇದರ ಪ್ರದಾನ ಅರ್ಚಕ ವಿದ್ವಾನ್‌ ಪೆರ್ಣಂಕಿಲ ಹರಿದಾಸ್‌ ಭಟ್‌ ಸಂಯೋಜನೆಯಲ್ಲಿ ನಡೆಸಲ್ಪಟ್ಟ ಕಾರ್ಯಕ್ರಮದಲ್ಲಿ ಬಿಎಸ್‌ಕೆಬಿಎ ಮತ್ತು ಜಿಪಿಟಿ ಸಂಸ್ಥೆಗಳ ಅಧ್ಯಕ್ಷ ಡಾ| ಸುರೇಶ್‌ ಎಸ್‌. ರಾವ್‌ ಕಟೀಲು ಮತ್ತು ವಿಜಯಲಕ್ಷ್ಮೀ ಎಸ್‌. ರಾವ್‌ ದಂಪತಿ ಹಾಗೂ ಉಭಯ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು, ಭಕ್ತರನ್ನೊಳಗೊಂಡು ವಿಶ್ವೇಶತೀರ್ಥರ ಪ್ರಥಮ ರಜತ ತುಲಾಭಾರವನ್ನು ನೆರವೇರಿಸಿದರು.

ಉಡುಪಿ ಶ್ರೀಕೃಷ್ಣನ ಆರಾಧಕ, ನಡೆದಾಡುವ, ಮಾತನಾಡುವ ಕೃಷ್ಣನೆಂದೇ ಪ್ರಸಿದ್ಧಿ ಪಡೆದ ಉಡುಪಿ ಅಷ್ಠಮಠಗಳಲ್ಲಿನ ಶ್ರೀ ಪೇಜಾವರ ಮಠಾಧೀಶ ವಿಶ್ವೇಶ ಶ್ರೀಗಳು ಪಟ್ಟದ ದೇವರು ಶ್ರೀರಾಮ ವಿಠಲ ದೇವರಿಗೆ ಪೂಜೆ ನೆರವೇರಿಸಿದರು. ಡಾ| ಸುರೇಶ್‌ ರಾವ್‌ ಸ್ವಾಗತಿಸಿ ಪ್ರಸ್ತಾವನೆಗೈದು ಗೋಕುಲವು ಮುಂಬಯಿಯ ಉಡುಪಿಯಾಗಿದೆ. ಒಂದು ಗಂಟೆಯೇ ಒಂದೆಡೆ ಇರದ ಶ್ರೀಗಳ ವಾರದ ಮುಂಬಯಿ ಮೊಕ್ಕಾಂ ಅಭಿನಂದನೀಯ ಎಂದು ನುಡಿದು, ಸಯಾನ್‌ನಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕೃಷ್ಣ ಮಂದಿರದ ರೂಪುರೇಷೆ, ಕಾಮಗಾರಿ ಯೋಜನೆಯನ್ನು ಸ್ಲೆ$çಡ್‌ಶೋ ಮುಖಾಂತರ ವಿವರಿಸಿದರು.

ಈ ಸಂದರ್ಭದಲ್ಲಿ ಬಿಎಸ್‌ಕೆಬಿಎ ಸಂಸ್ಥೆಯ ಉಪಾಧ್ಯಕ್ಷರುಗಳಾದ ವಾಮನ ಹೊಳ್ಳ ಮತ್ತು ಶೈಲಿನಿ ರಾವ್‌, ಗೌರವ ಪ್ರಧಾನ ಕಾರ್ಯದರ್ಶಿ ಎ. ಪಿ. ಕೆ ಪೋತಿ, ಗೌರವ ಕೋಶಾಧಿಕಾರಿ ಸಿಎ ಹರಿದಾಸ್‌ ಭಟ್‌, ಜೊತೆ ಕಾರ್ಯದರ್ಶಿಗಳಾದ ಪಿ.ಸಿ.ಎನ್‌ ರಾವ್‌, ಚಿತ್ರಾ ಮೇಲ್ಮನೆ, ಜೊತೆ ಕೋಶಾಧಿಕಾರಿ ಕುಸುಮಾ ಶ್ರೀನಿವಾಸ್‌, ಮಹಿಳಾ ವಿಭಾಗಧ್ಯಕ್ಷೆ ಐ. ಕೆ. ಪ್ರೇಮಾ ಎಸ್‌. ರಾವ್‌, ಜಿಪಿಟಿ ವಿಶ್ವಸ್ಥ ಮಂಡಳಿ ಗೌ| ಪ್ರ| ಕಾರ್ಯದರ್ಶಿ ಎ. ಎಸ್‌. ರಾವ್‌, ವಿಶ್ವಸ್ಥ ಸದಸ್ಯರುಗಳಾದ ಬಿ. ರಮಾನಂದ ರಾವ್‌ ಬಡನಿಡಿಯೂರು, ಕೃಷ್ಣ ಆಚಾರ್ಯ ಮತ್ತು ಎ. ಎನ್‌. ಉಡುಪ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ವಿಷ್ಣುಮೂರ್ತಿ ಆಚಾರ್ಯ ಉಡುಪಿ, ವಿಕ್ರಾಂತ್‌ ಉರ್ವಾಳ್‌, ಡಾ| ಸುಧೀರ್‌ ಆರ್‌.ಎಲ್‌ ಶೆಟ್ಟಿ, ಡಾ| ಎಂ. ಎಸ್‌. ಶೆಟ್ಟಿ, ಪೇಜಾವರ ಮಠದ ಮುಂಬಯಿ ಶಾಖೆಯ ಆಡಳಿತಾಧಿಕಾರಿ ವಿದ್ವಾನ್‌ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ್‌ ಆಚಾರ್ಯ ರಾಮಕುಂಜ, ಶ್ರೀಹರಿ ಭಟ್‌ ಪುತ್ತಿಗೆ, ನಿರಂಜನ್‌ ಗೋಗೆr ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

ಆರಂಭದಲ್ಲಿ ವಿಶ್ವಪ್ರಸಿದ್ಧ ಡ್ರಮ್‌ವಾದಕ ಪದ್ಮಶ್ರೀ ಆನಂದನ್‌ ಶಿವಮಣಿ ಅವರಿಂದ ಸಂಗೀತವಾದನ ಕಾರ್ಯಕ್ರಮ ನಡೆಯಿತು. ಮಧ್ಯಾಂತರದಲ್ಲಿ ತೊಟ್ಟಿಲು ಪೂಜಾ ಸೇವೆ ನಡೆಯಿತು. ಪುರೋಹಿತರು ವೇದಘೋಷಗೈದರು. ವಿದ್ವಾನ್‌ ಪೆರ್ಣಂಕಿಲ ಹರಿದಾಸ್‌ ಭಟ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶ್ರೀ ಕೃಷ್ಣ ಮಂದಿರ ನಿರ್ಮಾಣ ದೇಣಿಗೆಯ ಕೈಪಿಡಿಯನ್ನು ಶ್ರೀಗಳು ಬಿಡುಗಡೆಗೊಳಿಸಿ ಯೋಜನೆ ಶೀಘ್ರವೇ ಪೂರ್ಣಗೊಳ್ಳಲಿ ಎಂದು ಶುಭಹಾರೈಸಿದರು.

ಜೂ. 26 ರಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನ ಜರಿಮರಿ, ಜೂ. 27 ರಂದು ಶ್ರೀ ಸುಬ್ರಹ್ಮಣ್ಯ ಮಠ, ಛೆಡ್ಡಾ ನಗರ್‌ ಚೆಂಬೂರು, ಜೂ. 28 ರಂದು “ಆಶ್ರಯ’ ನೆರೂಲ್‌ ನವಿಮುಂಬಯಿ, ಜೂ. 29 ಮತ್ತು ಜೂ. 30 ರಂದು ಶ್ರೀ ಪೇಜಾವರ ಮಠ ಸಾಂತಾಕ್ರೂಜ್‌ ಪೂರ್ವ ಇಲ್ಲಿ ನಡೆಯಲಿದೆ. ಜೂ. 30 ರಂದು ಬೆಳಗ್ಗೆ 10 ರಿಂದ ಗೋಕುಲ ನಿವೇಶನ ಸಾಯನ್‌ ಇಲ್ಲಿ ಪೇಜಾವರ ಶ್ರೀಗಳಿಂದ ಶ್ರೀ ಕೃಷ್ಣ ಮಂದಿರದ ಶಿಲಾನ್ಯಾಸ ಹಾಗೂ ಶ್ರೀಪಾದಂಗಳವ‌ರಿಗೆ ಪಟ್ಟದ ದೇವರ ಸಹಿತ ತುಲಾಭಾರ ಸೇವೆಯೊಂದಿಗೆ ಸಂಜೆ ಸಾಂತಾಕ್ರೂಜ್‌ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ತುಲಾಭಾರ ಸಪ್ತಾಹ ಸಮಾರೋಪ ನಡೆಯಲಿದೆ.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.