ಉದ್ಯಮಿ ಸುರೇಶ್‌ ಕಾಂಚನ್‌ರಿಂದ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ


Team Udayavani, May 31, 2019, 5:00 PM IST

3005MUM02

ಮುಂಬಯಿ: ನಗರದ ಉದ್ಯಮಿ, ಕ್ಲಾಸಿಕ್‌ ಗ್ರೂಪ್ಸ್‌ ಆಫ್‌ ಹೊಟೇಲ್‌ನ ಮಾಲಕ, ಮೊಗವೀರ ಬ್ಯಾಂಕಿನ ನಿರ್ದೇಶಕ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಇದರ ಮಾಜಿ ಅಧ್ಯಕ್ಷ ಸುರೇಶ್‌ ಆರ್‌. ಕಾಂಚನ್‌ ಅವರ ವತಿಯಿಂದ ಹುಟ್ಟೂರು ಉಪ್ಪಿನಕುದ್ರುವಿನ ತಾನು ಕಲಿತ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮವು ಮೇ 26ರಂದು ಅಪರಾಹ್ನ ನಡೆಯಿತು.

ಪ್ರತಿ ವರ್ಷದಂತೆ ಯುವಕ ಮಂಡಲ ಉಪ್ಪಿನಕುದ್ರು ಇದರ ಸಹಕಾರದಲ್ಲಿ ನಡೆದ‌ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸುರೇಶ್‌ ಕಾಂಚನ್‌ ಅವರು, ಲಕ್ಷಾಂತರ ರೂ. ಗಳ ವೆಚ್ಚದಲ್ಲಿ ತನ್ನೂರಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಗ್ರಾಮದ ಅಭಿವೃದ್ದಿ ಯೋಜನೆಗಳಿಗೆ ನೆರವು ನೀಡುತ್ತಾ ಬಂದಿದ್ದೇನೆ. ಮುಂಬಯಿ ನಗರದಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತೇನೆ. ಆದರೆ ಉಪ್ಪಿನಕುದ್ರುವಿನ ಶೈಕ್ಷಣಿಕ ನೆರವು ನನಗೆ ತುಂಬಾ ತೃಪ್ತಿ ನೀಡಿದ ಕಾರ್ಯಕ್ರಮವಾಗಿದೆ. ಈ ಗ್ರಾಮದಲ್ಲಿ ಹುಟ್ಟಿ ಬೆಳೆದು ತುಂಬ ಕಷ್ಟಗಳನ್ನು ಅನುಭವಿಸಿ ಆ ದಿನಗಳನ್ನು ನೆನಪಿಸಿಕೊಂಡಾಗ ದುಃಖ ವಾಗುತ್ತದೆ. ಅದಕ್ಕಾಗಿ ಗ್ರಾಮಸ್ಥರಿಗೆ ಅಂತಹ ಕಷ್ಟಗಳು ಬಾರದಿರಲಿ ಎಂಬ ಕಾರಣದಿಂದ ಸಣ್ಣಮಟ್ಟಿನಲ್ಲಿ ಸಹಕಾರ ನೀಡುತ್ತಿದ್ದೇನೆ. 13 ವರ್ಷಗಳ ನನ್ನ ವಿದ್ಯಾರ್ಥಿ ವೇತನ ಕಾರ್ಯಕ್ರಮದಿಂದಾಗಿ ಬಹಳಷ್ಟು ದಾನಿಗಳು ಬೆಳೆದು ಬಂದಿದ್ದಾರೆ. ಈ ಗ್ರಾಮದ ಮಕ್ಕಳ ಅಭಿವೃದ್ಧಿಗೆ ಎಲ್ಲರೂ ಸಹಾಯ ಹಸ್ತ ನೀಡಬೇಕು. ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿ
ಗಳು ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು.ತಮ್ಮ ಅನುಭವಗಳನ್ನು ಹಂಚಿಕೊಳ್ಳಬೇಕು. ಅವರು ಕೂಡ ತಮ್ಮ ಆದಾಯದ ಪಾಲನ್ನು ಮಕ್ಕಳಿಗೆ ಇಲ್ಲಿ ನೀಡಬೇಕು. ನಮ್ಮ ಮನಸ್ಸು ಶುದ್ಧವಾಗಿದ್ದಾಗ ಮಾತ್ರ ಮಾಡುವ ಕೆಲಸಗಳೂ ಶುದ್ಧವಾಗಿರುತ್ತದೆ. ನಾನು ಗ್ರಾಮದ ಅಭಿವೃದ್ಧಿಗೆ ನೀಡುವ ಸಹಾಯಹಸ್ತದಲ್ಲಿ ಯಾವುದೇ ರೀತಿಯ ರಾಜಕೀಯವಿಲ್ಲ ಎಂದು ನುಡಿದು ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಗೋಪಾಲ್‌ ಪೂಜಾರಿ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯಾರು ಶೈಕ್ಷಣಿಕವಾಗಿ ಸಮಾಜವನ್ನು ರೂಪಿಸುತ್ತಾರೋ, ಯಾರು ಸಮಾಜದ ಹಿಂದುಳಿದವರನ್ನು ಮೇಲೆತ್ತಲು ಪ್ರಯತ್ನಿಸುತ್ತಾರೋ ಅದಕ್ಕಿಂತ ದಾನ ಬೇರೊಂದಿಲ್ಲ. ಶೈಕ್ಷಣಿಕವಾಗಿ ಸುರೇಶ್‌ ಕಾಂಚನ್‌ ಅವರ ಕೊಡುಗೆ ಬಹಳಷ್ಟಿದೆ. ವಿದ್ಯಾವಂತರಾಗಿ ಬೆಳೆದ ಮಕ್ಕಳಿಂದ ಊರು ಅಭಿವೃದ್ಧಿಯಾಗುತ್ತದೆ. ಊರಿನ ಅಭಿವೃದ್ಧಿಗೆ ಸುರೇಶ್‌ ಕಾಂಚನ್‌ ಅವರು ಪಣತೊಟ್ಟಿದ್ದಾರೆ. ಹಣ ಎಲ್ಲರಲ್ಲೂ ಇದೆ, ಆದರೆ ಅದನ್ನು ಸಮಾಜಕ್ಕೆ ನೀಡಿ ಅರ್ಪಣಾ ಭಾವದಿಂದ ಸೇವೆ ಮಾಡುವವರು ಕಡಿಮೆ. ಸಮಾಜಕ್ಕೆ ಯಾರು ಹಣ ನೀಡುತ್ತಾರೋ ಅವರಲ್ಲಿ ಲಕ್ಷ್ಮೀ ಶಾಶ್ವತವಾಗಿ ಉಳಿಯತ್ತಾಳೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಬಸೂÅರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ. ರಾಧಾಕೃಷ್ಣ ಶೆಟ್ಟಿ ಅವರು ಮಾತನಾಡಿ ಶುಭ ಹಾರೈಸಿದರು. ಯುವಕ ಮಂಡಲ ಉಪ್ಪಿನಕುದ್ರು ಇದರ ಗೌರವಾಧ್ಯಕ್ಷ ಸದಾನಂದ ಶೇರುಗಾರ್‌, ಬೆಂಗಳೂರು ಉದ್ಯಮಿ ಶ್ರೀಧರ ಎಸ್‌. ಕುಂದರ್‌ ಅವರು ಮಾತನಾಡಿ ಶುಭ ಹಾರೈಸಿದರು.
ಉಪ್ಪಿನಕುದ್ರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧರ್ಮದರ್ಶಿ ರಮೇಶ್‌ ಕಾರಂತ್‌, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧರ್ಮದರ್ಶಿ ರಾಜೇಶ್‌ ಕಾರಂತ್‌, ತಲ್ಲೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಆನಂದ ಬಿಲ್ಲವ, ಉಪ್ಪಿನಕುದ್ರು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಾಲತಿ, ಉಪ್ಪಿನಕುದ್ರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಚ್‌. ಗೋಪಾಲಕೃಷ್ಣ, ಯಶೋಧಾ ಎಸ್‌. ಕಾಂಚನ್‌, ಮುಂಬಯಿ ಉದ್ಯಮಿ ಹೇಮಂತ್‌ ಶೆಟ್ಟಿ, ಲತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಯಿತು. ಗ್ರಾಮದ ಅಭಿವೃದ್ಧಿಗಾಗಿ ಸಹಕಾರ ನೀಡಿದ ಮಾಜಿ ಶಾಸಕ ಗೋಪಾಲ್‌ ಪೂಜಾರಿ ಇವರನ್ನು ಸುರೇಶ್‌ ಕಾಂಚನ್‌ ದಂಪತಿ ವತಿಯಿಂದ ಚಿನ್ನದ ಉಂಗುರವನ್ನಿತ್ತು ಸಮ್ಮಾನಿಸಲಾಯಿತು. ಯುವಕ ಮಂಡಲದ ವತಿಯಿಂದ ಸುರೇಶ್‌ ಕಾಂಚನ್‌ ಅವರ ಪುತ್ರಿ ನಿವೇದಿತಾ ಧೀರಜ್‌ ದಂಪತಿಯನ್ನು ಗೌರವಿಸಲಾಯಿತು. ಮಧುಸೂದನ್‌, ಅರುಣ್‌, ಸುನಿಲ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. ಪ್ರಾರಂಭದ ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ, ದುರ್ಗಾ ಕಲಾ ತಂಡ ಹಾರಾಡಿ ಇವರಿಂದ ನಾಟಕ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.