ಕೊಯ್ನಾನಗರ ಎಸ್ಡಿಆರ್ಎಫ್ ಯೋಜನೆ ಪ್ರಸ್ತಾವ ಸಲ್ಲಿಸಿ: ದೇಸಾಯಿ
Team Udayavani, Jul 8, 2021, 12:58 PM IST
ಮುಂಬಯಿ: ಕೊಯ್ನಾನಗರದಲ್ಲಿ ರಾಜ್ಯ ವಿಪತ್ತು ನಿರ್ವಹಣ ದಳ (ಎಸ್ಡಿಆರ್ಎಫ್) ಮತ್ತು ಪೊಲೀಸ್ ತರಬೇತಿ ಉಪಕೇಂದ್ರವನ್ನು ನಿರ್ಮಿಸುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಮುಂದಿನ ಒಂದು ತಿಂಗಳೊಳಗೆ ಸಿದ್ಧಪಡಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸಲ್ಲಿಸಬೇಕೆಂದು ಗೃಹ ವ್ಯವಹಾರಗಳ ರಾಜ್ಯ ಸಚಿವ (ಗ್ರಾಮೀಣ) ಶಂಭುರಾಜ್ ದೇಸಾಯಿ ನಿರ್ದೇಶಿಸಿದ್ದಾರೆ.
ಕೊಯ್ನಾನಗರದಲ್ಲಿರುವ ರಾಜ್ಯ ವಿಪತ್ತು ನಿರ್ವಹಣ ದಳ ಮತ್ತು ಪೊಲೀಸ್ ತರಬೇತಿ ಉಪ ಕೇಂದ್ರದ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದ ಅವರು, ಸಿಎಂ ಠಾಕ್ರೆ ಈ ಹಿಂದೆ ಕೊಯ್ನಾ ಅಣೆಕಟ್ಟಿಗೆ ಭೇಟಿ ಸಮಯದಲ್ಲಿ ಬಹುಪಯೋಗಿ ಯೋಜನೆಗೆ ಅನುಮೋದನೆ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಆದ್ದರಿಂದ ಅಧಿಕಾರಿಗಳು ಯೋಜನೆಯ ನೀಲನಕ್ಷೆ ಸಿದ್ಧಪಡಿಸಬೇಕು. ಈ ಯೋಜನೆಯನ್ನು ಆದಷ್ಟು ಬೇಗ ಪೂರ್ಣ ಗೊಳಿಸಲು ಆಡಳಿತವು ತತ್ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಮಳೆಗಾಲದಲ್ಲಿ ಸಾಂಗ್ಲಿ, ಸತಾರಾ ಮತ್ತು ಕೊಲ್ಲಾಪುರ ಪ್ರದೇಶಗಳಲ್ಲಿ ಪ್ರವಾಹ ಉಂಟಾಗುತ್ತದೆ. ಆ ಸಮಯದಲ್ಲಿ ಪರಿಹಾರ ಕಾರ್ಯಗಳಿಗಾಗಿ ಎನ್ಡಿಆರ್ಎಫ್, ಪೊಲೀಸ್, ಎಸ್ಆರ್ಪಿಎಫ್ ತಂಡಗಳ ಅಗತ್ಯವಿರುತ್ತದೆ.
ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಕೊಯ್ನಾನಗರದಲ್ಲಿ ಎನ್ಡಿಆರ್ಎಫ್ ಮತ್ತು ಪೊಲೀಸ್ ತರಬೇತಿ ಉಪ ಕೇಂದ್ರವನ್ನು ಸ್ಥಾಪಿಸುವ ಆವಶ್ಯಕತೆಯಿದೆ. ಈ ಪ್ರದೇಶದಲ್ಲಿ ಎಲ್ಲ ಸೌಲಭ್ಯಗಳು ಲಭ್ಯವಿವೆ. ಈ ಎಸ್ಡಿಆರ್ಎಫ್ ಮತ್ತು ಪೊಲೀಸ್ ತರಬೇತಿ ಉಪಕೇಂದ್ರಕ್ಕಾಗಿ 80 ಎಕ್ರೆ ಭೂಮಿ ಲಭ್ಯವಿದೆ. ಕಂದಾಯ ಇಲಾಖೆಯ ಈ ಸ್ಥಳವನ್ನು ಗೃಹ ಇಲಾಖೆಗೆ ವರ್ಗಾಯಿಸಬೇಕಾಗಿದೆ. ಇದಕ್ಕಾಗಿ ಕಂದಾಯ ಇಲಾಖೆಯಿಂದ ಗೃಹ ಇಲಾಖೆಗೆ ಅಥವಾ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಜಿಲ್ಲಾಧಿಕಾರಿಯ ಮೂಲಕ ಜಮೀನನ್ನು ಹಸ್ತಾಂತರಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸತಾರ ಪೊಲೀಸ್ ವರಿಷ್ಠಾಧಿಕಾರಿಗೆ ದೇಸಾಯಿ ನಿರ್ದೇಶಿಸಿದರು.
ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆನಂದ್ ಲಿಮಾಯೆ, ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ, ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಂಜಯ್ ಸಕ್ಸೆನಾ, ಸಹ ಪೊಲೀಸ್ ಮಹಾನಿರ್ದೇಶಕ ಎಸ್. ಜಗನ್ನಾಥನ್, ಹಣಕಾಸು ಜಂಟಿ ಕಾರ್ಯದರ್ಶಿ ವಿವೇಕ್ ದಹಿಫಲೆ, ಸತಾರಾ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಬನ್ಸಾಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…