ಸಯಾನ್‌ ಗಣೇಶೋತ್ಸವದ ದ್ವಿತೀಯ ಪೂರ್ವಭಾವಿ ಸಭೆ


Team Udayavani, Jul 26, 2018, 12:20 PM IST

2507mum12.jpg

ಮುಂಬಯಿ: ನಗರದ ಶ್ರೀಮಂತ ಗಣಪತಿ  ಪ್ರಸಿದ್ಧಿಯ ಜಿಎಸ್‌ಬಿ ಸೇವಾ ಮಂಡಲ ಸಯಾನ್‌ ಇದರ 64 ನೇ ವಾರ್ಷಿಕ ಗಣೇಶೋತ್ಸವದ ಪೂರ್ವ ತಯಾರಿಗಾಗಿ ಕಾರ್ಯಕರ್ತರ ದ್ವಿತೀಯ ಪೂರ್ವಭಾವಿ ಸಭೆಯು ಜು. 21 ರಂದು ಸಂಜೆ ಮಂಡಲದ ಸಯಾನ್‌ನ ಶ್ರೀ ಗುರು ಗಣೇಶ್‌ ಪ್ರಸಾದ್‌ ಸಭಾಗೃಹದಲ್ಲಿ ಜರಗಿತು.

ಕಿಂಗ್‌ಸರ್ಕಲ್‌ ಸುಕೃತೀಂದ್ರ ನಗರದಲ್ಲಿ ಸೆ. 13 ರಿಂದ ಸೆ. 17 ರವರೆಗೆ ಐದು ದಿನಗಳ ಕಾಲ ಗಣೇಶೋತ್ಸವವು ಶ್ರೀ ಕಾಶಿ ಮಠಾಧೀಶ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಅನುಗ್ರಹ ಹಾಗೂ ಆಶೀರ್ವಾದಗಳೊಂದಿಗೆ ಜರಗಲಿದೆ. ಪೂರ್ವಭಾವಿ ಸಭೆಯ ಆರಂಭದಲ್ಲಿ ಗಣೇಶೋತ್ಸವದ ಪ್ರಧಾನ ಅರ್ಚಕ ವೇದಮೂರ್ತಿ ಬಂಟ್ವಾಳ ಕೃಷ್ಣ ಭಟ್‌ ಇವರಿಂದ ಪ್ರಾರ್ಥನೆ ನಡೆಯಿತು.

ಗಣೇಶೋತ್ಸವ ಆಯೋಜನ ಸಮಿತಿಯ ಸಂಚಾಲಕ ಡಾ| ಭುಜಂಗ ಪೈ ಅವರು ಸಭೆಯ ಅಧ್ಯಕ್ಷತೆ ವಹಿಸಿ ಸ್ವಾಗತಿಸಿ ಮಾತನಾಡಿ, ಕಳೆದ ವರ್ಷ ಇದೇ ಸಮಯದಲ್ಲಿ ಗಣೇಶೋತ್ಸವಕ್ಕೆ ಸಂಗ್ರಹಿಸಲಾದ ಮೊಬಲಗಿನ ವಿವರ ಹಾಗೂ ಪ್ರಸಕ್ತ ಸಭೆಯ ದಿನದವರೆಗೆ ಸಂಗ್ರಹಗೊಂಡ ಮೊತ್ತದ ವಿವರವನ್ನು ತಿಳಿಸಿದರು.

ಸೇವಾ ಮಂಡಳದ ಮಾಜಿ ಅಧ್ಯಕ್ಷ ಆರ್‌. ಜಿ. ಭಟ್‌ ಅವರು ಮಾತನಾಡಿ, ವರ್ಷದಿಂದ ವರ್ಷಕ್ಕೆ ನಮ್ಮ ಗಣೇಶೋತ್ಸವದ ಖರ್ಚು ಹೆಚ್ಚುತ್ತಾ ಬರುತ್ತಿದೆ. ಆದ್ದರಿಂದ ಸ್ವಯಂ ಸೇವಕರು, ಕಾರ್ಯಕರ್ತರು ಗಳಿಕೆಯನ್ನು ಅಧಿಕಗೊಳಿಸಲು ಪ್ರಯತ್ನಿಸಬೇಕು ಎಂದರು.

ವೇದಮೂರ್ತಿ ಕೃಷ್ಣ ಭಟ್‌ ಇವರು ಮಾತನಾಡಿ, ನಮ್ಮ ಗುರುವರ್ಯರಾದ ಶ್ರೀ ಕಾಶೀ ಮಠಾಧೀಶ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರೇರಣೆಯಿಂದ ನಮ್ಮ ಗಣೇಶೋತ್ಸವದಲ್ಲಿ ಅನ್ನದಾನವನ್ನು ಪ್ರಾರಂಭ ಮಾಡಲಾಯಿತು. ಭಕ್ತರು ಶ್ರದ್ಧಾಭಕ್ತಿಯಿಂದ ನಮ್ಮ ಗಣಪತಿಯನ್ನು ಸ್ತುತಿಸಿದಾಗ ಫಲ ಪ್ರಾಪ್ತಿಯಾಗುತ್ತದೆ ಎಂದು ನುಡಿದರು.

ಡಾ| ಭುಜಂಗ ಪೈ ಅವರು ಮಾತನಾಡಿ, ಗಣೇಶೋತ್ಸವದ ಪೂರ್ಣ ಕಾರ್ಯಗಳು ಸಾಂಗವಾಗಿ ನೆರವೇರಲು 45 ವಿವಿಧ ಉಪಸಮಿತಿಗಳ ಹೆಸರನ್ನು ವಾಚಿಸಿದರು. ಆಯಾಯ ಸಮಿತಿಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಭಕ್ತರು ತಮ್ಮ ಹೆಸರನ್ನು ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ಹೇಳಿದರು.

ಸ್ವಯಂ ಸೇವಕರಾದ ಶ್ರೀನಿವಾಸ ಪ್ರಭು, ಸಹ ಸಂಚಾಲಕ ಜಿ. ಡಿ. ರಾವ್‌ ಅವರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು. ಸಹ ಸಂಚಾಲಕ ನ್ಯಾಯವಾದಿ ಎಂ. ವಿ. ಕಿಣಿ ಅವರು ಮಾತನಾಡಿ, ಅತೀ ಕಡಿಮೆ ಸಮಯ ಉಳಿದಿರುವುದರಿಂದ ಪ್ಲಾಸ್ಟಿಕ್‌ ಚಿಲದ ಬದಲಿಗೆ ಬೇರೆ ವ್ಯವಸ್ಥೆ ಮಾಡುವುದಕ್ಕಿಂತ ಈ ವರ್ಷ ಪ್ಲಾಸ್ಟಿಕ್‌ ಚೀಲವನ್ನು ಉಪಯೋಗಿಸಲು ಸರಕಾರಕ್ಕೆ ಮನವಿ ಸಲ್ಲಿಸುವಂತೆ ವಿನಂತಿಸಿದರು. ಸೇವಾ ಮಂಡಳದ ಉಪಾಧ್ಯಕ್ಷ ಯಶವಂತ್‌ ಕಾಮತ್‌ ಅವರು ಮಾತನಾಡಿ, ಕಿಂಗ್‌ಸರ್ಕಲ್‌ ಸುಕೃತೀಂದ್ರ ನಗರದಲ್ಲಿ ಗಣೇಶೋತ್ಸವದ ಪೆಂಡಾಲಿನ ಕೆಲಸಗಳು 15 ದಿನಗಳ ಹಿಂದೆ ಪ್ರಾರಂಭಗೊಂಡಿದೆ. ಪೆಂಡಾಲಿನ ಪೂರ್ಣ ಕಾಮಗಾರಿಯು ಕ್ಲಪ್ತ ಸಮಯದಲ್ಲಿ ಪೂರ್ಣಗೊಳ್ಳಲಿದೆ. ಗಣಪತಿ ವಿಸರ್ಜನಾ ಟ್ರಾಲಿಯನ್ನು ಸುಧಾರಿಸುವುದಾಗಿ ಅವರು ತಿಳಿಸಿದರು.

ಸೇವಾ ಮಂಡಳದ ಕಾರ್ಯಕಾರಿ ಸಮಿತಿಯ ಸದಸ್ಯ ಪ್ರಶಾಂತ್‌ ಮಲ್ಯ ಅವರು ಮಾತನಾಡಿ, ಸ್ವಯಂಸೇವಕರು ತಮ್ಮ ವರ್ಷದ ಹೊಸ ಗುರುತು ಪತ್ರವನ್ನು ಸೇವಾ ಮಂಡಳದ ಕಾರ್ಯಾಲಯದಿಂದ ಪಡೆದುಕೊಳ್ಳಬೇಕು ಎಂದು ಸೂಚಿಸಿದರು. ಮಂಡಳದ ಜೊತೆ ಕೋಶಾಧಿಕಾರಿ ವಿಷ್ಣು ಕಾಮತ್‌ ಇವರು ಮಾತನಾಡಿ, ಸೇವಾ ಮಂಡಳದ ಮೊಬೈಲ್‌ ಆ್ಯಪ್‌ನ ಬಗ್ಗೆ ವಿವರಿಸಿ, ಇಂದಿನ ಡಿಜಿಟಲ್‌ ಯುಗದಲ್ಲಿ ನಾವು ಅದರ ಲಾಭವನ್ನು ಪಡೆದುಕೊಳ್ಳಬೇಕು ಎಂದರು.

ಸಭೆಯಲ್ಲಿ ಮಂಡಳದ ಕಾರ್ಯಕಾರಿ ಸಮಿತಿಯ ಸದಸ್ಯರು, ಸ್ವಯಂ ಸೇವಕರು, ಕಾರ್ಯಕರ್ತರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮಂಡಳದ ಕಾರ್ಯದರ್ಶಿ ಶಿವಾನಂದ ಭಟ್‌ ಅವರು ವಂದಿಸಿದರು. ಮುಂದಿನ ಪೂರ್ವಭಾವಿ ಸಭೆಯು ಆ. 4 ರಂದು ಸಂಜೆ 7.35 ಕ್ಕೆ ಜಿಎಸ್‌ಬಿ ಸೇವಾ ಮಂಡಲ, ಶ್ರೀ ಗುರುಗಣೇಶ ಪ್ರಸಾದ್‌ ಸಭಾಗೃಹ ಸಯಾನ್‌ ಪೂರ್ವದಲ್ಲಿ ನಡೆಯಲಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಲಾಯಿತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.