“ವರ್ತಮಾನದ ಮಹಿಳೆ-ತಲ್ಲಣ-ಪರಿಹಾರ’ ವಿಚಾರಗೋಷ್ಠಿ


Team Udayavani, Mar 2, 2018, 3:13 PM IST

2802mum06.jpg

ಮುಂಬಯಿ: ಸಮಾಜ ಮತ್ತು ಮನೆಯಲ್ಲಿ ಸಾಮರಸ್ಯದ ಕೌಟುಂಬಿಕ ಬದುಕು ರೂಪಿಸಲು ಹೆಣ್ಣಿನಿಂದ ಮಾತ್ರ ಸಾಧ್ಯ. ಹೆಣ್ಣಾದವಳು ಬದುಕಿನ ಅನ್ಯಾಯ, ಕಷ್ಟ-ನಷ್ಟಗಳನ್ನು ನುಂಗಿ ಸದಾ ಹಸನ್ಮುಖೀಯಾಗಿ ಸಮಾಜವನ್ನು ಎದುರಿಸುತ್ತಾಳೆ. ಆದರೆ ಪುರುಷರು ಹಾಗಲ್ಲ. ಹೆಣ್ಣಿನ ಭಾವನಾತ್ಮಕ ಜೀವನಕ್ಕೆ ಅಕ್ಷರದ ಅರಿವು ಬೇಕಾಗಿಲ್ಲ. ಬರೇ ವಿಶ್ವಾಸದ ಸಾಮರ್ಥ್ಯ ಅವಶ್ಯಕವಾಗಿದೆ. ಆದ್ದರಿಂದ ಗಂಡಿಗೆ ಹೆಣ್ಣಿನ ಮೇಲಿನ ವಿಶ್ವಾಸ ಬಲವಾದಾಗ ಬದುಕು ಸುಗಮವಾಗಬಲ್ಲದು. ಇದನ್ನು ಮಹಿಳೆ ಗಾಢವಾಗಿ ಅರ್ಥೈಯಿಸಿಕೊಂಡು ಮುನ್ನಡೆದಾಗ ಬದುಕು ಹಸನಾಗುವುದು. ಬದುಕು ಎಂದಿಗೂ ಧರ್ಮ ಆಗಿಸದೆ ಧರ್ಮವೇ ಬದುಕು ಆಗಿಸಬೇಕು.  ಅದಕ್ಕಾಗಿ  ಸ್ತ್ರೀಯರು ಅನ್ಯಾಯ ಆದಾಗ ಕಣ್ಣೀರು ಹಾಕದೆ ಅದನ್ನು ದಿಟ್ಟತನದಿಂದ ಪ್ರತಿಭಟಿಸಬೇಕು. ಹೋರಾಟ ಮಾಡಿ ಸತ್ಯಾಸತ್ಯತೆಗೆ ನ್ಯಾಯ ಗಿಟ್ಟಿಸಿಕೊಳ್ಳಬೇಕು. ಇದೇ ಸ್ತ್ರೀ ಸಬಲೀಕರಣ ಎಂದು ನಗರದ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ ತಿಳಿಸಿದರು.

ಫೆ. 25 ರಂದು ಸಂಜೆ ಸಾಂತಾಕ್ರೂಜ್‌ ಬಿಲ್ಲವ ಭವನದ ನಾರಾಯಣ ಗುರು ಸಭಾಗೃಹದಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ  ಮಹಿಳಾ ವಿಭಾಗವು ಮುಂಬಯಿಯ ತುಳು ಕನ್ನಡಿಗರ ಸಂಸ್ಥೆಗಳ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ, ಸದಸ್ಯೆಯರನ್ನೊಳಗೊಂಡು ಆಯೋಜಿಸಿದ್ದ ಸ್ತ್ರೀ ಸಬಲೀಕರಣ, ಸಂಸ್ಕೃತಿ, ಸವಾಲು ವಿಚಾರಿತ “ಒಲುಮೆ’ ವಿನೂತನ ಕಾರ್ಯಕ್ರಮದಲ್ಲಿ “ವರ್ತಮಾನದ ಮಹಿಳೆ-ತಲ್ಲಣ-ಪರಿಹಾರ’  ವಿಚಾರಗೋಷ್ಠಿಯ  ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಮಹಿಳೆಯರ ಕೂಡುವಿಕೆಯ ಇಂತಹ ಒಂದು ವೇದಿಕೆ ಮುಂಬಯಿಯಲ್ಲೇ ಪ್ರಥಮವಾಗಿದೆ. ಕಾರ್ಯಕ್ರಮ ಆಯೋಜಿಸಿದ ಬಿಲ್ಲವರ ಅಸೋಸಿಯೇಶನ್‌ನ ಮಹಿಳಾ ವಿಭಾಗ ಅಭಿನಂದನೀಯ. ನನ್ನ  62 ವರ್ಷಗಳ ಮುಂಬಯಿ ಜೀವನ ಸವಾಲುವಾಗಿಯೇ ಎದುರಿಸಿದ್ದೇನೆ. ನನ್ನ ಪತಿಯ ಸಹಯೋಗ ನನ್ನ ಸಬಲೀಕರಣಕ್ಕೆ ಪುಷ್ಠಿ ನೀಡಿದ್ದು ಸಮಸ್ಯೆಗಳನ್ನು ಮೆಟ್ಟಿನಿಲ್ಲುವಂತೆ ಮಾಡಿದ ಕಾರಣ ನಾನು ಇಷ್ಟೊಂದು ಮಟ್ಟಕ್ಕೆ ಬೆಳೆಯಲು ಪೂರಕವಾಗಿದೆ. ಅಂತೆಯೇ ಪುರುಷರು ಸ್ತ್ರೀಯರಲ್ಲಿ ಆತ್ಮವಿಶ್ವಾಸ ವೃದ್ಧಿಸಿಕೊಂಡಾಗ ಸಮಾನತೆಯ ಬದುಕು ರೂಪುಗೊಳ್ಳುವುದು. ಇದರಿಂದ ಸ್ತ್ರೀ ಸಬಲೀಕರಣ ಸಾಮರ್ಥ್ಯವುಳ್ಳದ್ದಾಗುವುದು ಎಂದರು.

ತೀಯಾ ಸಮಾಜ ಮುಂಬಯಿ ಸಂಸ್ಥೆಯ ದಿವಿಜಾ ಚಂದ್ರಶೇಖರ್‌ ಇವರು ವಿಚಾರ ಮಂಡಿಸಿ, ಸ್ತ್ರೀಯರ ಮೈಮಾಟ, ಬಟ್ಟೆಬರೆ, ಸೌಂದರ್ಯದಿಂದ ಜೀವನ ಬದಲಾಯಿಸಲಾಗದು. ಅದು ಮನಸ್ಥೈರ್ಯ  ಮತ್ತು ವಿಶ್ವಾಸದಿಂದ ಮಾತ್ರ ಎದುರಿಸಬಹುದು. ಕಾಲಕ್ಕೆ ತಕ್ಕಂತೆ ಬದಲಾದಾಗ ಮಾತ್ರ ಆಧುನಿಕತೆ  ಎದುರಿಸಲು ಸಾಧ್ಯ. ನಾವೆಲ್ಲರೂ ಸಂಪ್ರದಾಯಸ್ಥವುಳ್ಳವರು. ಆದ್ದರಿಂದ ಆಧುನಿಕತೆ ಜೊತೆಗೆ ಸಂಪ್ರದಾಯಗಳನ್ನು ರೂಢಿಸಿ ಮುನ್ನಡೆದಾಗ ನಮ್ಮ ಬದುಕು ನೆಮ್ಮದಿಯುತವಾಗುವುದು ಎಂದರು.

ಮೊಗವೀರ ಮಾಸಿಕದ ಮಾಜಿ ಸಂಪಾದಕಿ ಡಾ| ಜಿ. ಪಿ. ಕುಸುಮಾ ಇವರು ಮಾತನಾಡಿ, ತಲ್ಲಣ  ಎನ್ನುವುದು ಭಯವಾಗಿದೆ. ಇದು ಎಲ್ಲಾ ವರ್ಗವನ್ನೂ, ಕ್ಷೇತ್ರವನ್ನೂ ಆವರಿಸಿದ್ದು ಭಯ ಮುಕ್ತ ಬದುಕಿಗೆ ನಾವು ಪಣತೊಡಬೇಕು. ಪುರುಷ ಸಮಾನವಾಗಿ ಬದುಕು ರೂಪಿಸುವ ಪ್ರಯತ್ನ ಮಾಡಿದಾಗಲೇ ಸ್ತ್ರೀಶಕ್ತ ಸಮಾಜ ನಿರ್ಮಾಣ ಸಾಧ್ಯವಾಗುವುದು ಎಂದು ನುಡಿದರು.

ಕವಯತ್ರಿ ಅನಿತಾ ಪಿ. ಪೂಜಾರಿ ತಾಕೋಡೆ ಪಾಲ್ಗೊಂಡು ತಮ್ಮ ವಿಚಾರಗಳನ್ನು ಮಂಡಿಸಿ, ಬಣ್ಣದಲೋಕದ ಬದುಕಿನಲ್ಲಿ ಹೊಂದಾಣಿಕೆಯ ಜೀವನಕ್ಕೆ ಸ್ಪಂದಿಸಬೇಕು. ಅದಕ್ಕಾಗಿ ಜೀವನದಲ್ಲಿ ಮೊದಲಾಗಿ ಸಮಾಜಮುಖೀ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಪುರುಷ ಪ್ರಧಾನ ಸಮಾಜ ಎಂದೆಣಿಸುವುದಕ್ಕಿಂತ ಸ್ತ್ರೀ ಸಮಾನ ಸಮಾಜ ಕಟ್ಟುವ ಕನಸನ್ನು ನನಸಾಗಿಸುವ ಪ್ರಯತ್ನ ಮಾಡುವ ಅಗತ್ಯ ಪ್ರತೀಯೊಬ್ಬ ಮಹಿಳೆಯದ್ದಾಗಬೇಕು ಎಂದು ಅಭಿಪ್ರಾಯಪಟ್ಟರು.

ಬಳಿಕ ನಡೆಸಲ್ಪಟ್ಟ “ಒಲುಮೆ’ ವಿನೂತನ ಕಾರ್ಯಕ್ರಮಕ್ಕೆ ಅಸೋಸಿಯೇಶನ್‌ನ ಅಧ್ಯಕ್ಷ ನಿತ್ಯಾನಂದ್‌ ಡಿ. ಕೋಟ್ಯಾನ್‌ ಹಿಂಗಾರ ಅರಳಿಸಿ ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಅತಿಥಿ ಅಭ್ಯಾಗತರುಗಳಾಗಿ ಬಿಎಸ್‌ಕೆಬಿ ಅಸೋಸಿಯೇಶನ್‌ನ ಮಹಿಳಾ ಕಾರ್ಯಾಧ್ಯಕ್ಷೆ ಪ್ರೇಮಾ ಎಸ್‌. ರಾವ್‌, ಗಾಣಿಗ ಸಮಾಜ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ ತಾರಾ ಎನ್‌. ಭಟ್ಕಳ್‌, ಪದ್ಮಶಾಲಿ ಸಮಾಜ ಸೇವಾ ಸಂಘ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ  ಸರೋಜಿನಿ ಶೆಟ್ಟಿಗಾರ್‌, ಮೊಗವೀರ ವ್ಯವಸ್ಥಾಪಕ ಮಂಡಳಿ ಮಹಿಳಾ ಕಾರ್ಯಾಧ್ಯಕ್ಷೆ ರಾಜೀವಿ ಕಾಂಚನ್‌, ದೇವಾಡಿಗ ಸಂಘ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ ಜಯಂತಿ ಆರ್‌. ಮೊಲಿ, ಭಂಡಾರಿ ಸೇವಾ ಸಮಿತಿ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ ಶೋಭಾ ಸುರೇಶ್‌ ಭಂಡಾರಿ ಕಡಂದಲೆ, ಕುಲಾಲ ಸಂಘ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌, ತೀಯಾ ಸಮಾಜ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ ಲತಾ ಡಿ. ಉಳ್ಳಾಲ್‌, ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬಯಿ  ಮಹಿಳಾ ಕಾರ್ಯಾಧ್ಯಕ್ಷೆ ಶುಭಾ ಎಸ್‌. ಆಚಾರ್ಯ, ರಜಕ ಸಂಘ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ ಸರೋಜಿನಿ ಡಿ. ಕುಂದರ್‌, ಬೊಂಬೇ ಬಂಟ್ಸ್‌ ಅಸೋಸಿಯೇಶನ್‌ನ ಮಹಿಳಾ ಕಾರ್ಯಾಧ್ಯಕ್ಷೆ  ಶಾರದಾ ಶ್ಯಾಮ ಶೆಟ್ಟಿ, ಸಾಫಲ್ಯ ಸೇವಾ ಸಂಘ ಮುಂಬಯಿ ಮಹಿಳಾ ಕಾರ್ಯಾಧ್ಯಕ್ಷೆ  ಶೋಭಾ ವಿ. ಬಂಗೇರ  ಉಪಸ್ಥಿತರಿದ್ದರು.

ಅಸೋಸಿಯೇಶನ್‌ನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಸೋಸಿಯೇಶನ್‌ನ ಗೌರವ  ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ. ಅಂಚನ್‌ ಪ್ರಸ್ತಾವನೆಗೈದರು.  ಮಹಿಳಾ ವಿಭಾಗಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌ ಸ್ವಾಗತಿಸಿ ಅತಿಥಿಗಳನ್ನು ಸ್ಮರಣಿಕೆಯನ್ನಿತ್ತು  ಸತ್ಕರಿಸಿ ಗೌರವಿಸಿದರು. ಅಸೋಸಿಯೇಶನ್‌ನ ಗೌರವ  ಜೊತೆ ಕಾರ್ಯದರ್ಶಿ ಆಶಾಲತಾ ಎಸ್‌. ಕೋಟ್ಯಾನ್‌ ಕಾರ್ಯಕ್ರಮ ನಿರೂಪಿಸಿದರು. ಅನಿತಾ ಪಿ. ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಸಾಂಸ್ಕೃತಿಕ  ಕಾರ್ಯಕ್ರಮವಾಗಿ ವಿವಿಧ ಸಂಸ್ಥೆಗಳ ಮಹಿಳಾ ಸದಸ್ಯೆಯರ ತಂಡಗಳಿಂದ ವೈವಿಧ್ಯಮಯ ನೃತ್ಯಾವಳಿಗಳು, ಸಂಗೀತ ಯೋಗ, ಜಾನಪದ ಗಾಯನ ಮತ್ತಿತರ ಮನೋರಂಜನ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು. ಮಹಿಳಾ ವಿಭಾಗದ ಗೌರವ  ಪ್ರಧಾನ  ಕಾರ್ಯದರ್ಶಿ ಸುಮಿತ್ರಾ ಎಸ್‌. ಬಂಗೇರ ಸಾಂಸ್ಕೃತಿಕ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.