ಹಿರಿಯ ಅಧಿಕಾರಿ ಕನ್ನಡಿಗ ಕುಲಕರ್ಣಿ ಸೇವಾ ನಿವೃತ್ತಿ
Team Udayavani, Oct 11, 2020, 8:17 PM IST
ಮುಂಬಯಿ, ಅ. 10: ಸೆಂಟ್ರಲ್ ರೈಲ್ವೆಯ ಮುಂಬಯಿ ವಿಭಾಗದ ವಾಡಿಬಂದರ್ ಪರಿಸರದ ಹಿರಿಯ ಅಧಿಕಾರಿ, ಕನ್ನಡಿಗ ಭೀಮರಾವ್ ಕುಲಕರ್ಣಿ ಅವರು ತಮ್ಮ 35 ವರ್ಷಗಳ ಸುದೀರ್ಘ ಸೇವೆಯ ಅನಂತರ ಸೆ. 30ರಂದು ಸೇವಾ ನಿವೃತ್ತಿ ಹೊಂದಿದರು.
ಸೆ. 29ರಂದು ವಾಡಿಬಂದರ್ನ ನ್ಯೂ ಕಾಂಪ್ಲೆಕ್ಸ್ ಸಭಾಗೃಹದಲ್ಲಿ ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳ ಪಾಲನೆಯೊಂದಿಗೆ ನಡೆದ ಸರಳ ಸಮಾರಂಭದಲ್ಲಿ ಕುಲಕರ್ಣಿ ಅವರನ್ನು ಬೀಳ್ಕೊಡಲಾಯಿತು. ಸಮಾರಂಭದಲ್ಲಿ ಮಧ್ಯ ರೈಲ್ವೇ ಮುಂಬಯಿ ವಿಭಾಗದ ಹಿರಿಯ ಅ ಧಿಕಾರಿಗಳು ಹಾಗೂ ಸಿಬಂದಿ ಉಪಸ್ಥಿತರಿದ್ದು, ಕುಲಕರ್ಣಿ ಅವರ ಕಾರ್ಯದಕ್ಷತೆ, ಹಾಗೂ ರೈಲ್ವೆಗಾಗಿ ನೀಡಿದ ಸೇವೆಯನ್ನು ಶ್ಲಾಘಿಸಿ ಅವರನ್ನು ಸಮ್ಮಾನಿಸಿ ಶುಭ ಹಾರೈಸಿದರು.
ಸಮ್ಮಾನ ಸ್ವೀಕರಿಸಿ ಮಾತನಾಡಿ ಕುಲಕರ್ಣಿ ಅವರು, ಕಳೆದ ಹಲವಾರು ವರ್ಷಗಳಿಂದ ರೈಲ್ವೇಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದು, ಆತ್ಮ ತೃಪ್ತಿಯಿದೆ. ಭವಿಷ್ಯದಲ್ಲೂ ರೈಲ್ವೇ ವಿಭಾಗಕ್ಕೆ ನನ್ನ ಸಹಕಾರ, ಪ್ರೋತ್ಸಾಹ ಇರಲಿದೆ. ಇಂದಿನ ಹೃದಯಸ್ಪರ್ಶಿ ಸಮಾರಂಭವನ್ನು ಕಂಡು ನನ್ನ ಹೃದಯ ತುಂಬಿ ಬಂದಿದೆ. ನಾನು ರೈಲ್ವೇ ಇಲಾಖೆಯಲ್ಲಿ ಏನಾದರೂ ಉತ್ತಮ ಕಾರ್ಯ ಮಾಡಿದ್ದರೆ ಅದು ಹಿರಿಯ ಅಧಿ ಕಾರಿಗಳ ಪ್ರೇರಣೆ ಹಾಗೂ ಸಹೋದ್ಯೋಗಿಗಳ ಸಹಕಾರದಿಂದಾಗಿ ಆಗಿದೆ. ನನ್ನ ಕುಟುಂಬದ ಸದಸ್ಯರ ಪ್ರೋತ್ಸಾಹವನ್ನು ಮರೆಯಲು ಸಾಧ್ಯವಿಲ್ಲ. ನನ್ನ ಸೇವೆಯನ್ನು ಗುರುತಿಸಿ ಸಮ್ಮಾನಿಸಿದ ನಿಮಗೆಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದು ಎಲ್ಲರಿಗೂ ಶುಭ ಹಾರೈಸಿದರು.
ಭೀಮರಾವ್ ಕುಲಕರ್ಣಿ ಅವರ ಸ್ನೇಹಿತರು, ಪರಿವಾರದವರು ಉಪಸ್ಥಿತರಿದ್ದರು. ಭೀಮರಾವ್ ಕುಲಕರ್ಣಿ ಮೂಲತಃ ಕರ್ನಾಟಕದ ಬಾಗಲ್ಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಗಿರಗಾಂವ್ ಗ್ರಾಮದವರಾಗಿದ್ದು, ಕಳೆದ ಹಲವಾರು ವರ್ಷಗಳಿಂದ ಡೊಂಬಿವಲಿಯಲ್ಲಿ ನೆಲೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ