ಶಾಹಡ್ ಶ್ರೀ ಮೂಕಾಂಬಿಕಾ ಮಂದಿರ: ಪ್ರತಿಷ್ಠಾ ವರ್ಧಂತಿ
Team Udayavani, Jun 26, 2018, 4:31 PM IST
ಕಲ್ಯಾಣ್: ಶ್ರೀ ನಿತ್ಯಾನಂದ ಮಿತ್ರ ಭಜನಾ ಮಂಡಳಿ ಸಂಚಾಲಕತ್ವದ ಶಾಹಡ್ ಬಿರ್ಲಾ ಗೇಟ್ ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನದ ತೃತೀಯ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವವು ಜೂ. 22 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಧಾರ್ಮಿಕ ಕಾರ್ಯಕ್ರಮವಾಗಿ ಡೊಂಬಿವಲಿಯ ಶ್ರೀ ಶಂಕರನಾರಾ ಯಣ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 8 ರಿಂದ ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಮಹಾಗಣಪತಿ ಹೋಮ, ಪ್ರಸನ್ನ ಗಣಪತಿ ದೇವರಿಗೆ ನವಕ ಕಲಶಾರಾಧನೆ, ಪ್ರಧಾನ ಹೋಮ, ಶ್ರೀದೇವಿಯ ಸನ್ನಿಧಿಯಲ್ಲಿ 25 ಕಲಶಾರಾಧನೆ, ಪ್ರಧಾನ ಹೋಮ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.
ಜಯ ಪ್ರಸಾದ್ ಶೆಟ್ಟಿ ಮತ್ತು ಕುಟುಂಬಿಕರ ಸೇವಾರ್ಥಕವಾಗಿ ನಡೆದ ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾದಿಗಳು ಉಪಸ್ಥಿತ ರಿದ್ದು ಪ್ರಸಾದ ಸ್ವೀಕರಿಸಿದರು. ಸಂಜೆ 6 ರಿಂದ ಕುಂಕುಮಾರ್ಚನೆ, ಲಲಿತಾ ಸಹಸ್ರನಾಮಾರ್ಚನೆ, ಮಹಾಪೂಜೆ, ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಮಂದಿರದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ಸದಸ್ಯೆಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಅನ್ನದಾನ ಸೇವೆಗೈದ ಜಯ ಪ್ರಸಾದ್ ಶೆಟ್ಟಿ ದಂಪತಿಯನ್ನು ಇದೇ ಸಂದರ್ಭದಲ್ಲಿ ಮಹಾ ಪ್ರಸಾದ ವನ್ನಿತ್ತು ಗೌರವಿಸಲಾಯಿತು. ಸ್ಥಳೀಯ ವಿವಿಧ ತುಳು-ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ದಾನಿ ಗಳು, ಸ್ಥಳೀಯ ಉದ್ಯಮಿಗಳು, ಗಣ್ಯರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ