![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬಯಿ: ಸ್ನೇಹ ಸಂಗಮ ಆಮಂತ್ರಣ ಬಿಡುಗಡೆ
Team Udayavani, Jul 5, 2018, 2:46 PM IST
![0307mum07.jpg](https://www.udayavani.com/wp-content/uploads/2018/07/5/0307mum07-620x281.jpg)
ಮುಂಬಯಿ: ಹಿಂದು ಜೂನಿಯರ್ ಕಾಲೇಜು ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬಯಿ ಇದರ ವಾರ್ಷಿಕ ಸ್ನೇಹ ಸಂಗಮ ಸಮಾರಂಭವು ಜು. 14 ರಂದು ಅಪರಾಹ್ನ 2.30 ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀ ಮುಕ್ತಾನಂದ ಸಭಾಗೃಹದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆಯ ವಿಶೇಷ ಸಭೆಯು ಜು. 1 ರಂದು ಸಂಜೆ ಮುಲುಂಡ್ ಪಶ್ಚಿಮದಲ್ಲಿರುವ ಹೊಟೇಲ್ ಕೀರ್ತಿ ಮಹಲ್ನ ಬ್ಯಾಂಕ್ವೆಟ್ ಸಭಾಗೃಹದಲ್ಲಿ ಜರಗಿತು.
ಹಿಂದೂ ಜ್ಯೂನಿಯರ್ ಕಾಲೇಜು ಶಿರ್ವ, ಹಳೆವಿದ್ಯಾರ್ಥಿ ಸಂಘ ಮುಂಬಯಿ ಇದರ ಗೌರವಾದ್ಯಕ್ಷ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ಅವರು ಸ್ನೇಹ ಸಂಗಮ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಸಂಘದ ಅಧ್ಯಕ್ಷ ಹೇಮಂತ್ ಶೆಟ್ಟಿ, ಉಪಾಧ್ಯಕ್ಷ ಅಮರ್ನಾಥ್ ಶೆಟ್ಟಿ, ಶಶಿಪ್ರಭಾ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಶೆಟ್ಟಿ, ಗೌರವ ಕೋಶಾಧಿಕಾರಿ ರಾಜೇಶ್ ಶೆಟ್ಟಿ, ಸಂಚಾಲಕ ಕಿಶೋರ್ ಕುಮಾರ್ ಕುತ್ಯಾರ್, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಖಾಂದೇಶ್ ಭಾಸ್ಕರ್ ಶೆಟ್ಟಿ, ಸತೀಶ್ ಶೆಟ್ಟಿ ಕುತ್ಯಾರ್, ಕರುಣಾಕರ ಶೆಟ್ಟಿ ಸೂಡ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು.
ಹಳೆವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಸಭೆಗೆ ಸ್ಥಳವಕಾಶ ನೀಡಿದ ಕೀರ್ತಿ ಮಹಲ್ ಜಯಕರ ಶೆಟ್ಟಿ ಇವರನ್ನು ಸಮ್ಮಾನಿಸಲಾಯಿತು.
ಸತೀಶ್ ಶೆಟ್ಟಿ ಕುತ್ಯಾರ್ ಸ್ನೇಹ ಸಂಗಮ ಸಮಾರಂಭದ ಬಗ್ಗೆ ವಿವರಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಹಳೆವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.