ಕಾತ್ರಜ್‌ ಅಯ್ಯಪ್ಪ ದೇವಸ್ಥಾನದಲ್ಲಿ ಶಿವರಾತ್ರಿ ಉತ್ಸವ


Team Udayavani, Mar 7, 2019, 12:30 AM IST

0603mum08.jpg

ಪುಣೆ: ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಾ. 4ರಂದು   ಶಿವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಧಾರ್ಮಿಕ ಕಾರ್ಯಕ್ರಮವು ಬೆಳಗ್ಗೆ 7ರಿಂದ ಪ್ರಾರಂಭಗೊಂಡು ರಾತ್ರಿ 9ರವರೆಗೆ ಶ್ರೀ ಈಶ್ವರ ದೇವರಿಗೆ  ರುದ್ರಾಭಿಷೇಕ ಮತ್ತು  ವಿವಿಧ  ಪ್ರಕಾರದ ಅಭಿಷೇಕ ಹಾಗೂ ಬೇರೆ ಬೇರೆ ಪೂಜಾ ಕೈಕಂಕರ್ಯಗಳು, ರಂಗಪೂಜೆ ಮಂಗಳಾರತಿಯು  ದೇವಸ್ಥಾನದ  ಪ್ರಧಾನ  ಅರ್ಚಕರಾದ ಹರೀಶ್‌ ಭಟ್‌ ಅವರ  ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಈಶ್ವರ ದೇವರಿಗೆ ಬೆಳ್ಳಿಯ ಮುಖವಾಡವನ್ನು ದೇವಸ್ಥಾನದ ಸೇವಾಕರ್ತರಲ್ಲಿ ಒಬ್ಬರಾದ ಹೊಟೇಲ್‌ ಆಶಾ ಗ್ರೂಪ್‌ ಇದರ ಭಾಸ್ಕರ ಶೆಟ್ಟಿ ಅವರು ಅರ್ಪಿಸಿದರು. ಶಿವರಾತ್ರಿ  ಪ್ರಯುಕ್ತ  ಅಯ್ಯಪ್ಪ  ಸ್ವಾಮಿ ದೇವಸ್ಥಾನದಲ್ಲಿ    ಅಪರಾಹ್ನ 3ರಿಂದ ಮೊದಲ್ಗೊಂಡು ಮಧ್ಯರಾತ್ರಿ 12 ಗಂಟೆಯವರೆಗೆ ಪುಣೆಯ ವಿವಿಧ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮವು ಜರಗಿತು.

ಭಜನಾ  ಕಾರ್ಯಕ್ರಮದಲ್ಲಿ ಕಾತ್ರಾಜ್‌ ಶ್ರೀ ಅಯ್ಯಪ್ಪ ಸ್ವಾಮೀ ಭಜನಾ   ಮಂಡಳಿ, ಪುಣೆ ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರ  ಭಜನಾ ಮಂಡಳಿ, ಬಿಲ್ಲವ ಸಮಾಜ ಸೇವಾ ಸಂಘ ಭಜನಾ ಮಂಡಳಿ, ದೇವಾಡಿಗ  ಸಂಘ ಭಜನಾ ಮಂಡಳಿ, ತುಳುಕೂಟ ಪುಣೆ  ಭಜನಾ ಮಂಡಳಿ, ಚೈತನ್ಯ ಭಜನಾ ಮಂಡಳಿ, ಕಾಪಿ ಹೌಸ್‌ ಭಜನಾ ಮಂಡಳಿ, ರಾಜಮಹಲ್‌ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀ ಅಯ್ಯಪ್ಪ ಭಜನಾ ಮಂಡಲಿಯವರೊಂದಿಗೆ ವಿವಿಧ ಮಂಡಳಿಯ ಸದಸ್ಯರ ಸಹಕಾರದೊಂದಿಗೆ ಕುಣಿತ ಭಜನೆಯು ಸೇರಿದ ಭಕ್ತಾದಿಗಳನ್ನು ರಂಜಿಸಿತು. ಅಯ್ಯಪ್ಪ ಭಜನಾ ಮಂಡಳಿಯ ಮುಖ್ಯಸ್ಥರಾದ ಭಾಸ್ಕರ ಕೊಟ್ಟಾರಿ  ಅವರ ಮುಂದಾಳತ್ವದಲ್ಲಿ   ಭಜನಾ ಕಾರ್ಯಕ್ರಮದಲ್ಲಿ ಸೇರಿದ ಎಲ್ಲರೂ ಮಂಗಳ ಹಾಡುವ ಮೂಲಕ ಮುಕ್ತಾಯಗೊಂಡಿತು. ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಬೆಳಗ್ಗೆಯಿಂದ ರಾತ್ರಿಯವರೆಗೆ ದೇವಸ್ಥಾನಕ್ಕೆ  ಭೇಟಿ ನೀಡಿ ಈಶ್ವರ ದೇವರ ದರ್ಶನ ಪಡೆದು ವಿವಿಧ ರೀತಿಯ ಪೂಜೆ ಸಲ್ಲಿಸಿ ಪುನೀತರಾದರು. ರಾತ್ರಿ  ದೇವಸ್ಥಾನದ ಆರಾಧ್ಯ ದೇವರಾದ ಅಯ್ಯಪ್ಪ ಸ್ವಾಮಿಗೆ ಮತ್ತು  ಶ್ರೀ ಈಶ್ವರ  ದೇವರಿಗೆ ಮಂಗಳಾರತಿಯ ಅನಂತರ ಪ್ರಸಾದ ವಿತರಣೆ ಹಾಗೂ ಅನ್ನದಾನ ಸೇವೆ  ಜರಗಿತು.

ಈ ದಿನದ ಅನ್ನದಾನ ಸೇವೆಯನ್ನು ರಘುರಾಮ ರೈ ದಂಪತಿ ಸೇವಾ ರೂಪದಲ್ಲಿ ನಡೆಸಿದರು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ  ಕಾತ್ರಜ್‌ ಇದರ ವಿಶ್ವಸ್ತ ಮಂಡಳಿಯ ಅಧ್ಯಕ್ಷರು  ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ  ಕಾರ್ಯಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮಂಡಳಿಯ ಅಧ್ಯಕ್ಷರು  ಮತ್ತು ಪದಾಧಿಕಾರಿಗಳು  ಮೇಲ್ವಿಚಾರಣೆಯನ್ನು ನೋಡಿಕೊಂಡರು. 

 ಚಿತ್ರ-ವರದಿ: ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.