ಮಹಾರಾಷ್ಟ್ರ ಪೊಲೀಸರಿಗೆ ಅವಮಾನ: ಶಿವಸೇನೆ
Team Udayavani, Mar 16, 2021, 6:44 PM IST
ಮುಂಬಯಿ: ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಕಾರಿನಿಂದ ಸ್ಫೋಟಕ ವಶಪಡಿಸಿಕೊಂಡಿದ್ದಕ್ಕಾಗಿ ಮುಂಬಯಿ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಅವರನ್ನು ಎನ್ಐಎ ಬಂಧಿಸಿರುವುದು ಮಹಾರಾಷ್ಟ್ರ ಪೊಲೀಸರ ಅವಮಾನ ಎಂದು ಹೇಳಿದ ಶಿವಸೇನೆಯು ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿದೆ ಎಂದು ಆರೋಪಿಸಿದೆ.
ಮಹಾರಾಷ್ಟ್ರ ಪೊಲೀಸರ ತನಿಖಾ ಸಾಮರ್ಥ್ಯಗಳು ಮತ್ತು ಶೌರ್ಯವನ್ನು ವಿಶ್ವಾದ್ಯಂತ ಶ್ಲಾ ಸುತ್ತಿರುವಾಗ, ಎನ್ಐಎ ಈ ಪ್ರಕರಣದ ತನಿಖೆ ನಡೆಸುವುದು ಆಶ್ಚರ್ಯಕರವಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ತಿಳಿಸಿದೆ. ಈ ಪ್ರಕರಣದಲ್ಲಿ ವಾಝೆ ತಪ್ಪಿತಸ್ಥರಾಗಿದ್ದರೆ ಮುಂಬಯಿ ಪೊಲೀಸರು ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅವರ ವಿರುದ್ಧ ಕ್ರಮಕೈಗೊಳ್ಳುವ ಸಾಮರ್ಥ್ಯ ಹೊಂದಿದೆ. ಆದರೆ ಅದು ಆಗಬೇಕೆಂದು ಕೇಂದ್ರ ತನಿಖಾ ಸಂಸ್ಥೆ (ಎನ್ಐಎ) ಬಯಸುವುದಿಲ್ಲ. ಅನ್ವಯ್ ನಾೖಕ್ ಆತ್ಮಹತ್ಯೆ ಪ್ರಕರಣದಲ್ಲಿ ವಾಝೆ ಅವರು ಪತ್ರಕರ್ತ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರಿಂದ ಅವರು ಬಿಜೆಪಿ ಮತ್ತು ಕೇಂದ್ರದ ಹಿಟ್-ಲಿಸ್ಟ್ ನಲ್ಲಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ.
ಎನ್ಐಎ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವುದು ಆಶ್ಚರ್ಯಕರವಾಗಿದೆ. ಎನ್ಐಎನಿಂದ ಬಂಧನವು ರಾಜ್ಯ ಪೊಲೀಸರ ಅವಮಾನ ಮತ್ತು ಉದ್ದೇಶಪೂರ್ವಕವಾಗಿದೆ. ಇದರ ಬಗ್ಗೆ ಸಂತೋಷ ವ್ಯಕ್ತಪಡಿಸುವವರು ರಾಜ್ಯದ ಸ್ವಾಯತ್ತತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಸಂಪಾದಕೀಯ ಆರೋಪಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ