ರಾಮರಾಜ ಕ್ಷತ್ರಿಯ ಸೇವಾ ಸಂಘ ಮಹಿಳಾ ವಿಭಾಗದಿಂದ ಶ್ರಾವಣ ಸಂಭ್ರಮ


Team Udayavani, Aug 14, 2018, 5:06 PM IST

1208mum05.jpg

ಮುಂಬಯಿ: ರಾಮರಾಜ ಕ್ಷತ್ರಿಯ ಸೇವಾ ಸಂಘ ಮುಂಬಯಿ ಇದರ ಮಹಿಳಾ ವಿಭಾಗದ ವತಿಯಿಂದ ಶ್ರಾವಣ ಸಂಭ್ರಮ ಕಾರ್ಯಕ್ರಮವು ಆ. 12ರಂದು ಪೂರ್ವಾಹ್ನ ಸಾಂತಾಕ್ರೂಜ್‌ ಪೂರ್ವದ ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ಶ್ರೀ ವಿಶ್ವೇಶತೀರ್ಥ ಸಭಾಗೃಹದಲ್ಲಿ ಆರೋಗ್ಯ ಸಂಜೀವಿನಿ ಮತ್ತು ಇನ್ನಿತರ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಸಂಘದ ಮಹಿಳಾ ವಿಭಾಗಧ್ಯಕ್ಷೆ ರೀನಾ ಕೇದರ್‌ನಾಥ್‌ ಬೋಳಾರ್‌ ಅವರ ಮುಂದಾಳತ್ವದಲ್ಲಿ ನಡೆದ ತ್ರಿವಳಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜ್‌ಕುಮಾರ್‌ ಕಾರ್ನಾಡ್‌ ವಹಿಸಿದ್ದರು. ಸಮಾಜದ ಜೇಷ್ಠ ಮಹಿಳಾ ಧುರೀಣೆ ಧನ್ವಂತರಿ ದಿನಕರ್‌ ರಾವ್‌ ದೀಪ ಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು. ಅತಿಥಿಗಳಾಗಿ ಸುಮನ್‌ ಮನ್‌ಮೋಹನ್‌ ರಾಜ್‌, ಕಲಾವತಿ ಗಣಪತಿ ಸೌಕೂರ್‌, ಸಂಘದ ಉಪಾಧ್ಯಕ್ಷ ಎನ್‌. ರವೀಂದ್ರನಾಥ್‌ ರಾವ್‌, ಗೌರವ ಪ್ರಧಾನ  ಕಾರ್ಯದರ್ಶಿ ಕೇದರ್‌ನಾಥ ಆರ್‌. ಬೋಳಾರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ವಿಭಾಗದ ಅಧ್ಯಕ್ಷೆ ರೀನಾ ಕೇದರ್‌ನಾಥ್‌ ಅವರು ಮಾತನಾಡಿ, ಸದ್ಯ ಮಹಿಳೆಯರಿಗೆ ಸ್ಥಾನಮಾನದ ಅಭಾವವಿದೆ ಎನ್ನುವುದು ತಪ್ಪು ಕಲ್ಪನೆ. ಅವಕಾಶ ತಮ್ಮದಾಗಿಸಲು ಮಹಿಳಾ ಶ‌ಕ್ತಿ ಸ್ವಯಂ ಪ್ರೇರಿತರಾಗಿ ಮುಂದಾಗ‌ಬೇಕು. ಮಹಿಳೆಯರ ಭಾವನೆ ಮನಸ್ಸುಗಳನ್ನು ಅರ್ಥೈಸುವಲ್ಲಿ ಪುರುಷರು ಸಫಲರಾದಾಗ ಅವಕಾಶಗಳು ತನ್ನಷ್ಟಕ್ಕೆ ಫಲಿಸುವುದು. ಪುರುಷ ಮಹಿಳೆಯ ಸಮಾನತೆಯಿಂದ ಮಾತ್ರ ಇದು ಸಾಧ್ಯವಾಗಲಿದೆ. ಅವಾಗಲೇ ಮಹಿಳೆಯರಲ್ಲಿನ ಅನ್ಯೋನ್ಯತೆ ನಿವಾರಣೆ ಆಗಬಲ್ಲದು ಎಂದರು.

ನಾರಿಯರಲ್ಲಿನ ನಾನು ಎಂಬ ಅಹಂ ಸಂಘರ್ಷಕ್ಕೆ ಕಾರಣವಾಗದೆ ಸಹನೆ, ಸಹಬಾಳ್ವೆ ಪ್ರಧಾನವಾಗಿ ಮೂಡಿದಾಗ ಸಾಂಸಾರಿಕ ಬದುಕು ಹಸನಾಗುತ್ತದೆ. ಆದ್ದರಿಂದ ಸಮಾಧಾನವೇ ಸಮಾನತೆಯ ಬಾಳಿನ ತಂತ್ರವಾಗಿದೆ ಎಂದು ನುಡಿದರು.

ವೀಣಾ ಸಂತೋಷ್‌ ರಾವ್‌ ಅವರು, ಶ್ರಾವಣ ಆಚರಣೆ ಬಗ್ಗೆ ಸ್ಥೂಲವಾದ ಮಾಹಿತಿ ನೀಡಿ, ಸುಮಂಗಲಿಯರು ದೀರ್ಘ‌ಕಾಲದ ಮಾಂಗಲ್ಯ ಪ್ರಾಪ್ತಿಗಾಗಿ ಆಷಾಢ ಮಾಸದ ಅಮಾವಾಸ್ಯೆಯ ಸಂಜೆ ವ್ರತವನ್ನು  ಶ್ರದ್ಧಾ ಭಕ್ತಿಯಿಂದ ಆಚರಿಸುವುದಿದೆ. ಆಷಾಢದ ಶುಕ್ಲ ಪಕ್ಷದ ಪಂಚಮಿಯ ದಿನ ಮಹಿಳೆಯರು ಅಮೃತಲಕ್ಷ್ಮೀ ವ್ರತವನ್ನು  ಭಕ್ತಿಯಿಂದ ಆಚರಿಸುತ್ತಾರೆ. ಈ ಎಲ್ಲಾ ಮಹತ್ವಗಳು ಆಷಾಢ ಮಾಸದಲ್ಲಿ ಇರುವುದರಿಂದ ಈ ತಿಂಗಳು ವಿಶೇಷವಾಗಿದೆ ಎಂದರು.

ಕುಲದೇವರು ಶ್ರೀ ರಾಮ ದೇವರನ್ನು ಸ್ತೋತ್ರದೊಂದಿಗೆ ಆರಾಧಿಸಿ ಕಾರ್ಯಕ್ರಮವು ಪ್ರಾರಂಭಗೊಂಡಿತು. ಬಳಿಕ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆದವು.  

ಮಹಿಳೆಯರಿಂದ ಅರಸಿನ  ಕುಂಕುಮ ಕಾರ್ಯಕ್ರಮ, ಕನ್ನಡ ಕಲಿಕೆ ಮತ್ತು ಆಧುನಿಕ ಯುಗದ ದಾಂಪತ್ಯ ಜೀವನದಲ್ಲಿ ಗಂಡನ ಪಾತ್ರ ಮುಖ್ಯವೋ ಹೆಂಡತಿಯ ಪಾತ್ರ ಪ್ರಧಾನವೋ ವಿಚಾರವಾಗಿ ಹರಟೆ ಕಾರ್ಯಕ್ರಮ ಪ್ರಸ್ತುತಗೊಂಡಿತು. ಮಧ್ಯಾಂತರದಲ್ಲಿ ಮಹಿಳಾ ವಿಭಾಗದ  ಪದಾಧಿಕಾರಿಗಳು ಯೋಗ ಇನ್‌ಸ್ಟಿಟ್ಯೂಟ್‌ ತಂಡವು ಜೀವವನ್ನು ಯಾವ ರೀತಿಯಾಗಿ ಸಮತೋಲನದಲ್ಲಿ ಇರಿಸಬೇಕು ವಿಚಾರಿತ ಆರೋಗ್ಯ ಸಂಜೀವಿನಿ ಮಾಹಿತಿ ಕಾರ್ಯಗಾರವನ್ನು ನಡೆಸಿ, ಯೋಗದ ಮುಖೇನ ತಿಳಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಘದ ಸದಸ್ಯರು, ಮಹಿಳಾ ಸದಸ್ಯೆಯರು, ಮಕ್ಕಳಿಂದ ವಿವಿಧ ವಿನೋದಾವಳಿಗಳನ್ನು  ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ರಾಮರಾಜ ಕ್ಷತ್ರಿಯ ಸಂಘ ಮುಂಬಯಿ ಮಹಿಳಾ ವಿಭಾಗದ ಗೌರವ  ಕೋಶಾಧಿಕಾರಿ ಪ್ರಜ್ಞಾ ಎಸ್‌. ರಾವ್‌, ಕಾರ್ಯಕಾರಿ ಸಮಿತಿಯ ಸದಸ್ಯೆಯರುಗಳಾದ ಕವಿತಾ ಆರ್‌. ರಾವ್‌, ಕಾಂತಿ ವಿ. ರಾವ್‌, ಧನಲಕ್ಷ್ಮೀ ಆರ್‌. ಕಾರ್ನಾಡ್‌, ಶ್ರೇಯಾ ಎಸ್‌. ರಾವ್‌, ಸಾರಿಕಾ ಡಿ. ಶೇರುಗಾರ್‌, ಅನುಪಮಾ ಎಸ್‌. ರಾವ್‌, ನಿಶಾ ಎಸ್‌. ರಾವ್‌, ಗಾಯತ್ರಿ ರಾವ್‌ ಸೇರಿದಂತೆ ಮಾಜಿ, ಹಾಲಿ ಪದಾಧಿಕಾರಿಗಳು, ಸದಸ್ಯರು, ಸಮಾಜ ಬಾಂಧವರು ಉಪಸ್ಥಿತರಿದ್ದರು. 

ಆರತಿ ಎನ್‌. ರಾವ್‌ ವಿವಿಧ ಸ್ಪರ್ಧೆಗಳನ್ನು ನಡೆಸಿಕೊಟ್ಟರು.
ಕೀರ್ತನ ರೂಪೇಶ್‌ ರಾವ್‌ ಸ್ವಾಗತಿಸಿದರು. ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ ರಾಜ್‌ಕುಮಾರ್‌ ಕಾರ್ನಾಡ್‌ ಗಣ್ಯರಿಗೆ ಪುಷ್ಪಗುತ್ಛವನ್ನಿತ್ತು  ಸ್ಪರ್ಧಾ ವಿಜೇತರಿಗೆ ಬಹುಮಾನ ಪ್ರದಾನಿಸಿ ಅಭಿನಂದಿಸಿದರು. ಸಪ್ನಾ ಉದಯಕುಮಾರ್‌ ಬೇಕಲ್‌ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು.  ಮಹಿಳಾ ಗೌರವ ಕಾರ್ಯದರ್ಶಿ ಚಿತ್ರಾ ಎಂ. ರಾವ್‌ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.