ಮೀರಾರೋಡ್ ಶ್ರೀ ಶನೀಶ್ವರ ಮಂದಿರದಲ್ಲಿ ವಿಶೇಷ ಮಹಾಪೂಜೆ, ಗೌರವಾರ್ಪಣೆ
Team Udayavani, May 12, 2021, 12:12 PM IST
ಮುಂಬಯಿ: ಮೀರಾರೋಡ್ ಶ್ರೀ ಶನೀಶ್ವರ ಮಂದಿರದಲ್ಲಿ ಶನಿವಾರತಿಂಗಳ ಮಂಗಳಾದ್ಯಯ ಮಹಾಪೂಜೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಶ್ರೀ ಶನೀಶ್ವರ ಗ್ರಂಥ ಪಾರಾಯಣದ ಅನಂತರ ವಿಶೇಷ ಪೂಜೆ ನಡೆಯಿತು. ಬಳಿಕ ಹನುಮಾನ್ ಚಾಲೀಸ್ ಪಠಣ, ಶ್ರೀ ಶನೀಶ್ವರ ಜಪದ ಬಳಿಕ ಶ್ರೀ ಶನೀಶ್ವರ ಭಜನ ಸಮಿತಿಯವರಿಂದ ಭಜನೆ, ರಾತ್ರಿ 7ರಿಂದ ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ನಡೆಯಿತು. ಈ ವಿಶೇಷ ಪೂಜೆಯಲ್ಲಿ ವಿವಿಧ ವಲಯಗಳಲ್ಲಿ ವಿಶೇಷ ಸಾಧನೆಗೈದ ಮಂದಿರದ ಜತೆ ಕೋಶಾಧಿಕಾರಿ ಜಯಕರ್ ಶೆಟ್ಟಿ ಮುದ್ರಾಡಿ ಹಾಗೂ ಯವ ಸಮಿತಿಯ ಹಿಮಾಂಶ್ ಅಮೀನ್ ಅವರಿಗೆ ಮಂದಿರದ ಗೌರವ ಅಧ್ಯಕ್ಷ ವಿನೋದ್ ವಾಘಾಸಿಯಾ ಅವರು ಶಾಲು ಹೊದೆಸಿ, ಮಹಾ ಪ್ರಸಾದವನ್ನು ನೀಡಿ ಗೌರವಿಸಿದರು.
ಈ ಸಂದರ್ಭ ಅಧ್ಯಕ್ಷೆ ವಿದ್ಯಾ ಅಶೋಕ್ ಕರ್ಕೇರ, ಕಾರ್ಯದರ್ಶಿ ಸದಾನಂದ್ ಪೂಜಾರಿ ಕಾರ್ಕಳ, ಜತೆ ಕಾರ್ಯದರ್ಶಿ ಉಷಾ ದಿನೇಶ್ ಶೆಟ್ಟಿಗಾರ್, ಜತೆ ಕೋಶಾಧಿಕಾರಿ ಭಾರತಿ ಅಂಚನ್, ಪೂಜಾ ಸಮಿತಿಯ ಉಪಾಧ್ಯಕ್ಷೆ ಜಯಲಕ್ಷ್ಮೀ ಸುವರ್ಣ, ಪೂಜಾ ಸಮಿತಿಯ ಕಾರ್ಯ ದರ್ಶಿ ಶಕುಂತಲಾ ಶೆಟ್ಟಿ, ಮಹಿಳಾ ಸಮಿತಿಯ ಯಶೋದಾ ಪೂಜಾರಿ, ಸುಜಾತಾ ಶೆಟ್ಟಿ, ಆರತಿ ರಾಬ್, ಯುವ ಸಮಿತಿಯ ಜಯೇಶ್ ಸುವರ್ಣ, ರಿಚೀನ್ ಅಮೀನ್, ಕಾವ್ಯಾ ಶೆಟ್ಟಿಗಾರ್, ಹಿಮಾಂಶ್ ಅಮೀನ್, ಪ್ರಜ್ಞಾ ಶೆಟ್ಟಿಗಾರ್, ಅರ್ಚಕರಾದ ನಿರಾವ್ ಭಟ್ ಮತ್ತು ಶುಶಿಲ್ ಮಿಶ್ರ, ವಿಘ್ನಹರ್ತ ಡೆವಲಪರ್ ಇದರ ವಿವೇಕಾನಂದ ಮೊದಲಾ ದವರು ಪಾಲ್ಗೊಂಡಿದ್ದರು.
ಈ ವಿಶೇಷ ಧಾರ್ಮಿಕ ಕಾರ್ಯಕ್ರಮ ದಲ್ಲಿ ಜಗತ್ತಿಗೆ ಬಂದಿರುವಂತಹ ಕೊರೊನಾದ ನಿವಾರಣೆಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಕೊರೊನಾ ಲಾಕ್ಡೌನ್ ಮಾರ್ಗಸೂಚಿಯಂತೆ ಕಾರ್ಯಕ್ರಮ ನೆರವೇರಿತು. ಸದಾನಂದ್ ಪೂಜಾರಿ ಕಾರ್ಕಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್