ಶ್ರೀ ಮದ್ಭಾರತ ಮಂಡಳಿ ಮುಂಬಯಿ 140ನೇ ವಾರ್ಷಿಕ ಮಂಗಳ್ಳೋತ್ಸವ
Team Udayavani, Feb 27, 2018, 3:16 PM IST
ಮುಂಬಯಿ: ಶ್ರೀ ಮದ್ಭಾರತ ಮಂಡಳಿ ಮುಂಬಯಿ ಇದರ 140ನೇ ವಾರ್ಷಿಕ ಮಂಗಳ್ಳೋ ತ್ಸವ ಮತ್ತು ಕುಮಾರವ್ಯಾಸ ಮಹಾ ಭಾರತದ ಪ್ರವಚನದ ಸಮಾಪ್ತಿ ಮಂಗಳ್ಳೋತ್ಸವವು ಫೆ. 24ರಂದು ಸಂಜೆ 5ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶುಭಾರಂಭ ಗೊಂಡಿತು.
ಅಂಧೇರಿ ಪಶ್ಚಿಮದ ವೀರ ದೇಸಾಯಿ ರೋಡ್ನ, ಎಂವಿಎಂ ಎಜುಕೇಶನಲ್ ಕ್ಯಾಂಪಸ್ ಮಾರ್ಗದಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಮಂದಿರದಲ್ಲಿ ಫೆ. 24 ರಂದು ಸಂಜೆ 6 ರಿಂದ ದೇವರ ಮೂರ್ತಿಯನ್ನು ಮಂಟಪದಲ್ಲಿ ಆರೂಢಗೊಳಿಸಲಾಯಿತು. ಆನಂತರ ಹೋಮ, ಬ್ರಾಹ್ಮಣ ಸತ್ಕಾರ, ಗ್ರಂಥ ಪಾರಾಯಣ, ಉಪಕಾರ ಸ್ಮರಣೆ, ಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಫೆ. 25 ರಂದು ಪ್ರಾತಃಕಾಲ 8ರಿಂದ ಭಜನೆ, ಉತ್ತರ ಪೂಜೆ, ಮಹಾಮಂಗಳಾರತಿ, ಪೂರ್ವಾಹ್ನ 11.30ರಿಂದ ಪ್ರಾರ್ಥನೆ, ಹರಕೆ ಸಮರ್ಪಣೆ, ಧಾರ್ಮಿಕ ಸಭೆಯನ್ನು ಆಯೋಜಿಸಲಾಗಿತ್ತು.
ಮಂಡಳದ ಅಧ್ಯಕ್ಷ ಜಗನ್ನಾಥ್ ಪಿ. ಪುತ್ರನ್ ಇವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೊಟೇಲ್ ಉದ್ಯಮಿ ಗೋಪಾಲ್ ಶೆಟ್ಟಿ ಮತ್ತು ಅಂಬಾ ಜಿ. ಶೆಟ್ಟಿ ದಂಪತಿ ಉಪಸ್ಥಿತರಿದ್ದರು.
ಅಧ್ಯಕ್ಷತೆ ವಹಿಸಿದ್ದ ಜಗನ್ನಾಥ್ ಪಿ. ಪುತ್ರನ್ ಇವರು ಸ್ವಾಗತಿಸಿ ಮಾತನಾಡಿ, ನಗರದ ಹಿರಿಯ ಧಾರ್ಮಿಕ ಸಂಸ್ಥೆಯಾಗಿರುವ ಮದ್ಭಾರತ ಮಂಡಳಿಯು ಶತಮಾನಗಳಿಂದ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದೆ. ಧಾರ್ಮಿಕ ಗ್ರಂಥ ಪಾರಾಯಣಗಳ ಯುವ ಪೀಳಿಗೆಗೆ ಇದರ ಮಹತ್ವದ ಅರಿವನ್ನು ಮೂಡಿಸುತ್ತಿದ್ದೇವೆ. ಮಂಗಳ್ಳೋತ್ಸವವನ್ನು ವಿಜೃಂಭಣೆಯಿಂದ ಕಳೆದ 140 ವರ್ಷಗಳಿಂದ ಮಾಡುತ್ತಿದ್ದೇವೆ. ಇದೀಗ ಶ್ರೀಕ್ಷೇತ್ರ ಜೀರ್ಣೋದ್ಧಾರ ಕಾರ್ಯವು ನಡೆಯಲಿದ್ದು, ಈ ಪುಣ್ಯ ಕಾರ್ಯಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಮುಖ್ಯ ಅತಿಥಿ ಉದ್ಯಮಿ ಗೋಪಾಲ್ ಶೆಟ್ಟಿ ಇವರು ಮಾತನಾಡಿ, ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹತ್ತಿರದಿಂದ ಬಲ್ಲವನಾಗಿದ್ದೇನೆ. ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ನನ್ನ ಸಹಕಾರ, ಪ್ರೋತ್ಸಾಹ ಸದಾಯಿದೆ ಎಂದು ನುಡಿದು ಶುಭಹಾರೈಸಿದರು.
ಮೊಗವೀನ ವ್ಯವಸ್ಥಾಪಕ ಮಂಡಳಿ ಮುಂಬಯಿ ಅಧ್ಯಕ್ಷ ಕೆ. ಎಲ್. ಬಂಗೇರ, ಮೊಗವೀರ ಬ್ಯಾಂಕಿನ ಕಾರ್ಯಾಧ್ಯಕ್ಷ ಸದಾನಂದ ಕೋಟ್ಯಾನ್, ಶ್ರೀ ಮಹಾಲಕ್ಷ್ಮೀ ಹೌಸಿಂಗ್ ಸೊಸೈಟಿಯ ಕಾರ್ಯಾಧ್ಯಕ್ಷ ಬಾಲಕೃಷ್ಣ ಕರ್ಕೇರ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಮುಂಬಯಿಇದರ ನಾರಾಯಣ ತಿಂಗಳಾಯ, ಉದ್ಯಮಿ ಶ್ರೀನಿವಾಸ ಕಾಂಚನ್ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಮಂಡಳದ ಗೌರವ ಪ್ರಧಾನ ಕಾರ್ಯದರ್ಶಿ ಗುಂಡಿ ವಿ. ಕೆ. ಸುವರ್ಣ ಇವರು ಅತಿಥಿಗಳನ್ನು ಪರಿಚಯಿಸಿದರು. ಪದಾಧಿಕಾರಿಗಳು ಮತ್ತು ಸದಸ್ಯರು ಅತಿಥಿಗಳನ್ನು ಗೌರವಿಸಿದರು. ವೇದಿಕೆಯಲ್ಲಿ ಮಂಡಳದ ಉಪಾಧ್ಯಕ್ಷರುಗಳಾದ ಒಡೆಯರಬೆಟ್ಟು ರಘುನಾಥ್ ಬಿ. ಕುಂದರ್ ಮತ್ತು ಬಂಟ್ವಾಡಿ ಸಂಜೀವ ಬಿ. ಚಂದನ್, ಗೌರವ ಜತೆ ಕಾರ್ಯದರ್ಶಿಗಳಾದ ಸಣ್ಣಗುಂಡಿ ಲೋಕನಾಥ್ ಪಿ. ಕಾಂಚನ್ ಮತ್ತು ಪಲಿಮಾರು ಹರಿಶ್ಚಂದ್ರ ಸಿ. ಕಾಂಚನ್, ಗೌರವ ಕೋಶಾಧಿಕಾರಿ ಮೂಳೂರು ಕೇಶವ ಆರ್. ಪುತ್ರನ್, ಜತೆ ಕೋಶಾಧಿಕಾರಿಗಳಾದ ಮೂಳೂರು ನಾರಾಯಣ ಸಿ. ಸುವರ್ಣ ಮತ್ತು ಬೈಕಂಪಾಡಿ ಶ್ಯಾಮ ಕೆ. ಪುತ್ರನ್, ಅಶೋಕ್ ಎನ್. ಸುವರ್ಣ ಇವರು ಉಪಸ್ಥಿತರಿದ್ದರು.
ಪಾರುಪತ್ಯಗಾರರುಗಳಾದ ಜೆ. ಪಿ. ಪುತ್ರನ್, ವಿ. ಕೆ. ಸುವರ್ಣ, ನಾರಾಯಣ ಸಿ. ಸುವರ್ಣ, ಆನಂದ ಎ. ಅಮೀನ್, ನಾಗೇಶ್ ಎಲ್. ಮೆಂಡನ್, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಶಶಿಕುಮಾರ್ ಎಸ್. ಕೋಟ್ಯಾನ್, ಲೋಕನಾಥ್ ಒ. ಡಿ. ಮೆಂಡನ್, ವಾಸು ಎಸ್. ಉಪ್ಪೂರು, ದೇವದಾಸ್ ಪಿ. ಕರ್ಕೇರ, ಗೋವಿಂದ ಎನ್. ಪುತ್ರನ್, ಗಂಗಾಧರ ಎಸ್. ಕರ್ಕೇರ, ಎಚ್. ಮಹಾಬಲ್, ಸುರೇಂದ್ರನಾಥ್ ಹಳೆಯಂಗಡಿ, ಆನಂದ ಎ. ಅಮೀನ್, ಗಂಗಾಧರ ಪಿ. ಸಾಲ್ಯಾನ್ ಹಾಗೂ ಇತರ ಸೇವಾಕರ್ತರುಗಳಾದ ಹೊಸಬೆಟ್ಟು ಮಹಾಬಲ ಮತ್ತು ಅಳಿಕೆ ಪುರಂದರ ಅಮೀನ್ ಇವರು ಉಪಸ್ಥಿತರಿದ್ದರು.
ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್ ಇವರ ನೇತೃತ್ವದಲ್ಲಿ ವಿವಿಧ ಪೂಜೆಗಳು ನಡೆಯಿತು. ಮಧ್ಯಾಹ್ನ 12.05 ರಿಂದ ಅಪರಾಹ್ನ 2 ರವರೆಗೆ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ 3 ರಿಂದ ದೇವರ ಶ್ರೀ ದೇವರ ಮೂರ್ತಿಯೊಂದಿಗೆ ವಸೋìವಾ ಚೌಪಾಟಿಗೆ ಅವಭೃತ ಸ್ನಾನಕ್ಕೆ ತೆರಳಲಾಯಿತು. ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜದ ಗಣ್ಯರು, ವಿವಿಧ ಕ್ಷೇತ್ರಗಳ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ: ಸುಭಾಶ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ