ವಿಜೃಂಭಿಸಿದ “ಶ್ರೀ  ಬಪ್ಪನಾಡು ಕ್ಷೇತ್ರ ಮಹಾತ್ಮೆ’ ಯಕ್ಷಗಾನ 


Team Udayavani, Sep 6, 2017, 12:08 PM IST

04-Mum04a.jpg

ಕರಾವಳಿಯ ಶ್ರೀಮಂತ ಕಲೆ, ದೇಶ ವಿದೇಶಗಳಲ್ಲಿ  ಹೆಸರನ್ನು ಗಳಿಸಿದ  ಯಕ್ಷಗಾನವನ್ನು ಪುಣೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಪುಣೆಯ ಯಕ್ಷ ಕಲಾ ಪ್ರೇಮಿಗಳಿಗೆ ವಿವಿಧ ಯಕ್ಷಗಾನ ಪ್ರಸಂಗಗಳ ಪ್ರದರ್ಶನ, ತಾಳಮದ್ದಳೆಗಳನ್ನು ಆಯೋಜಿಸುವ ಮೂಲಕ  ಯಕ್ಷಗಾನದ ರಸದೌತಣವನ್ನೂ ನಿರಂತರ ನೀಡುತ್ತಾ ಬಂದಿರುವ ಪುಣೆಯ ಶ್ರೀ ಮಹಾಗಣಪತಿ  ಯಕ್ಷಗಾನ ಮಂಡಳಿಯ ಕಾರ್ಯ ಶ್ಲಾಘನೀಯ.

ಮಂಡಳಿಯ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಅವರು ಯಕ್ಷಗಾನದ ಮೇಲಿನ ಪ್ರೀತಿಯಿಂದ ಯಕ್ಷಗಾನದ  ಅಭಿರುಚಿ ಇರುವ ಕಲಾವಿದರನ್ನು ಒಂದೇ  ಸೂರಿನಡಿ ಸೇರಿಸಿ ಪುಣೆಯಲ್ಲಿ ಒಂದು ಮಂಡಳಿಯನ್ನು ಸ್ಥಾಪಿಸಿ ಅದರ ಮುಖಾಂತರ ಹಲವಾರು ಯಕ್ಷಗಾನ ಪ್ರಯೋಗಗಳನ್ನು ಪುಣೆ ಮತ್ತು ಪುಣೆಯಿಂದ ಹೊರಗೆ ನೀಡಿದ ಕೀರ್ತಿ ಈ ಮಂಡಳಿಗಿದೆ. ಈ ಮೂಲಕ ಪುಣೆಯಲ್ಲಿ ಹಲವಾರು ಯಕ್ಷಗಾನ ಕಲಾವಿದರ ಹುಟ್ಟಿಗೆ ಮಂಡಳಿಯು  ಕಾರಣವಾಗಿದೆ ಎನ್ನಬಹುದು.

ನಮ್ಮ ಕರಾವಳಿ ಪ್ರದೇಶದಿಂದ ಬರುವ ಇನ್ನಿತರ ಮೇಳಗಳ ಯಕ್ಷಗಾನ ಪ್ರದರ್ಶನಕ್ಕೆ ಪ್ರಾಯೋಜಕತ್ವ, ವ್ಯವಸ್ಥಾಪಕತ್ವವನ್ನು ನೀಡುವ ಮೂಲಕ ಸಹಕಾರವನ್ನು ನೀಡುವ ಕೆಲಸ ಪುಣೆಯ ಮಂಡಳಿಯ ಮುಖಾಂತರ  ಆಗುತ್ತಿದೆ, ಇದಕ್ಕೆ ಇನ್ನೊಂದು ಸೇರ್ಪಡೆಯಂತೆ ಮಳೆಗಾಲದ ಯಕ್ಷಗಾನ ಪ್ರದರ್ಶನ ನೀಡುವ ನಿಡ್ಲೆ ಗೋವಿಂದ ಭಟ್‌ ಅವರ ಸಾರಥ್ಯದ ಶ್ರೀ  ಮಹಾಗಣಪತಿ ಯಕ್ಷಗಾನ ಮಂಡಳಿ ನಿಡ್ಲೆ ಮೇಳದ ಊರಿನ ಹೆಸರಾಂತ  ಧರ್ಮಸ್ಥಳ ಮತ್ತು ಕಟೀಲು ಮೇಳಗಳ ಆಯ್ದ ಕಲಾವಿದರು   ಮತ್ತು ಪುಣೆ ಮಂಡಳಿಯ ಕಲಾವಿದರ ಕೂಡುವಿಕೆಯಿಂದ ನಡೆದ “ಶ್ರೀ  ಬಪ್ಪನಾಡು ಕ್ಷೇತ್ರ ಮಹಾತೆ¾’ ಯಕ್ಷಗಾನವು ಸೇರಿದ ಅಪಾರ ಸಂಖ್ಯೆಯ ಕಲಾ ರಸಿಕರನ್ನು ರಂಜಿಸಿತು.

ಪುಣೆ ಶ್ರೀ  ಮಹಾಗಣಪತಿ ಯಕ್ಷಗಾನ ಮಂಡಳಿಯ  ವ್ಯವಸ್ಥಾಪಕತ್ವದಲ್ಲಿ, ಪುಣೆಯ ಪ್ರಸಿದ್ದ ಜ್ಯೋತಿಷ್ಯ, ಪುರೋಹಿತರಾದ ಕಲಾಸೇವಕ ಶ್ರೀ ರಾಘವೇಂದ್ರ ಭಟ್‌ ಅವರ ಪ್ರಾಯೋಜಕತ್ವದಲ್ಲಿ, ಈ  ಯಕ್ಷಗಾನ ಪ್ರದರ್ಶನವು ಪುಣೆಯ ಕೇತ್ಕರ್‌ರೋಡ್‌ನ‌ ಶ್ಯಾಮ್‌ರಾವ್‌ ಕಲ್ಮಾಡಿ ಕನ್ನಡ ಹೈಸ್ಕೂಲ್‌ನ ಸಭಾಗೃಹದಲ್ಲಿ ಇತ್ತೀಚೆಗೆ ತುಂಬಿದ ಸಭಾಂಗಣದಲ್ಲಿ   ಪ್ರದರ್ಶನಗೊಂಡು ಕಲಾಭಿಮಾನಿಗಳ ಮನಸೂರೆಗೊಂಡಿತು.

ಹೊಸಮೂಲೆ ಗಣೇಶ್‌ ಭಟ್‌ ಅವರ ಇಂಪಾದ  ಭಾಗವತಿಕೆ  ಮತ್ತು ಪಡ್ರೆ ಶ್ರೀಧರ ಅವರ  ಚೆಂಡೆ, ಸುದಾಸ್‌ ಕಾವೂರು ಅವರ ಮೃದಂಗದ  ಹಿಮ್ಮೇಳದೊಂದಿಗೆ ಯಕ್ಷರಂಗದ ಹೆಸರಾಂತ  ಕಲಾವಿದರಾದ ಕುಂಬ್ಳೆ ಶ್ರೀಧರ್‌  ರಾವ್‌ ಅವರ  ಬಪ್ಪಬ್ಯಾರಿ, ರಾಜ್ಯ ಪ್ರಶಸ್ತಿ ವಿಜೇತ ನಿಡ್ಲೆ ಗೋವಿಂದ ಭಟ್‌ ಅವರ ದಾರಿಕಾಸುರ 2, ಅಮ್ಮುಂಜೆ ಮೋಹನ್‌ ಅವರ  ದಾರಿಕಾಸುರ 1, ಉದಯಕುಮಾರ… ಅಡ್ಯನಡ್ಕ ಅವರ ವಿಷ್ಣು, ರಘುನಾಥ್‌ ನಲ್ಲೂರುರವರ ದೇವೇಂದ್ರ, ನಿಡ್ಲೆ ನಾರಾಯಣ ಭಟ್‌ ಅವರ ಗುಳಿಗ ಪಾತ್ರ, ಕೆದಿಲ ಜಯರಾಂ ಭಟ್‌ ಅವರ ಶ್ರೀದೇವಿ ಮತ್ತು ಇನ್ನಿತರ ಕಲಾವಿದರ ಮನೋಜ್ಞ ಅಭಿನಯವು ಕಲಾ ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿಸಿತು. ತುಂಬಿದ ಸಭಿಕರನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದ ಬಾಲಕೃಷ್ಣ ಮಣಿಯಾಣಿರವರ ಹಾಸ್ಯ ಪಾತ್ರವು ಮೆಚ್ಚುಗೆ ಪಡೆಯಿತು. ಸಂದೀಪ್‌ ಕೋಳ್ಯೂರು, ವಸಂತ್‌ ಗೌಡ, ಪುತ್ತೂರು ಗಂಗಾಧರ ನವೀನ ಶೆಟ್ಟಿ, ಶಿವ ಪ್ರಸಾದ್‌ ಭಟ್‌, ಕುಸುಮೊದರ,  ಅರಳ ಗಣೇಶ್‌ ಶೆಟ್ಟಿ, ಗೌತಮ  ಹಾಗೂ ಇತರ ಉದಯೋನ್ಮುಖ   ಕಲಾವಿದರ ಕೂಡುವಿಕೆಯಲ್ಲಿ ನಡೆದ  ಈ ಯಕ್ಷಗಾನ ಪ್ರದರ್ಶನವು ಉತ್ತಮವಾಗಿ ಮೂಡಿ ಬಂದಿತು.

  ಹರೀಶ್‌ ಮೂಡಬಿದ್ರಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.