ಶ್ರೀರಾಮ್ ಮಹಾಜನ್ಅವರಿಗೆ ರಾಜ್ಯಮಟ್ಟದ ಪ್ರಶಸಿ
Team Udayavani, Jan 26, 2020, 6:28 PM IST
ಮುಂಬಯಿ, ಜ. 25: ಚೆಂಬೂರು ಕರ್ನಾಟಕ ಸಂಘ ಸಂಚಾಲಿತ ಚೆಂಬೂರು ಕರ್ನಾಟಕ ಹೈಸ್ಕೂಲ್ರ ಕಲಾ ಶಿಕ್ಷಕರಾದ ಶ್ರೀರಾಮ್ ಮಹಾಜನ್ ಅವರಿಗೆ ಸಾಯಿ ಅರ್ಪಣಾ ಫೌಂಡೇಷನ್ ಆಯೋಜಿಸಿದ ಮಹಾರಾಷ್ಟ್ರ ಸಮ್ಮಾನ್ ಪ್ರಶಸ್ತಿ ಲಭಿಸಿದೆ.
ಜ. 9 ರಂದು ಶಿರ್ಡಿಯ ಜೆ. ಕೆ. ಪಾಲೇಸ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಹಾಜನ್ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಮಾಜ ಸೇವಕ ಸೋಮನಾಥ ಗಾಯಕ್ವಾಡ್ ಅವರು ಈ ಪ್ರಶಸ್ತಿಯನ್ನು ಪ್ರಧಾನಿಸಿದರು. ಪ್ರಶಸ್ತಿಯು ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿತ್ತು. ಮಹಾಜನ್ ಅವರು ಚಿತ್ರಕಲಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಯಿತು. ಮಹಾಜನ್ ಅವರ ಸಾಧನೆಗೆ ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ, ನ್ಯಾಯವಾದಿ ಎಚ್. ಕೆ. ಸುಧಾಕರ, ಶಾಲೆಯ ಮುಖ್ಯ ಶಿಕ್ಷಕ ರಾಜಿ ರಮೇಶ್ ಹಾಗೂ ಸಂಘದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ