ಸಮಾಜ ಸೇವಕ ರತ್ನಾಕರ ಶೆಟ್ಟಿ ಮುಂಡ್ಕೂರು ಅವರಿಗೆ ಸಮ್ಮಾನ
Team Udayavani, Jun 13, 2018, 4:28 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಜೂ. 10ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಪದಾಧಿಕಾರಿಗಳು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ ಹಾಗೂ ಪದಾಧಿಕಾರಿಗಳ ನೇತೃತ್ವದಲ್ಲಿ ಜರಗಿದ 14ನೇ ಮೆಗಾ ಆರ್ಥಿಕ ಸಹಾಯ ವಿತರಣಾ ಸಮಾರಂಭದಲ್ಲಿ ಸಮಾಜ ಸೇವಕ, ಮಾತೃಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಸಮಾರಂಭದಲ್ಲಿ ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ ಬೇವರೇಜಸ್ ಕಾರ್ಪೊರೇಶನ್ ಲಿಮಿಟೆಡ್ ಇದರ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಗೌರವ ಅತಿಥಿಗಳಾದ ಚರಿಷ್ಮಾ ಬಿಲ್ಡರ್ ಲಿಮಿಟೆಡ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್ ವಿ. ಶೆಟ್ಟಿ, ತುಂಗಾ ಗ್ರೂಪ್ ಆಫ್ ಹೊಟೇಲ್ಸ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧಾಕರ್ ಎಸ್. ಹೆಗ್ಡೆ, ಬೆಂಗಳೂರು ಎಂ. ಆರ್. ಜಿ. ಹಾಸ್ಪಿಟಾಲಿಟಿ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ, ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಎಂ. ಶೆಟ್ಟಿ, ಬಂಟರ ಸಂಘದ ವಿಶ್ವಸ್ಥ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಉಪಸ್ಥಿತರಿದ್ದರು. ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು.
ಬಂಟರ ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ. ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಚಿತ್ರ-ವರದಿ: ಪ್ರೇಮನಾಥ್ ಶೆಟ್ಟಿ ಮುಂಡ್ಕೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು