ಐಕಳ ಹರೀಶ್ ಶೆಟ್ಟಿ ಅವರಿಂದ ಮಹಾದಾನಿ, ಸಮಾಜ ಸೇವಕ ಎಸ್. ಎಂ. ಶೆಟ್ಟಿ ಅವರಿಗೆ ಅಭಿನಂದನೆ
Team Udayavani, Aug 20, 2021, 2:09 PM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಸೆ. 5ರಂದು ಮುಂಬಯಿಯಲ್ಲಿ ನಡೆಯಲಿರುವ ಒಕ್ಕೂಟದ ಬಹಿರಂಗ ಅಧಿವೇಶನದ ವಿಶೇಷ ಅತಿಥಿಯಾಗಿ ಭಾಗವಹಿಸಲಿರುವ ಎಸ್. ಎಂ. ಶೆಟ್ಟಿ ಗ್ರೂಪ್ ಆಫ್ ಕಂಪೆನಿ ಇದರ ಅಧ್ಯಕ್ಷ ಬಂಟರ ಸಮಾಜದ ಮಹಾನ್ ದಾನಿ, ಬಂಟರ ಸಂಘಗಳ ಪೋಷಕರು, ಮುಂಬಯಿ ಬಂಟರ ಸಂಘದ ಎಸ್. ಎಂ. ಶೆಟ್ಟಿ ಶಿಕ್ಷಣ ಸಂಸ್ಥೆಗಳ ನಿರ್ಮಾತೃ ಮಂಗಳೂರಿನ ಬಂಟರ ಯಾನೆ ನಾಡವರ ಮಾತೃಸಂಘದ ಗೀತಾ ಎಸ್. ಎಂ. ಶೆಟ್ಟಿ ಸಭಾಭವನದ ನಿರ್ಮಾತೃ ಎಸ್. ಎಂ. ಶೆಟ್ಟಿ ಅವರನ್ನು ಭೇಟಿಯಾಗಿ ಪುಷ್ಪಗುತ್ಛವನ್ನಿತ್ತು ಸ್ವಾಗತಿಸಿ ಅಭಿನಂದಿಸಿದರು.
ಇದನ್ನೂ ಓದಿ:ಚೆಕ್ಗೆ ನಕಲಿ ಸಹಿ ಬಳಸಿ 2.50 ಕೋಟಿ ರೂ. ವಂಚಿಸಲೆತ್ನಿಸಿದ ಇಬ್ಬರ ಬಂಧನ
ಎಸ್. ಎಂ. ಶೆಟ್ಟಿ ಅವರು ಸಮಾಜದ ಮೇಲೆ ಅತ್ಯಂತ ಪ್ರೀತಿ-ವಿಶ್ವಾಸ ದಿಂದ ಅನೇಕ ಕೊಡುಗೆಗಳನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕಾರಣ ಕರ್ತರಾದವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಮುಂದಿನ ದಿನಗಳಲ್ಲಿ ತನ್ನ ಅಪೂರ್ವ ಕೊಡುಗೆಗಳನ್ನು ನೀಡಿ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ಹಾಕಿಕೊಂಡಿರುವ ಸಮಾಜ ಕಲ್ಯಾಣ ಯೋಜನೆಯ ಸಫಲತೆಗೆ ಬೆನ್ನೆಲುಬಾಗಿ ನಿಲ್ಲುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಕೋಶಾಧಿಕಾರಿ ಉಳೂ¤ರು ಮೋಹನದಾಸ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ