ಒಗ್ಗಟ್ಟಿನ ಮೂಲಕ ಸಂಘಟನೆ ಜತೆ ಸಮಾಜ ಬೆಳೆಯುತ್ತದೆ


Team Udayavani, Nov 13, 2019, 5:36 PM IST

mumbai-tdy-1

ಪುಣೆ, ನ. 12: ಜಾತಿ, ಭಾಷೆ, ಧರ್ಮ ಯಾವುದೇ ಇದ್ದರು ಕೂಡಾ ಅದರದ್ದೇ ಆದಂತಹ ಸಂಸ್ಕೃತಿಯ ಜತೆಯಲ್ಲಿ ಕೂಡಿಕೊಂಡಿರುತ್ತದೆ. ನಮ್ಮ ಸಂಸ್ಕೃತಿ ದೇಶದಲ್ಲಿಯೆ ಶ್ರೀಮಂತಿಕೆಯನ್ನು ಪಡೆದಿದೆ. ಪಾರಂಪರಿಕ ಕುಲ ಪದ್ಧತಿಯೊಂದಿಗೆ ಸಂಸ್ಕೃತಿಯನ್ನು ಬೆಳೆಸಬೇಕು. ಒಂದು ಸಮಾಜಕ್ಕೆ ಅದರದ್ದೇ ಆದಂತಹ ಮೂಲವಾದ ಚರಿತ್ರೆಯಿದೆ. ಸಂಘಟನೆ ಎಂಬುವುದು ಒಗ್ಗಟ್ಟಿನ ವೇದಿಕೆ ನಿರ್ಮಿಸುತ್ತದೆ.

ಇಂತಹ ವೇದಿಕೆ ನಿರ್ಮಾಣಕ್ಕೆ ಧಾರ್ಮಿಕತೆಯ ಸ್ಪರ್ಶ ಇದ್ದರೆ ಮತ್ತಷ್ಟು ಮೆರುಗು ಬರುತ್ತದೆ. ಸಂಘಟನೆಗಳಲ್ಲಿ ಭೇದ-ಭಾವ ಇರಬಾರದು. ಕೇವಲ ಒಗ್ಗಟ್ಟೆ ಸಮಾಜದ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ನಾಡಿನ ಸಂಸ್ಕೃತಿಯಲ್ಲಿ, ಅಚಾರ ವಿಚಾರಗಳಲ್ಲಿ ಬಹಳ ವಿಶಿಷ್ಟತೆಯಿದೆ. ದೇವಾರಾಧನೆ, ನಾಗರಾಧನೆ, ದೈವರಾಧನೆಗೆ ಎಲ್ಲಾ ಜಾತೀಯ ಬಾಂಧವರು ಮಹತ್ವವನ್ನು ಕೊಡುತ್ತಾರೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿಯ ಧಾರ್ಮಿಕತೆಯ ಸೆಳೆತ. ನಮ್ಮ ಕುಲಾಲ ಬಾಂಧವರು ಸಂಘಟನೆಯೊಂದಿಗೆ ಧಾರ್ಮಿಕತೆಯನ್ನು ಜೋಡಿಸಿ ಅ ಮೂಲಕ ಕಾರ್ಯಗೈದರೆ ಮತ್ತಷ್ಟು ಬಲಿಷ್ಠರಾಗಬಲ್ಲವು ಎಂದು ಮಂಗಳೂರು ಕುಲಶೇಖರದ ಶ್ರೀ ವೀರ ನಾರಾಯಣ ದೇವಸ್ಥಾನದ ಆಡಳಿತ ಟ್ರಸ್ಟಿ ಪುರುಷೋತ್ತಮ್‌ ಕುಲಾಲ್‌ ಕಲ್ಭಾವಿ ನುಡಿದರು.

ನ. 10ರಂದು ಕೇತ್ಕರ್‌ರೋಡ್‌ ಶ್ಯಾಮ್‌ ರಾವ್‌ ಕಲ್ಮಾಡಿ ಕನ್ನಡ ಹೈಸ್ಕೂಲ್‌ನ ಸಭಾಭವನದಲ್ಲಿ ನಡೆದ ಪುಣೆ ಕುಲಾಲ ಸಂಘದ 41ನೇ ಮಹಾಸಭೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಕುಲಾಲ ಸಮಾಜದಲ್ಲಿ ಎಲ್ಲರು ವಿದ್ಯಾವಂತರೆ. ಪ್ರತಿ ಮನೆಯಲ್ಲೂ ಉನ್ನತ ವ್ಯಾಸಂಗ ಮಾಡಿ ಉತ್ತಮ ವಿದ್ಯಾವಂತರು ಇದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ನಾವು ಮತ್ತಷ್ಟು ಮುಂದೆ ಬಂದರೆ ಸಮಾಜಕ್ಕೆ ಸಹಕಾರಿಯಾಗುತ್ತದೆ. ಪ್ರತಿಯೊಬ್ಬರು ಸ್ವಸಮಾಜದ ಸಂಘಟನೆಯೊಂದಿಗೆ ಬೆರೆತು ಸಮಾಜ ಸೇವೆಯಲ್ಲಿಯೂ ಕೈಜೋಡಿಸಬೇಕು. ಪುಣೆ ಕುಲಾಲ ಸಂಘವು ತನ್ನ 50 ವರ್ಷದ ಸಮಯದಲ್ಲಿ ತನ್ನದೇ ಅದಂತಹ ಸ್ವಂತ ಕಟ್ಟಡದಲ್ಲಿ ಭವನ ನಿರ್ಮಿಸಿ ಅದರಲ್ಲಿಯೇ ಸುವರ್ಣ ಮಹೋತ್ಸವ ಆಚರಿಸುವಂತಾಗಬೇಕು ಎಂದು ನುಡಿದರು.

ನಮ್ಮ ಕುಲಾಲ ಸಂಘದ ಇವರೆಗಿನ ಬೆಳವಣಿಗೆಯಲ್ಲಿ ಮಾಜಿ ಅಧ್ಯಕ್ಷರುಗಳ ಪರಿಶ್ರಮವಿದೆ. ಹಾಗೂ ಸಂಘದ ಕಾರ್ಯ ಯೋಜನೆಗಳಲ್ಲಿ ಸಮಾಜ ಸೇವಾ ಕಾರ್ಯಗಳಲ್ಲಿ ಪದಾಧಿಕಾರಿಗಳಂತೆ ತೆರೆಯ ಮರೆಯಲ್ಲಿ ಕಾರ್ಯಗೈಯುವ ಸದಸ್ಯ ಬಾಂಧವರ ಕೊಡುಗೆ ಶ್ಲಾಘನೀಯ. ನಮ್ಮ ಸಮಾಜದ ಬಾಂದವರು ತಮ್ಮ ಮನೆಯಲ್ಲಿ ಮಕ್ಕಳಿಗೆ ಸಂಸ್ಕೃತಿಯೊಂದಿಗೆ ನಮ್ಮ ಸಮಾಜದ ಮಹತ್ವವನ್ನು ತಿಳಿಸಬೇಕು. ಸಮಾಜದ ಬಾಂಧವರಿಗಾಗಿ ಇರುವ ಸಂಸ್ಥೆ ತಮ್ಮದೇ ಎಂಬ ಭಾವನೆ ನಮ್ಮಲ್ಲಿರಬೇಕು. ಮಕ್ಕಳಿಗೆ ಶಿಕ್ಷಣದ ಜತೆಯಲ್ಲಿ ಧಾರ್ಮಿಕತೆಯೊಂದಿಗೆ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುವ ಧ್ಯೇಯ ಮಕ್ಕಳಿಗೆ ತಿಳಿಯಪಡಿಸಬೇಕು. ಸಂಘದ ಚುಕ್ಕಾಣಿ ಯಾರೇ ಹಿಡಿದರು ತಮ್ಮೆಲ್ಲರ ಸಹಕಾರ ವರ್ಷದಿಂದ ವರ್ಷಕ್ಕೆ ಹೆಚ್ಚಾಗಿ ಸಿಕ್ಕಿ ಸಂಘಕ್ಕೆ ಭದ್ರ ಬುನಾದಿಯನ್ನು ಹಾಕುವ ಸಂಕಲ್ಪವನ್ನು ನಾವೆಲ್ಲರೂ ಮಾಡಬೇಕು. ಇವರೆಗಿನ ತಮ್ಮೆಲ್ಲರ ಸಹಕಾರಕ್ಕೆ ದನ್ಯವಾದಗಳು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಲಾಲ ಸಂಘ ಪುಣೆ ಇದರ ಅಧ್ಯಕ್ಷ ಹರೀಶ್‌ ಕುಲಾಲ್‌ ಮುಂಡ್ಕೂರು ನುಡಿದರು.

ಪುಣೆ ಕುಲಾಲ ಸಂಘದ ಅದ್ಯಕ್ಷರಾದ ಹರೀಶ್‌ ಕುಲಾಲ್‌ ಅವರ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಗೌರವ ಅತಿಥಿಗಳಾಗಿ ಕಾತ್ರಜ್‌ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘ, ಬಿಲ್ಲವ ಸಂಘ ಪುಣೆ ಇದರ ಮಾಜಿ ಅಧ್ಯಕ್ಷ ಶೇಖರ್‌ ಟಿ. ಪೂಜಾರಿ, ಮುಂಬಯಿ ಕುಲಾಲ ಸಂಘದ ಅಧ್ಯಕ್ಷರಾದ ದೇವದಾಸ್‌ ಕುಲಾಲ್‌, ಜ್ಯೋತಿ ಕೋ. ಆಪರೇಟಿವ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷ ಗಿರೀಶ್‌ ಸಾಲ್ಯಾನ್‌, ಮುಂಬಯಿ ಕುಲಾಲ್‌ ಸಂಘದ ಉಪಾಧ್ಯಕ್ಷ ರಾಘು ಮೂಲ್ಯ, ಸಂಘದ ಉಪಾಧ್ಯಕ್ಷ ದೊಡ್ಡಣ್ಣ ಮೂಲ್ಯ, ಗೌರವ ಕಾರ್ಯದರ್ಶಿ ನವೀನ್‌ ಬಂಟ್ವಾಳ್‌, ಕೋಶಾಧಿಕಾರಿ ವಾಸು ಕುಲಾಲ್‌, ಹಿರಿಯ ಸಲಹೆಗಾರರಾದ ರಮೇಶ್‌ ಕೊಡ್ಮನ್ಕರ್‌, ಕುಟ್ಟಿ ಮೂಲ್ಯ, ಸದಾಶಿವ ಮೂಲ್ಯ, ಸುರೇಂದ್ರ ಮೂಲ್ಯ, ದಾಮೋದರ ಮೂಲ್ಯ, ಮನೋಜ್‌ ಸಾಲ್ಯಾನ್‌, ನಾಗೇಶ್‌ ಕುಲಾಲ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ, ಶಾರದಾ ಮೂಲ್ಯ, ಉಪಾಧ್ಯಕ್ಷೆ ಯಶೋದಾ ಮೂಲ್ಯ, ಜಯಂತಿ ಮೂಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿ-ಗಣ್ಯರನ್ನು ಪುಣೆ ಶ್ರೀ ಅಯ್ಯಪ್ಪ ಯಕ್ಷಗಾನ ಮಂಡಳಿಯ ಸದಸ್ಯರು ಯಕ್ಷಗಾನ ಶೈಲಿಯಲ್ಲಿ ಸ್ವಾಗತಿಸಿದರು. ಅತಿಥಿ-ಗಣ್ಯರು ಹಾಗೂ ಸಂಘದ ಪದಾಧಿಕಾರಿಗಳು ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ಪುರುಷೋತ್ತಮ ಕುಲಾಲ್‌ ಕಲ್ಭಾವಿ ಮತ್ತು ಶೇಖರ್‌ ಟಿ. ಪೂಜಾರಿ ಅವರನ್ನು ಸಂಘದ ಅಧ್ಯಕ್ಷರಾದ ಹಾರೀಶ್‌ ಕುಲಾಲ್‌ ಅವರು ಸಮ್ಮಾನಿಸಿದರು. ವೇದಿಕೆಯಲ್ಲಿದ್ದ ಗಣ್ಯರು ಮತ್ತು ಪದಾಧಿಕಾರಿಗಳನ್ನು ಸಂಘದ ಸದಸ್ಯರು ಗೌರವಿಸಿದರು. ಈ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗು ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು. ಸರಸ್ವತಿ ಸಿ. ಕುಲಾಲ್‌ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು.

ಮಹಿಳಾ ವಿಭಾಗದ ಅನಿತಾ ಕೊಡ್ಮನ್ಕರ್‌ ಸಂಘದ ವಾರ್ಷಿಕ ವರದಿಯನ್ನು ವಾಚಿಸಿದರು. ಕೋಶಾಧಿಕಾರಿ ವಾಸು ಕುಲಾಲ್‌ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ ಅನುಮೋದನೆ ಪಡೆದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಮಾಜದ ಮಕ್ಕಳಿಂದ ನೃತ್ಯ ವೈವಿಧ್ಯ, ದೀರಜ್‌ ವರ್ಕಾಡಿ ಇವರಿಂದ ರಸ ಮಂಜರಿ, ಮನ್ವಿತ್‌ ಕುಲಾಲ್‌ ಇವರಿಂದ ಬಾಕ್ಸಿಂಗ್‌ ಹಾಗೂ ಫ್ರೆಂಡ್ಸ್‌ ಮಂಗಳೂರು, ಪ್ರವೀಣ್‌ ಕೊಡಕ್ಕಲ್‌ ಮತ್ತು ರಂಜನ್‌ ಬೋಳಾರ್‌ ಸಾರಥ್ಯದಲ್ಲಿ ತೆಲಿಕೆ ಬಾಯಿ ನಿಲಿಕೆ ಹಾಸ್ಯ ಕಾರ್ಯಕ್ರಮ ನಡೆಯಿತು. ಸಂಘದ ಪ್ರಮುಖರಾದ ಸುಂದರ ಮೂಲ್ಯ, ಅನಿಲ್‌ ಕುಲಾಲ್‌, ಕಾರ್ತಿಕ್‌ ಕುಲಾಲ್‌, ಭಾಗ್ಯಶ್ರೀ ಮೂಲ್ಯ, ರುತುಜಾ ಕುಲಾಲ್‌, ಸರಸ್ವತಿ ಕುಲಾಲ್‌, ಅನಿತಾ ಕೊಡ್ಮನ್ಕರ್‌ ಮತ್ತು ಸಂಘದ ಸದಸ್ಯರು, ಮಹಿಳಾ ಸದಸ್ಯರು ಸಹಕರಿಸಿದರು. ಸರಸ್ವತಿ ಸಿ. ಕುಲಾಲ್‌, ಅನಿತಾ ಕೊಡ್ಮನ್ಕರ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

 –ಚಿತ್ರ-ವರದಿ: ಹರೀಶ್‌ ಮೂಡಬಿದ್ರೆ ಪುಣೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.